ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಂಜುಳಾ ಕವನ : ’ಕಾಲ’ ಕೂಡಿ ಬಂದಾಗ!

By Prasad
|
Google Oneindia Kannada News

Manjula Babaladi
ಮನಸಿನ, ಕನಸಿನ ಹಸಿ-ಬಿಸಿ ಮಣ್ಣು
ಆಳದಿ ಹುದುಗಿದ
ಭಾವ ಬೀಜಗಳು
ಕೊಡುವವರ್ಯಾರೋ ಬೆಳಕು, ನೀರು
ಉಸಿರಾಗುವ ತವಕ,
ಹಸಿರಾಗುವ ತನಕ,
ಬಸಿರಿನ ಪುಳಕವ ಹೊತ್ತು ಕಾಯುವರ್ಯಾರು?!

ಕತ್ತಲ ಮಡುವಲೇ ಮನೆಯನು ಮಾಡಿ
ಗಾಳಿಗೆ, ಬೆಳಕಿಗೆ ತಡ-ತಡಕಾಡಿ
ಆಂತರ್ಯದ ತುಮುಲದ
ಅರ್ಥ ಜಾಲಾಡಿ
ಕುಡಿಯೊಡೆಯಲು ಮತ್ತೆ-ಮತ್ತೆ ಹೆಣಗಾಡಿ...
ಇವುಗಳ ಇಲ್ಲಿಗೆ ತಂದವರ್ಯಾರು..?!
ಸೋತವರ್ಯಾರು? ಗೆದ್ದವರ್ಯಾರು?!

ದಿನಗಳೆದಂತೆ ಮಾಗುವ ಮನಸು
ಕತ್ತಲ ಮುಸುಕನು ಭೇದಿಸಿ ಬೆಳೆಯುವ ಕನಸು
ಮೆಲ್ಲನೆ ನುಸುಳಿದೆ ಅರ್ಥದ ಬೆಳಕು
ಜೊತೆಯಲೆ ನಗುತಿದೆ ಅನು'ಭಾವ'ದ ಚಿಮುಕು

'ಇಂದು'
ಭಾವ ಬೀಜಗಳು
ಹಸಿರಾಗುವ ಸಮಯ
'ಕಾಲ' ಕೂಡಿ ಬಂದಾಗಲೇ
ಹೊಸ - ಬದುಕಿನ ಉದಯ!

English summary
The arrival of new life. Kannada poem by Manjula Babaladi, Bangalore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X