ಕಥೆಗಾರ ಶಶಿ ತರೀಕೆರೆಗೆ ಛಂದ ಪುಸ್ತಕ ಬಹುಮಾನ
ಬೆಂಗಳೂರು, ಸೆಪ್ಟೆಂಬರ್ 11: ಕನ್ನಡ ಸಾಹಿತ್ಯದಲ್ಲಿ ಕಥೆಗಳಿಗಾಗಿ ನೀಡುವ ಪ್ರತಿಷ್ಠಿತ ಛಂದ ಪುಸ್ತಕದ ಬಹುಮಾನದ 2019ನೇ ಸಾಲಿನ ಗೌರವ ಕಥೆಗಾರ ಶಶಿ ತರೀಕೆರೆ ಅವರಿಗೆ ಒಲಿದಿದೆ. ಚಿಕ್ಕಮಗಳೂರಿನ ತರೀಕೆರೆಯವರಾದ ಶಶಿ ಅವರ ಕಥಾಸಂಕಲನದ ಹಸ್ತಪ್ರತಿಗೆ ಛಂದ ಬಹುಮಾನ ದೊರೆತಿದೆ ಎಂದು ಛಂದ ಪುಸ್ತಕದ ವಸುಧೇಂದ್ರ ಅವರು ತಿಳಿಸಿದ್ದಾರೆ.
ಪ್ರಸ್ತುತ ಇಸ್ರೋದಲ್ಲಿ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿರುವ ಶಶಿ ತರೀಕೆರೆ ಅವರು ಕವಿತೆ, ಕಥೆಯಂತಹ ಸಾಹಿತ್ಯ ಪ್ರಕಾರಗಳಲ್ಲದೆ ಕಿರುಚಿತ್ರಗಳ ನಿರ್ಮಾಣ ಮತ್ತು ನಿರ್ದೇಶನದಲ್ಲಿಯೂ ತೊಡಗಿಸಿಕೊಂಡಿದ್ದಾರೆ.
ಹಿರಿಯ ಕವಯತ್ರಿ ಲಲಿತಾ ಸಿದ್ಧಬಸವಯ್ಯ ಅವರು ತೀರ್ಪುಗಾರರಾಗಿದ್ದರು. ''ಛಂದ ಪುಸ್ತಕ ಹಸ್ತಪ್ರತಿ ಪ್ರಶಸ್ತಿಗೆ ಅಂತಿಮವಾಗಿ ಶ್ರೀ ಶಶಿ ತರೀಕೆರೆಯವರನ್ನು ಆಯ್ಕೆ ಮಾಡಿರುವೆ.

ಶಶಿ ತಮ್ಮ ಕತೆಗಳ ಮೂಲಕ ತೆರೆದಿಟ್ಟಿರುವ ಪ್ರಪಂಚ ಕನ್ನಡದ ಸಣ್ಣಕತೆಗಳ ಓದುಗರಿಗೆ ಹೆಚ್ಚು ಬಳಕೆಯಿಲ್ಲದ್ದು. ಕಾಮ ಕ್ರೋಧ ಲೋಭೇತ್ಯಾದಿಗಳನ್ನು ಅರಿಷಡ್ವರ್ಗ ಎನ್ನುತ್ತೇವೆ. ವಾಸ್ತವವಾಗಿ ಇವು ಅರಿಗಳಲ್ಲ. ಮಿತ್ರಷಡ್ವರ್ಗಗಳೆಂದು ನಾನು ಭಾವಿಸುವೆ. ಆಸೆ, ನಿರಾಸೆ, ಕೋಪ, ದುಗುಡ, ಸಡಗರಗಳಿಲ್ಲದ ಬದುಕನ್ನು ಯಾಕಾದರು ಬದುಕಬೇಕು? ಆಗ ನಾವೆಲ್ಲರೂ ಜಗದ್ಗುರುಗಳೇ ಆಗಿಬಿಡುತ್ತಿದ್ದೆವು. ಜಗತ್ತು ತಾನೇ ಎಷ್ಟು ಜಗದ್ಗುರುಗಳನ್ನು ಧರಿಸಬಲ್ಲುದು. ಈ ಮಿತ್ರ ಷಡ್ವರ್ಗಗಳ ಪರಿಣಾಮವನ್ನು ಕುರಿತೇ ಜಗತ್ತಿನ ಮೇಲಿರುವ ನಾವಷ್ಟೂ ಬರಹಗಾರರು ಬರೆಯುತ್ತಿರುವುದು. ಆದರೆ ನಾವು ಬಹುತೇಕರು ಹೀಗೆ ಬರೆಯುವಾಗ ಮಧ್ಯಮವರ್ಗದ ಮನೆ ಮನಗಳೊಳಗೇ ಸುತ್ತು ಹೊಡೆಯುತ್ತೇವೆ. ಶಶಿ ಈ ಸುತ್ತಿನಿಂದ ಆಚೆ ಬಂದಿದ್ದಾರೆ. ಅವರ ಕತೆಗಳು ಈ ಬಹುಮಾನಕ್ಕೆ ಅರ್ಹವಾಗಿವೆಯೆಂದು ನನ್ನ ಅನಿಸಿಕೆ.
ನನ್ನ ಮೇಲೆ "ಛಂದ" ಇಟ್ಟಿರುವ ನಂಬುಗೆಗೆ ಆಭಾರಿ'' ಎಂದು ಲಲಿತಾ ಸಿದ್ಧಬಸವಯ್ಯ ಅವರು ಅಭಿಪ್ರಾಯ ತಿಳಿಸಿದ್ದಾರೆ.
ಛಂದ ಪುಸ್ತಕವು ಈ ಪುಸ್ತಕವನ್ನು ಪ್ರಕಟಿಸಲಿದ್ದು, ಕಥೆಗಾರರು 30,000 ರೂ. ಬಹುಮಾನದ ಮೊತ್ತ, ಪ್ರಶಸ್ತಿ ಪತ್ರ ಮತ್ತು ಪಾರಿತೋಷಕವನ್ನು ಪಡೆಯಲಿದ್ದಾರೆ. ಅಕ್ಟೋಬರ್ 20ರಂದು ಬೆಂಗಳೂರಿನಲ್ಲಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಲಿದೆ.
ಶಶಿ ತರೀಕೆರೆ ಅವರು 'ನೀಲಿ ಕನಸು' ಎಂಬ ಕಿರುಚಿತ್ರ ತಯಾರಿಸಿದ್ದರು. ಅವರ 'ಬಹುವಚನ' ಎಂಬ ಮತ್ತೊಂದು ಕಿರುಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಅವರ 'ಡುಮಿಂಗ','ಜಾದೂಗಾರನ ನಿದ್ದೆ', 'ಪ್ರಣಯ ರಾಜ ಲೇಡೀಸ್ ಟೈಲರ್', 'ಮಲಿನ', 'ಶುಗರ್ ಫ್ರೀ', 'ಜನರಲ್ ವಾರ್ಡ್', 'ಜಾಗರಣೆ', 'ನಕರಾ ಬಾಬು ಮತ್ತು ಸಂಗಡಿಗರು' ಮುಂತಾದವು ಅವರ ಜನಪ್ರಿಯ ಕಥೆಗಳಾಗಿವೆ.
ಛಂದ ಬಹುಮಾನದ ಅಂತಿಮ ಸುತ್ತಿನಲ್ಲಿ ಚೈತ್ರಿಕಾ ಹೆಗಡೆ ಕಂಚೀಮನೆ, ಪ್ರಜ್ಞಾ ಮತ್ತಿಹಳ್ಳಿ, ಪ್ರವೀಣ ಕುಮಾರ್, ಛಾಯಾ ಭಟ್ ಕೂಡ ಸ್ಪರ್ಧೆಯಲ್ಲಿದ್ದರು.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications