ಸತ್ಯವಾಕ್ಯಕೆ ತಪ್ಪಿ ನಡೆಯದ ಪುಣ್ಯಕೋಟಿಯ ಕತೆಯಿದು
ಜನಪದರ ದೈತ್ಯ ಪ್ರತಿಭೆಗೆ ‘ಗೋವಿನ ಹಾಡು’ ಉತ್ತಮ ನಿದರ್ಶನ. ಯಾವ ಶಿಷ್ಟ ಕಾವ್ಯಕ್ಕೂ ಸೆಡ್ಡು ಹೊಡೆದು ನಿಲ್ಲಬಲ್ಲ ಸತ್ವದ ಈ ಕವಿತೆ ಬದುಕಿನ ಮೌಲ್ಯಗಳ ಕುರಿತು ಹೇಳುತ್ತದೆ. ಮಹಾಭಾರತ/ರಾಮಾಯಣಗಳಂಥ ಮಾಹಾಕಾವ್ಯಗಳು ದೀರ್ಘವಾಗಿ ಹೇಳುವುದನ್ನು, ‘ಗೋವಿನ ಹಾಡು’ ಸರಳವಾಗಿ ಹೇಳುತ್ತದೆ. ಆ ದೃಷ್ಟಿಯಿಂದ ‘ಗೋವಿನ ಹಾಡು’ ಜನ ಸಾಮಾನ್ಯರ ಭಗವದ್ಗೀತೆ.
- ಗೋವಿನ ಹಾಡು

ಮೆರೆಯುತಿಹ ಕರ್ನಾಟ ದೇಶದೊ
ಳಿರುವ ಕಾಳಿಂಗನೆಂಬ ಗೊಲ್ಲನ
ಪರಿಯನೆಂತು ಪೇಳ್ವೆನೊ
ಗೊಲ್ಲ ದೊಡ್ಡಿಯಲಿರುವ ಪಶುಗಳ
ಎಲ್ಲ ಬೆಟ್ಟದ ಮೇಲೆ ಮೇಯುತ
ಹುಲ್ಲುವೊಳ್ಳೆ ನೀರ್ಗಳಿಂದಲೆ
ಅಲ್ಲಿ ಮೆರೆದವರಣ್ಯದಿ
ಎಳೆಯ ಮಾವಿನ ಮರದ ಕೆಳಗೆ
ಕೊಳಲನೂದುತ ಗೊಲ್ಲ ಗೌಡನು
ಬಳಸಿ ನಿಂದ ತುರುಗಳನ್ನು
ಬಳಿಗೆ ಕರೆದನು ಹರುಷದಿ
ಗಂಗೆ ಬಾರೆ ಗೌರಿ ಬಾರೆ
ತುಂಗಭದ್ರೆ ತಾಯಿ ಬಾರೆ
ಪುಣ್ಯಕೋಟಿ ನೀನು ಬಾರೆ
ಎಂದು ಗೊಲ್ಲನು ಕರೆದನು
ಗೊಲ್ಲ ಕರೆದಾ ದನಿಯ ಕೇಳಿ
ಎಲ್ಲ ಹಸುಗಳು ಬಂದು ನಿಂದು
ಚೆಲ್ಲಿ ಸೂಸಿ ಹಾಲು ಕರೆಯಲು
ಅಲ್ಲಿ ತುಂಬಿತು ಬಿಂದಿಗೆ
ಹಬ್ಬಿದಾಮಲೆ ಮಧ್ಯದೊಳಗೆ
ಅರ್ಭುತಾನೆಂದೆಂಬ ವ್ಯಾಘ್ರನು
ಅಬ್ಬರಿಸಿ ಹಸಿಹಸಿದು ಬೆಟ್ಟದ
ಕಿಬ್ಬಿಯಾಳು ತಾನಿದ್ದನು
ಸಿಡಿದು ರೋಷದಿ ಗುಡುಗುತಾ ಹುಲಿ
ಘುಡುಘುಡಿಸಿ ಭೋರಿಡುತವ್ಯಾಘ್ರನು
ತುಡುಕಿ ಎರಗಿದ ರಭಸ ಕೇಳಿ
ಓಡಿಹೋದವು ಹಸುಗಳು
ತನ್ನ ಮಗನಾ ಪಡೆದ ಪಶುವು
ತನ್ನ ಕಂದನ ನೆನೆದುಕೊಂಡು
ಪುಣ್ಯಕೋಟಿಯೆಂಬ ಹಸುವು
ಚೆಂದದಿಂದ ತಾ ಬರುತಿರೆ
ಇಂದೆನಗೆ ಆಹಾರ ಸಿಕ್ಕಿತು
ಎಂದು ಬೇಗನೆ ದುಷ್ಟ ವ್ಯಾಘ್ರನು
ಬಂದು ಬಳಸಿ ಅಡ್ಡಗಟ್ಟಿ
ನಿಂದನಾ ಹುಲಿರಾಯನು
ಮೇಲೆ ಬಿದ್ದು ನಿನ್ನನೀಗಲೆ
ಬೀಳಹೊಯ್ವೆನು ನಿನ್ನ ಹೊಟ್ಟೆಯ
ಸೀಳಿಬಿಡುವೆನು ಎನುತ ಕೋಪದಿ
ಖೂಳವ್ಯಾಘ್ರನು ಕೂಗಲು
ಒಂದು ಬಿನ್ನಹ ಹುಲಿಯೆ ಕೇಳು
ಕಂದನಿರುವನು ದೊಡ್ಡಿಯಾಳಗೆ
ಒಂದು ನಿಮಿಷದಿ ಮೊಲೆಯ ಕೊಟ್ಟು
ಬಂದು ಸೇರುವೆನಿಲ್ಲಿಗೆ
ಹಸಿದವೇಳೆಗೆ ಸಿಕ್ಕಿದೊಡವೆಯ
ವಶವ ಮಾಡದೆ ಬಿಡಲು ನೀನು
ನುಸುಳಿ ಹೋಗುವೆ ಮತ್ತೆ ಬರುವೆಯ
ಹುಸಿಯ ನುಡಿಯುವೆನೆಂದಿತು
ಸತ್ಯವೆ ನಮ್ಮ ತಾಯಿ ತಂದೆ
ಸತ್ಯವೆ ನಮ್ಮ ಬಂಧು ಬಳಗ
ಸತ್ಯವಾಕ್ಯಕೆ ತಪ್ಪಿ ನಡೆದರೆ
ಮೆಚ್ಚನಾ ಪರಮಾತ್ಮನುಕೊಂದು ತಿನ್ನುವೆನೆಂಬ ಹುಲಿಗೆ
ಚಂದದಿಂದ ಭಾಷೆಕೊಟ್ಟು
ಕಂದ ನಿನ್ನನು ನೋಡಿ ಪೋಗುವೆ
ನೆಂದು ಬಂದಿತು ದೊಡ್ಡಿಗೆ
ಅಮ್ಮ ನೀನು ಸಾಯಲೇಕೆ
ನಮ್ಮ ತಬ್ಬಲಿ ಮಾಡಲೇಕೆ
ಸುಮ್ಮನಿಲ್ಲಿಯೆ ನಿಲ್ಲು ಎಂದು
ಅಮ್ಮನಿಗೆ ಕರು ಹೇಳಿತು
ಆರ ಮೊಲೆಯನು ಕುಡಿಯಲಮ್ಮ
ಆರ ಬಳಿಯಲಿ ಮಲಗಲಮ್ಮ
ಆರ ಸೇರಿ ಬದುಕಲಮ್ಮ
ಆರು ನನಗೆ ಹಿತವರು
ಕೊಟ್ಟ ಭಾಷೆಯ ತಪ್ಪಲಾರೆನು
ಕೆಟ್ಟ ಯೋಚನೆ ಮಾಡಲಾರೆನು
ನಿಷ್ಠೆಯಿಂದಲಿ ಪೋಪೆನಲ್ಲಿಗೆ
ಕಟ್ಟ ಕಡೆಗಿದು ಖಂಡಿತಾ
ಅಮ್ಮಗಳಿರ ಅಕ್ಕಗಳಿರ
ಎನ್ನ ತಾಯಾಡಹುಟ್ಟುಗಳಿರಾ
ಕಂದ ನಿಮ್ಮವನೆಂದು ಕಾಣಿರಿ
ತಬ್ಬಲಿಯನೀ ಕರುವನೂ
ಮುಂದೆ ಬಂದರೆ ಹಾಯಬೇಡಿ
ಹಿಂದೆ ಬಂದರೆ ವೊದೆಯಬೇಡಿ
ಕಂದ ನಿಮ್ಮವನೆಂದು ಕಾಣಿರಿ
ತಬ್ಬಲಿಯನೀ ಕರುವನೂ
ತಬ್ಬಲಿಯು ನೀನಾದೆ ಮಗನೆ
ಹೆಬ್ಬುಲಿಯ ಬಾಯನ್ನು ಹೊಗುವೆನು
ಇಬ್ಬರಾ ಋಣ ತೀರಿತೆಂದು
ತಬ್ಬಿಕೊಂಡಿತು ಕಂದನಾ
ಗೋವು ಸ್ನಾನವ ಮಾಡಿಕೊಂಡು
ಗವಿಯಬಾಗಿಲ ಸೇರಿನಿಂತು
ಸಾವಕಾಶವ ಮಾಡದಂತೆ
ತವಕದಲಿ ಹುಲಿಗೆಂದಿತು
ಖಂಡವಿದೆಕೋ ಮಾಂಸವಿದೆಕೋ
ಗುಂಡಿಗೆಯ ಬಿಸಿರಕ್ತವಿದೆಕೋ
ಚಂಡವ್ಯಾಘ್ರನೆ ನೀನಿದೆಲ್ಲವ
ನುಂಡು ಸಂತಸದಿಂದಿರು
ಪುಣ್ಯಕೋಟಿಯ ಮಾತಕೇಳಿ
ಕಣ್ಣನೀರನು ಸುರಿಸಿ ನೊಂದೂ
ಕನ್ನೆಯಿವಳನು ಕೊಂದು ತಿಂದರೆ
ಮೆಚ್ಚನಾ ಪರಮಾತ್ಮನೂ
ಎನ್ನವೊಡಹುಟ್ಟಿದಕ್ಕ ನೀನು
ನಿನ್ನ ಕೊಂದು ಏನ ಪಡೆವೆನು
ಅನ್ನೆಕಾರಿ ನಾನು ಎನುತಲಿ
ತನ್ನ ಮನದೊಳು ನೊಂದಿತು
ಮೂರುಮೂರ್ತಿಗೆ ಕೈಯಮುಗಿದು
ಸೇರಿ ಎಂಟುದಿಕ್ಕು ನೋಡಿ
ಹಾರಿ ಆಕಾಶಕ್ಕೆ ನೆಗೆದು
ಮೀರಿ ಪ್ರಾಣವ ಬಿಟ್ಟಿತೂ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications