ಕೆಎಸ್ ನ ನೆನಪಿನಲ್ಲೊಂದು ಗೀತ ಸಾಹಿತ್ಯ

ರಚನೆ :ಕೆ ಎಸ್ ನರಸಿಂಹಸ್ವಾಮಿ
ಕವನ ಸಂಕಲನ: ಸಂಜೆ ಹಾಡು.
ಎಲ್ಲಿ ಕತ್ತಲೆಯಿತ್ತೊ ಅಲ್ಲಿ ತನ್ನಿರಿ ಬೆಳಕ
ಹಸಿದ ಹೊಟ್ಟೆಯ ಮೇಲೆ ಬೆಳ್ದಿಂಗಳನು ಚೆಲ್ಲಿ
ಮುಂಬರಿವ ನಮಗೆ ಶುಭವನ್ನು ತರಲಿ;
ಮಲಗಿದರೆ ಕನಸು, ಎದ್ದರೆ ಪಯಣ : ಹೀಗಿದೆ ಬದುಕು
ಹಾದಿಯುದ್ದಕು ಹೂವ ಚಲ್ಲುತಿರಲಿ.
ತುಟಿ ಒಣದವರ ಹಾಡನ್ನು ಕೇಳುವಿರೇನು ?
ಆದರೂ ಹಾಡು ಬರುವುದು ಸಂಜೆಯೊಳಗಾಗಿ
ಕನಸಿನ ಪರಂಪರೆಯ ನೆಯ್ದು ;
ಹಾದಿಬೀದಿಗಳಲ್ಲಿ ಬತ್ತಲೆ ಮಗು ಅತ್ತು
ಸಂಜೆಯಾಯಿತು ಎಂಬ ಚಿಂತನೆಯಲಿ.
ಕೆರೆ ಬತ್ತಿದಾಗ ಕಣ್ಣಲ್ಲಿ ನೀರು ಬರುವುದು
ರೊಕ್ಕವನು ಕೊಟ್ಟು ಕೊಳ್ಳುವ ಸರಕೆ ಸಂತೋಷ ?
ಸಂಗೀತಕ್ಕೆ ಬೇಕು ಶ್ರುತಿ, ಲಯ, ಆಲಾಪನೆ
ಹಸಿವ ಹಾಡುವುದೆಂತು, ತಾಳವೆಲ್ಲಿವೆ ಅದಕೆ ?
ಬೀದಿ ದೀಪದ ಕೆಳಗೆ ಸತ್ತ ನಾಯಿಯ ಸುತ್ತ
ಹತ್ತಾರು ಮಕ್ಕಳು ಮರಿ ;
ಬೀದಿನಲ್ಲಿಯ ತುಟಿಗೆ ಭೃಂಗ ಮುತ್ತಿಕ್ಕುವುದು.
ಕುಡಿವ ನೀರಿಗೆ ಸಹಿತ ಕಷ್ಟವಾಗಿರುವಾಗ
ಯಾವ ರಾಗದಿ ಹಾಡಿದರೆ ಕೊಡ ತುಂಬುವುದು ?
ಬಾಯಿ ತುಂಬುವ ತನಕ ಹಾಡು ತುಂಬುವುದಿಲ್ಲ.
ದೇಗುಲ ಬಾಗಿಲಲಿ ಮಂತ್ರಾಕ್ಷತೆಯ ಚೆಲ್ಲಿ
ಹೊರಟು ಹೋಗಿದ್ದಾರೆ ನಂಬುವ ಜನ;
ಧಾತು - ಈಶ್ವರಗಳಲಿ ಕ್ಷಾಮ ಬಂದಿತ್ತೆಂದು
ಅಜ್ಜಯ್ಯ ಹಾಡುವನು ಮರಿಮಗನಿಗೆ.
ಈಗ ಎಲ್ಲೆಲ್ಲು ಹಾಹಾಕಾರವೆದ್ದಿಹುದು,
ಈ ಅಶಾಂತಿಯೇ ನಿಮಗೆ ಎಲ್ಲ ಹಾಡು.
ಯಾವ ಹಾಡನು ನೀವು ಕೇಳಬಯಸುತ್ತೀರಿ,
ಹಾಡು ಕೇಳುವುದಷ್ಟೆ ಸಂತೋಷವೆ ?
ಹಾಡು, ಗೋಡೆಗೆ ಒರಗು, ಕಣ್ಣು ಮುಚ್ಚಿಕೊ
ಆಗ ಬರುವುದು ಬುದ್ದಿ!
ಕೆಲವರಿಗೆ ಹಾಡು ಬೇಕಂತೆ, ಕೇಳದ ಒಡನೆ
ನಿದ್ದೆ ಬರಬೇಕಂತೆ! ಅದು ಎಲ್ಲಿ ಸಿಕ್ಕುವುದು ?
ಬಾಂದಳದ ತನಕ ಕ್ಯೂ ಬೆಳೆದಿರುವುದು,
ತಂತಿಗಳ ಕಿತ್ತ ತಂಬೂರಿಯಾಯಿತು ಹಾಡು!
ನೊಂದ ಜೀವಕ್ಕೆ ಬೇಕಾದ್ದು ಸಿರಿಹಾಡು. ಇಂಪಾದ ಹಾಡು
ಚೆಲುವು ಸೂಸುವ ಹಾಡು, ಭಾವಪೂರ್ಣ ಹಾಡು;
ದುರ್ಭಿಕ್ಷದಲಿ ನಾವದನು ಪಡೆಯುವುದು ಹೇಗೆ ?
ಯಾರೊ ಅತ್ತಂತಾಯ್ತು ಹಾಡು ಮುಗಿದು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications