ಪೂರ್ವಾಗ್ರಹ ಪೀಡಿತನಿಗೆ ಸತ್ಯ ಎಂದೂ ಗೋಚರಿಸದು

ಒಮ್ಮೆ ಗೌರವಾನ್ವಿತ ಮಾಜಿಸ್ಟೇಟ್ ಆದ ಮುಲ್ಲಾ ನಸ್ರುದ್ದೀನ್ ತನ್ನ ಮೊದಲ ಮೊಕದ್ದಮೆಯ ತೀರ್ಪು ನೀಡಲು ಸಜ್ಜಾಗಿ ನ್ಯಾಯಪೀಠವನ್ನು ಅಲಂಕರಿಸಿ ಕೂತಿದ್ದ. ಒಂದು ಕಡೆ ಫಿರ್ಯಾದುಗಳ ವಾದವನ್ನು ಆಸಕ್ತಿಯಿಂದ ತುಂಬಾ ಏಕಾಗ್ರತೆಯಿಂದ ಆಲಿಸಿದ ನಸ್ರುದ್ದೀನ್, ಕೋರ್ಟ್ ನಲ್ಲಿ ನೆರದಿದ್ದವರನ್ನು ಉದ್ದೇಶಿಸಿ ಇಂತೆಂದನು:" ಇನ್ನು 5 ನಿಮಿಷಗಳಲ್ಲಿ ನಾನು ಈ ಕೇಸಿಗೆ ಸಮರ್ಪಕವಾದ ತೀರ್ಪನ್ನು ನೀಡುತ್ತೇನೆ"
ಆದರೆ, ಮುಲ್ಲಾನ ಈ ಮಾತುಗಳನ್ನು ಕೇಳಿ ಕೋರ್ಟ್ ಆವರಣದಲ್ಲಿ ಗುಸುಗುಸು ಶುರುವಾಯಿತು. ಕೊಂಚ ಧೈರ್ಯ ಮಾಡಿದ ಕ್ಲರ್ಕ್ ಒಬ್ಬ ಮುಲ್ಲಾಗ ಕಿವಿಯಲ್ಲಿ ಈ ರೀತಿ ಪಿಸುಗುಟ್ಟಿದ" ಇದೇನು ಮಾಡುತ್ತಿದ್ದೀರಿ ಮಹಾಸ್ವಾಮಿ? ಇನ್ನೊಂದು ಪಕ್ಷದವರ ವಾದವನ್ನು ಕೇಳದೆ ತೀರ್ಪು ನೀಡಲು ಹೇಗೆ ಸಾಧ್ಯ?"
ಅದಕ್ಕೆ ಉತ್ತರಿಸಿದ ಮುಲ್ಲಾ "ಈಗ ನನ್ನನ್ನು ಗೊಂದಲಕ್ಕೆ ದೂಡಬೇಕು. ನನ್ನ ಮನಸ್ಸು ತೀರ್ಪನ್ನು ಯೋಚಿಸಿ ಆಗಿದೆ. ಘೋಷಿಸುವುದೊಂದೇ ಬಾಕಿ. ನಾನು ಇನ್ನೊಂದು ಪಾರ್ಟಿ ವಾದ ಕೇಳಿದರೆ, ಮತ್ತೆ ಮನಸ್ಸಿನಲ್ಲಿ ಗೊಂದಲವುಂಟಾಗುತ್ತದೆ!" ಗೊಂದಲದಲ್ಲಿ ಇರುವ ಮನಸ್ಸು ಸರಿಯಾದ ನಿರ್ಣಯ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಬಿಟ್ಟನು.
ಸೂಫಿ ಕಥೆಗಳಲ್ಲಿ ಮುಲ್ಲಾ ನಸ್ರುದ್ದೀನನ ಪ್ರಸಂಗವನ್ನು ಉದಾಹರಿಸುತ್ತಾ ಕಥೆಗಳು ಬರೀ ಓದಿ, ನಕ್ಕು, ಮರೆಯುವುದಕ್ಕಷ್ಟೇ ಅಲ್ಲ. ಪ್ರತಿ ಕಥೆಯಲ್ಲೂ ನೀತಿಗಳಿವೆ ಎಂದು ಓಶೋ ಹೇಳಿದ್ದಾರೆ. ಪೂರ್ವಾಗ್ರಹ ಪೀಡಿತರ ಮನಸ್ಸು ಮುಲ್ಲಾ ನಸ್ರುದ್ದೀನನಂತೆ ವರ್ತಿಸುತ್ತದೆ. ತನ್ನದೇ ಆದ ಚೌಕಟ್ಟು ಹಾಕಿಕೊಂಡು ಅದರ ಸುತ್ತವೇ ಸುತ್ತುತ್ತಿರುತ್ತದೆ. ಇದರಿಂದ ಸತ್ಯದ ನಿಜ ವರ್ಣ ಗೋಚರಿಸುವುದು ಅಸಾಧ್ಯ. ಪೂರ್ವಾಗ್ರಹ ಪೀಡಿತರಾಗುವುದನ್ನು ಬಿಟ್ಟು, ಎಲ್ಲವನ್ನೂ ಮುಕ್ತವಾಗಿ ನೋಡುತ್ತಾ, ಮುಕ್ತವಾಗಿ ಆಲೋಚಿಸುವುದು ಒಳ್ಳೆಯದು ಎಂಬ ಸಂದೇಶವನ್ನು ತನ್ನ ಶಿಷ್ಯರಿಗೆ ಓಶೋ ಈ ರೀತಿ ವಿಷದಪಡಿಸಿದರು.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications