ಬಕಾಸುರನ ಸಂತೃಪ್ತಿ; ನೀತಿ ಕತೆ
ಒಂದು ಉರಿನಲ್ಲಿ ಒಬ್ಬ ಯುವಕನಿದ್ದ. ಅವನಿಗೆ ಅಗಾಧವಾದ ಹಸಿವಿನ ರೋಗವಿತ್ತು. ಎಷ್ಟು ತಿಂದರೂ ತೃಪ್ತಿ ಇಲ್ಲ. ತಳವಿಲ್ಲದ ಬಾವಿಯಂತಹ ಹೊಟ್ಟೆ, ಎಷ್ಟು ತಿಂದರೂ ಇಂಗದ ಹಸಿವು! ಮನೆ ಮದ್ದಾಯಿತು, ಆಲೋಪತಿ, ಹೋಮಿಯೋಪತಿ, ನಾಟಿ ಔಷಧಿ ಎಲ್ಲಾ ಪ್ರಯತ್ನಿಸಿದರು, ಹಲವು ದೇವರಿಗೆ ಹರಕೆ ಹೊತ್ತರು. ಯಾವುದೂ ಫಲ ನೀಡಲಿಲ್ಲ. ಅವನಿಗೆ ಆಹಾರ ಹೊಂದಿಸುವುದೇ ಒಂದು ಸಮಸ್ಯೆಯಾಯಿತು. ಕೊನೆಗೆ ಅವನ ತಂದೆ ತಾಯಿ, ಅವನ ಬಂಧು ಬಳಗ ಎಲ್ಲಾ ಕೈ ಚೆಲ್ಲಿದರು!
ಈಗಿನ ಕಾಲದವರಂತಲ್ಲ, ಆಗಿನ ಕಾಲದ ಜನ. ಅವನ ಊರಿನವರು ಯುವಕನ ಕುಟುಂಬಕ್ಕೆ ತುಂಬಾ ಸಹಾಯ ಮಾಡಿದರು. ಕೊನೆಕೊನೆಗೆ ಇದು ಊರಿನವಗೂ ಸಮಸ್ಯೆಗಯಾಗತೊಡಗಿತು. ಇಡಡೀ ಊರಿನಲ್ಲಿ ಆಹಾರದ ಕೊರತೆ ಕಂಡುಬಂತು. ಊರವರು ಅಸಮಧಾನ ಸೂಚಿಸುವ ಮೊದಲೇ ಅವನ ತಂದೆತಾಯಿ ಅವನನ್ನು ಊರಿಂದ ಹೊರಕಳಿಸುವ ವಿಚಾರ ಮಾಡಿದರು. ಎಲ್ಲೋ ದೂರದ ಆಶಾಭಾವನೆ ಮತ್ತು ಕರುಳಿನ ಸಂಕಟ ಇಷ್ಟು ದಿನ ಅವರನ್ನು ತಡೆಯುತಿತ್ತು. ಆದರೆ ಆಹಾರದ ಕೊರತೆ ಇಡೀ ಊರನ್ನೇ ವ್ಯಾಪಿಸಿದಾಗ ಅವರು ಗಟ್ಟಿ ನಿರ್ಧಾರ ತೆಗೆದುಕೊಳ್ಳಲೇ ಬೇಕಾಯಿತು.

ದೇವರ ದಯೆಯೋ ಅವರ ಪೂರ್ವ ಜನ್ಮದ ಪುಣ್ಯವೋ, ಸಮಯಕ್ಕೆ ಸರಿಯಾಗಿ ಆ ಊರಿಗೆ ಒಬ್ಬ ಸನ್ಯಾಸಿಯ ಅಗಮನವಾಯಿತು. ಅವರ ಸಾಧನೆ ಸಾರ್ಮಥ್ಯದ ಬಗ್ಗೆ, ಅವರಿಗಿರುವ ವಿಶೇಷ ಶಕ್ತಿ ಬಗ್ಗೆ ಅನೇಕ ದಂತಕತೆಗಳಿದ್ದವು. ಕೊನೆಯ ಪ್ರಯತ್ನವೆಂಬಂತೆ ಯುವಕನ ತಂದೆತಾಯಿ ಸನ್ಯಾಸಿಯ ಹತ್ತಿರ ಯುವಕನ ಸಮಸ್ಯೆಯನ್ನು ನಿವೇದಿಸಿಕೊಂಡರು.
ಸಮಸ್ಯೆಯನ್ನು ಆಲಿಸಿದ ಸನ್ಯಾಸಿ ಸಾವಧಾನದಿಂದ ಹೀಗೆಂದರು: "ಚಿಂತಿಸಬೇಡಿ, ಪರಿಹಾರವಿದೆ! ಈ ಯುವಕ ಇನ್ನು ಜೀವನ ಪೂರ್ತಿ ಒಬ್ಬನೆ ಕುಳಿತು ತಿನ್ನುವ ಹಾಗಿಲ್ಲ. ಪ್ರತಿಸಾರಿ ಊಟಕ್ಕೆ ಕುಳಿತಾಗ ನಾಲ್ಕು ಜನರೊಂದಿಗೆ ಹಂಚಿ ತಿನ್ನಬೇಕು. ಈ ನಿಯಮ ತಪ್ಪಿಸಿದರೆ ಮತ್ತೆ ಅಗಾಧವಾದ ಹಸಿವಿನ ರೋಗಕ್ಕೆ ಬಲಿಯಾಗುವ ಸಾಧ್ಯತೆಯಿದೆ."
ಸನ್ಯಾಸಿ ತೋರಿದ ಪರಿಹಾರದ ಬಗ್ಗೆ ಅನುಮಾನವಿದ್ದರೂ, ವಿಚಿತ್ರವೆನಿಸಿದರೂ, ಕೊನೆ ಪ್ರಯತ್ನವಾಗಿ ಅವರ ಸಲಹೆಯನ್ನು ಪಾಲಿಸಿತೊಡಗಿದರು. ಯುವಕನೂ ಸನ್ಯಾಸಿಗಳು ಹೇಳಿದ ಹಾಗೆ ಮಾಡಲು ತೊಡಗಿದ. ಆಶ್ಚರ್ಯವೆಂಬಂತೆ ಯುವಕನ ಅಗಾಧವಾದ ಹಸಿವಿನ ರೋಗ ಪರಿಹಾರವಾಯಿತು. ಯುವಕ ಸ್ವಲ್ಪವೇ ತಿಂದರೂ ಸಂತೃಪ್ತಿಯನ್ನು ಅನುಭವಿಸಿದ.
ಊರಿನವರೆಲ್ಲ ಹರ್ಷದಿಂದ ಸನ್ಯಾಸಿಯನ್ನು ಕೊಂಡಾಡಿದರು. ತಮ್ಮ ಆಶೀರ್ವಾದ ವಚನ ಸಭೆಯಲ್ಲಿ ಸನ್ಯಾಸಿಗಳು ಹೀಗೆ ಹೇಳಿದರು "ಅತಿ ಶ್ರೀಮಂತಿಕೆಯ ಅಥವಾ ಅತಿ ಹಣದಾಹವಿರುವವರು ಕೂಡ ಈ ಪರಿಹಾರವನ್ನು ಬಳಸಿ ಜೀವನದಲ್ಲಿ ಸಂತೃಪ್ತಿ ಹೊಂದಬಹುದು!" ಆ ಹೊತ್ತಿಗೆ ಕಾರ್ಲ್ ಮಾಕ್ಸ್ ಇನ್ನೂ ಹುಟ್ಟಿರಲಿಲ್ಲ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications