ಆಷಾಢದ ಗಾಳಿಗೆ ಮೈಯೊಡ್ಡಿದ ಕವಿತೆ

ಆಷಾಢದ ಗಾಳಿಯೇ?
ನನಗೆ ಋತುಮಾನಗಳ ಸ್ಪಷ್ಟ ಕಲ್ಪನೆಯಿಲ್ಲ.
ಸಿಂಹಾಸನ ಉರುಳಿದಾಗ
ಶ್ರಾವಣ ಎಂದೂ
ದೇವಾಲಯ ನಡುಗಿದಾಗ
ಮಾರ್ಗಶಿರ ಎಂದೂ
ಕವಿತೆಯನ್ನೂ ಎಂದೂ ಓದದ
ಶ್ರೀಮಂತನಿಗೆ ಹೊಟ್ಟೆನೋವು ಬಂದಾಗ
ಸುಗ್ಗಿಯೆಂದೂ ಸಂಭ್ರಮಿಸಿದವರು ನಾವು.
ಮೊನ್ನೆ ಮಳೆಗಾಲದಲ್ಲಿ
ನಮ್ಮೂರ ಗುಡಿಯ
ಗರುಡಗಂಭಕ್ಕೆ ಸಿಡಿಲು ಬಡಿಯಿತು.
ಒಣ ಮರದ ಕಂಬ ಅಲ್ಲಾಡಲಿಲ್ಲ.
ದೇವರುಗಳ ರಾಜ್ಯದಲ್ಲಿ
ತಿರುಕರೇ ಎಲ್ಲಾ.
ಇದ್ದವರೂ ಬೇಡುವರು, ಇಲ್ಲದವರೂ.
ಇದ್ದವರಿಗೆ ದೇವರು ನೀಡುವರು.
ಇಲ್ಲದವರು ನಾಳೆಗಾಗಿ ಕಾಯುವರು.
ಭತ್ತವೊಂದು ಬಿತ್ತವಾಗಿ
ಬಿತ್ತಿದ್ದು ತೆನೆಯಾಗಿ ಮತ್ತೆ ಭತ್ತವಾಗಿ
ಹೊಟ್ಟು ಕಳಚಿಕೊಂಡು ಹೊಟ್ಟೆಗೆ ಹಿಟ್ಟಾಗುವ
ಪವಾಡಕ್ಕೆ ನಾವು ಕಾಯುತ್ತಾ ಕೂತೆವು.
ದೇವರ ಮುಂದಿಟ್ಟ ನೈವೇದ್ಯಕ್ಕೆ
ಒಂದು ದಳ ಶ್ರೀತುಲಸಿ
ಬಿಂದು ಗಂಗೋದಕ ಸಾಕು
ಪರಮಾತ್ಮನ ಮುಟ್ಟುವುದಕ್ಕೆ.
ಹೊರಗಡೆ ಬೀಸುತ್ತಿರುವುದು
ಆಷಾಢದ ಗಾಳಿಯೇ.
ಎಂದೂ ಕವಿತೆಯನ್ನೇ ಓದದ
ಶ್ರೀಮಂತರು ಸುಖವಾಗಿದ್ದಾರೆ.
ಕವಿತೆಯೆಂದರೆ ಏನೆಂದು ಅರಿಯದ
ಬಡವನೂ ಸುಖಿ.
ಕವಿತೆ ಹೆಣ್ಣು, ಪೃಥಿವಿ, ಆಕಾಶ, ಸೂರ್ಯ
ಹೋರಾಟ, ಕೆಂಡದ ಮಳೆ, ಗಾಢಪ್ರೇಮ
ಅವ್ವನ ಹಣೆಯ ಸುಕ್ಕು,
ತಂಗಿ ಕಳಕೊಂಡ ಯೌವನ,
ಸಿರಿಯಜ್ಜಿನ ಕಂಠ, ತಿಮ್ಮಕ್ಕನ ಸಾಲುಮರ
ಎಂದುಕೊಂಡು
ಹಗಲು ಬೆಳಕಾರುತ್ತಿದೆ.
ಹೊರಗೆ ಬೀಸಿದ್ದು
ಆಷಾಢದ
ಗಾಳಿಯೇ!
-
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ












Click it and Unblock the Notifications