ಶಾಂತಾ ನಾಗರಾಜ್ ನೀಳ್ಗತೆ : ತಮಾಗುಚಿ

ಸಿಂಗಪುರದ ಕನ್ನಡಿಗರ ಮನೆಯಲ್ಲಿ ಅದೂ ಮಕ್ಕಳಿರುವ ಮನೆಯಲ್ಲಿ ನಿತ್ಯದ ಬೆಳಗಿನ ಒತ್ತಡವಿದು. ಕೆಲವೇ ನಿಮಿಷಗಳಲ್ಲಿ ಮುಂಬಾಗಿಲನ್ನು ಧಪ್ಪನೆ ಎಳೆದುಕೊಂಡು ಮೂವರೂ ಲಿಫ಼್ಟ್ ಕಡೆಗೆ ಹೋದದ್ದು ರಾಮು ಅವರಿಗೆ ತಿಳಿಯಿತು. ಇನ್ನು ರಾಮು ಮದ್ಯಾಹ್ನ ಎರಡೂವರೆಯವರೆಗೆ ಈ ಹದಿನೈದನೇ ಮಹಡಿಮನೆಯಲ್ಲಿ ಏಕಾಂಗಿ! ಸುಧಾ ಎಂಟೂವರೆಗೆ ಬರುವ ಬಸ್ನಲ್ಲಿ ಮಕ್ಕಳನ್ನು ಅಕ್ಷರಶಃ ತಳ್ಳಿ ಕೂಡಿಸುತ್ತಾಳೆ. ಬೆಳಿಗ್ಗೆ ಆರೂವರೆಯಿಂದ "ಏಳ್ರೋ ಏಳ್ರೋ ಏ ಆದೀ ನೀನು ದೊಡ್ಡವನಲ್ಲವೇನೋ ಮೊದಲು ಏಳೋ" ಎಂದೆಲ್ಲಾ ಸಮಾಧಾನವಾಗಿಯೇ ಉದಯರಾಗ ಪ್ರಾರಂಭಿಸಿ ಎಂಟರ ಹೊತ್ತಿಗೆ ಅವಳ ಧ್ವನಿ ತಾರಕಕ್ಕೇರಿರುತ್ತದೆ. "ಗುದ್ದ್ಬಿಡ್ತೀನಿ, ಹೊಡೆದ್ರೆ ಹೆಂಗಿರತ್ತೆ ಗೊತ್ತಾ? ನಾಲಕ್ ಬಾರಿಸಿದಾಂದ್ರೆ ಕೆನ್ನೆ ಮೇಲೆ ಬಾಸುಂಡೆ ಬರತ್ತೆ" ಎಂದೆಲ್ಲಾ ಬೆದರಿಸುವ ಮಂತ್ರಗಳು ಉದುರುತ್ತಿದ್ದರೂ ಮಕ್ಕಳು ಅದಕ್ಕೆ ಕೇರೇ ಮಾಡದೇ ಯಾಂತ್ರಿಕವಾಗಿ ತಮಗನಿಸಿದ್ದನ್ನೇ ಮಾಡುತ್ತಾರೆ. ಯಾಕೆಂದರೆ ಅವಳೆಂದೂ ಮಕ್ಕಳಿಗೆ ಹೊಡೆದೇ ಇಲ್ಲ!
ಸದ್ದೇ ಇಲ್ಲದ ಆ ಮನೆ ಬಿಕೋ ಎನ್ನುತ್ತಿದೆ. ರಾಮು ನಿಧಾನವಾಗಿ ಬಚ್ಚಲು ಮನೆಗೆ ಹೋಗಿ ಸ್ನಾನಕ್ಕೆ ತೊಡಗುತ್ತಾರೆ. ಬಿಸಿನೀರಿನ ಜೊತೆಗೆ ಅವರ ಕಣ್ಣೀರೂ ಬೆರೆತು ನೆಲದ ಟೈಲ್ಸ್ಲ್ಲಿ ಫಳಗುಟ್ಟುತ್ತದೆ. ಏನೆಲ್ಲಾ ಆಗಿಹೋಯಿತು ತಮ್ಮ ಬದುಕಲ್ಲಿ? ಕೇವಲ ಎರಡೂವರೆ ತಿಂಗಳ ಹಿಂದೆ ಐವತ್ತು ವರ್ಷ ನಗುನಗುತ್ತಾ ಜೊತೆಗೆ ಬಾಳಿದ ಹೆಂಡತಿ ಕೂತವಳು ಎದ್ದುಹೋಗುವ ಹಾಗೆ ಸಾವಿನಮನೆಗೆ ಹೋಗಿಯೇ ಬಿಡುತ್ತಾಳೆಂದು ಯಾರು ಊಹಿಸಿದ್ದರು? "ನೀನು ಹೀಗೆ ಮಾಡಬಾರದಿತ್ತು ರಾಜಿ" ಮನಸ್ಸು ಲೊಚಗುಡುತ್ತದೆ. ತಮಗೆ ಎಪ್ಪತ್ತೈದರ ಸಂಭ್ರಮ! ತಮ್ಮ ಮದುವೆಗೆ ಐವತ್ತರ ಸಂಭ್ರಮ! ತಮ್ಮ ಈ ಮಗ ಸೊಸೆ ಮೊಮ್ಮಕ್ಕಳು, ತಾವೇ ಸಾಕಿದ ಅಣ್ಣನ ಮಕ್ಕಳು ಸೊಸೆಯಂದಿರು, ಮೊಮ್ಮಕ್ಕಳು ಬೆಂಗಳೂರು ಹತ್ತಿರದ ಸೊಂಡೇಕೊಪ್ಪದ ತಮ್ಮ ಮನೆಯಲ್ಲಿ ಎಂಥಾ ಸಂಭ್ರಮದ ಸಮಾರಂಭ ನಡೆಸಿದರು. ಅದಾದ ಎರಡೇ ದಿನಕ್ಕೆ ರಾತ್ರಿ ಮಲಗಿದ ರಾಜಮ್ಮ ಬೆಳಿಗ್ಗೆ ಏಳಲೇ ಇಲ್ಲವೆಂದರೆ ಈ ಸಾವನ್ನು ಹೇಗೆ ಅರಗಿಸಿಕೊಳ್ಳಬೇಕು? ಜನರೆಲ್ಲಾ "ಆಹಾ ಮುತ್ತೈದೆ ಸಾವು, ಶರಣರ ಪುಣ್ಯ ಮರಣದಲ್ಲಿ, ಒಂದು ನರಳಲಿಲ್ಲ ಮಲಗಲಿಲ್ಲ ಎಂಥಾ ಪುಣ್ಯವಂತೆ" ಅಂತ ಹಾಡಿಹೊಗಳಿದ್ದರು. ಹಬ್ಬ ಮಾಡಿದ್ದರು. ನಮ್ಮ ಹಿಂದುಗಳೇ ಹಾಗೆ. ಬದುಕಿದರೂ ಹಬ್ಬ, ಸತ್ತರೂ ಹಬ್ಬ! "ನೀನೇನೋ ಸತ್ತು ಹಬ್ಬ ಮಾಡಿಸಿಕೊಂಡು ಎಲ್ಲರ ಮನಸ್ಸಿನಲ್ಲಿ ಖುಷಿಯಾಗಿ ಬದುಕಿಬಿಟ್ಟೆ ರಾಜಿ, ನಾನು ನೋಡು ಬದುಕಿದ್ದೂ ಈಗ ಸತ್ತಂತೆ."
ದೇವರ ಮುಂದೆ ಸೊಸೆ ಹಚ್ಚಿದ ದೀಪ ಢಾಳಾಗಿ ಉರಿಯುತ್ತಿತ್ತು. ಯಾಕೋ ಒಂದೇ ಮನಸ್ಸಿನಿಂದ ಕೈಮುಗಿಯುವುದೂ ಸಾಧ್ಯವಾಗಲಿಲ್ಲ. ಯಾಂತ್ರಿಕವಾಗಿ ಒಂದು ಸುತ್ತು ತಿರುಗಿ ನಮಸ್ಕಾರ ಮಾಡಿ ರೂಮಿಗೆ ಬಂದು ಬಟ್ಟೆ ಧರಿಸಿ ಡೈನಿಂಗ್ಟೇಬಲ್ಲಿಗೆ ಬಂದರು. ಒಂದು ತಟ್ಟೆಯಲ್ಲಿ ಬೆಳಿಗ್ಗೆ ಟೋಸ್ಟ್ ಮಾಡಿದ ಎರಡು ಬ್ರೆಡ್ ಸ್ಲೈಸ್ಗಳು ತಣ್ಣಗೆ ಕೊರೆಯುತ್ತಿದ್ದವು. ಅದಕ್ಕೊಂದು ತಟ್ಟೆ ಮುಚ್ಚುವುದನ್ನೂ ಸೊಸೆ ಮರೆತಿದ್ದಳು. ಪಕ್ಕದಲ್ಲೇ ಸಾಸ್ ಬಾಟಲ್ ಇತ್ತು. ಬ್ರೆಡ್ ತಿನ್ನುವುದಕ್ಕೆ ಅವರ ನಾಲಿಗೆ ಬಿಲ್ಕುಲ್ ಒಪ್ಪದೇ ಮುಷ್ಕರ ಹೂಡಿತು. ಮಧ್ಯಾಹ್ನದ ಊಟಕ್ಕೆ ಇವತ್ತು ಅದೇನು ಪಕ್ವಾನ ಸಿದ್ಧವಾಗಿದೆಯೋ ನೋಡೋಣವೆಂದು ಅಡುಗೆಮನೆಗೆ ಹೋದರು. ಗ್ಯಾಸ್ ಒಲೆಯಮೇಲೆ ದೊಡ್ಡ ಬಾಂಡಲೆಯಲ್ಲಿ ಅರ್ಧದಷ್ಟು ಬ್ರೆಡ್ ಉಪ್ಪಿಟ್ಟು ಇವರನ್ನೇ ನೋಡಿ ನಸುನಗುತ್ತಿರುವಂತೆ ಅನಿಸಿತು! ಸೂಜಿ ಚುಚ್ಚಿದ ಬೆಲೂನಿನಂತಾಗಿ ವಾಪಸ್ ರೂಮಿಗೆ ಮರಳಿದರು. ತಮ್ಮ ಮಂಚಕ್ಕೆ ಅಂಟಿಕೊಂಡಂತಿದ್ದ ಕಪಾಟಿನಲ್ಲಿದ್ದ ಬಿಸ್ಕತ್ ತೆಗೆದು ತಿಂದು ಬೆಳಿಗ್ಗೆ ಮಗ ತಂದಿಟ್ಟಿದ್ದ ಫ್ಲಾಸ್ಕಿನಿಂದ ಕಾಫಿಯನ್ನು ಅದರ ಮುಚ್ಚಳಕ್ಕೆ ಬಗ್ಗಿಸಿಕೊಂಡು ಕುಡಿದರು. ಅಲ್ಲಿಗೆ ಬೆಳಗಿನ ಬ್ರೇಕ್ಫಾಸ್ಟ್ನ ಋಣ ತೀರಿತು. (ಕಥೆ ಮುಂದುವರಿದಿದೆ...)
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications