ಕಥೆಗಾರ ಶಶಿ ತರೀಕೆರೆಗೆ ಛಂದ ಪುಸ್ತಕ ಬಹುಮಾನ
ಬೆಂಗಳೂರು, ಸೆಪ್ಟೆಂಬರ್ 11: ಕನ್ನಡ ಸಾಹಿತ್ಯದಲ್ಲಿ ಕಥೆಗಳಿಗಾಗಿ ನೀಡುವ ಪ್ರತಿಷ್ಠಿತ ಛಂದ ಪುಸ್ತಕದ ಬಹುಮಾನದ 2019ನೇ ಸಾಲಿನ ಗೌರವ ಕಥೆಗಾರ ಶಶಿ ತರೀಕೆರೆ ಅವರಿಗೆ ಒಲಿದಿದೆ. ಚಿಕ್ಕಮಗಳೂರಿನ ತರೀಕೆರೆಯವರಾದ ಶಶಿ ಅವರ ಕಥಾಸಂಕಲನದ ಹಸ್ತಪ್ರತಿಗೆ ಛಂದ ಬಹುಮಾನ ದೊರೆತಿದೆ ಎಂದು ಛಂದ ಪುಸ್ತಕದ ವಸುಧೇಂದ್ರ ಅವರು ತಿಳಿಸಿದ್ದಾರೆ.
ಪ್ರಸ್ತುತ ಇಸ್ರೋದಲ್ಲಿ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿರುವ ಶಶಿ ತರೀಕೆರೆ ಅವರು ಕವಿತೆ, ಕಥೆಯಂತಹ ಸಾಹಿತ್ಯ ಪ್ರಕಾರಗಳಲ್ಲದೆ ಕಿರುಚಿತ್ರಗಳ ನಿರ್ಮಾಣ ಮತ್ತು ನಿರ್ದೇಶನದಲ್ಲಿಯೂ ತೊಡಗಿಸಿಕೊಂಡಿದ್ದಾರೆ.
ಹಿರಿಯ ಕವಯತ್ರಿ ಲಲಿತಾ ಸಿದ್ಧಬಸವಯ್ಯ ಅವರು ತೀರ್ಪುಗಾರರಾಗಿದ್ದರು. ''ಛಂದ ಪುಸ್ತಕ ಹಸ್ತಪ್ರತಿ ಪ್ರಶಸ್ತಿಗೆ ಅಂತಿಮವಾಗಿ ಶ್ರೀ ಶಶಿ ತರೀಕೆರೆಯವರನ್ನು ಆಯ್ಕೆ ಮಾಡಿರುವೆ.

ಶಶಿ ತಮ್ಮ ಕತೆಗಳ ಮೂಲಕ ತೆರೆದಿಟ್ಟಿರುವ ಪ್ರಪಂಚ ಕನ್ನಡದ ಸಣ್ಣಕತೆಗಳ ಓದುಗರಿಗೆ ಹೆಚ್ಚು ಬಳಕೆಯಿಲ್ಲದ್ದು. ಕಾಮ ಕ್ರೋಧ ಲೋಭೇತ್ಯಾದಿಗಳನ್ನು ಅರಿಷಡ್ವರ್ಗ ಎನ್ನುತ್ತೇವೆ. ವಾಸ್ತವವಾಗಿ ಇವು ಅರಿಗಳಲ್ಲ. ಮಿತ್ರಷಡ್ವರ್ಗಗಳೆಂದು ನಾನು ಭಾವಿಸುವೆ. ಆಸೆ, ನಿರಾಸೆ, ಕೋಪ, ದುಗುಡ, ಸಡಗರಗಳಿಲ್ಲದ ಬದುಕನ್ನು ಯಾಕಾದರು ಬದುಕಬೇಕು? ಆಗ ನಾವೆಲ್ಲರೂ ಜಗದ್ಗುರುಗಳೇ ಆಗಿಬಿಡುತ್ತಿದ್ದೆವು. ಜಗತ್ತು ತಾನೇ ಎಷ್ಟು ಜಗದ್ಗುರುಗಳನ್ನು ಧರಿಸಬಲ್ಲುದು. ಈ ಮಿತ್ರ ಷಡ್ವರ್ಗಗಳ ಪರಿಣಾಮವನ್ನು ಕುರಿತೇ ಜಗತ್ತಿನ ಮೇಲಿರುವ ನಾವಷ್ಟೂ ಬರಹಗಾರರು ಬರೆಯುತ್ತಿರುವುದು. ಆದರೆ ನಾವು ಬಹುತೇಕರು ಹೀಗೆ ಬರೆಯುವಾಗ ಮಧ್ಯಮವರ್ಗದ ಮನೆ ಮನಗಳೊಳಗೇ ಸುತ್ತು ಹೊಡೆಯುತ್ತೇವೆ. ಶಶಿ ಈ ಸುತ್ತಿನಿಂದ ಆಚೆ ಬಂದಿದ್ದಾರೆ. ಅವರ ಕತೆಗಳು ಈ ಬಹುಮಾನಕ್ಕೆ ಅರ್ಹವಾಗಿವೆಯೆಂದು ನನ್ನ ಅನಿಸಿಕೆ.
ನನ್ನ ಮೇಲೆ "ಛಂದ" ಇಟ್ಟಿರುವ ನಂಬುಗೆಗೆ ಆಭಾರಿ'' ಎಂದು ಲಲಿತಾ ಸಿದ್ಧಬಸವಯ್ಯ ಅವರು ಅಭಿಪ್ರಾಯ ತಿಳಿಸಿದ್ದಾರೆ.
ಛಂದ ಪುಸ್ತಕವು ಈ ಪುಸ್ತಕವನ್ನು ಪ್ರಕಟಿಸಲಿದ್ದು, ಕಥೆಗಾರರು 30,000 ರೂ. ಬಹುಮಾನದ ಮೊತ್ತ, ಪ್ರಶಸ್ತಿ ಪತ್ರ ಮತ್ತು ಪಾರಿತೋಷಕವನ್ನು ಪಡೆಯಲಿದ್ದಾರೆ. ಅಕ್ಟೋಬರ್ 20ರಂದು ಬೆಂಗಳೂರಿನಲ್ಲಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಲಿದೆ.
ಶಶಿ ತರೀಕೆರೆ ಅವರು 'ನೀಲಿ ಕನಸು' ಎಂಬ ಕಿರುಚಿತ್ರ ತಯಾರಿಸಿದ್ದರು. ಅವರ 'ಬಹುವಚನ' ಎಂಬ ಮತ್ತೊಂದು ಕಿರುಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಅವರ 'ಡುಮಿಂಗ','ಜಾದೂಗಾರನ ನಿದ್ದೆ', 'ಪ್ರಣಯ ರಾಜ ಲೇಡೀಸ್ ಟೈಲರ್', 'ಮಲಿನ', 'ಶುಗರ್ ಫ್ರೀ', 'ಜನರಲ್ ವಾರ್ಡ್', 'ಜಾಗರಣೆ', 'ನಕರಾ ಬಾಬು ಮತ್ತು ಸಂಗಡಿಗರು' ಮುಂತಾದವು ಅವರ ಜನಪ್ರಿಯ ಕಥೆಗಳಾಗಿವೆ.
ಛಂದ ಬಹುಮಾನದ ಅಂತಿಮ ಸುತ್ತಿನಲ್ಲಿ ಚೈತ್ರಿಕಾ ಹೆಗಡೆ ಕಂಚೀಮನೆ, ಪ್ರಜ್ಞಾ ಮತ್ತಿಹಳ್ಳಿ, ಪ್ರವೀಣ ಕುಮಾರ್, ಛಾಯಾ ಭಟ್ ಕೂಡ ಸ್ಪರ್ಧೆಯಲ್ಲಿದ್ದರು.
-
ಡೂನ್ ಪುಸ್ತಕ ಉತ್ಸವದಲ್ಲಿ ಗರ್ವಾಲಿ- ಕುಮಾವೋನಿ ಸಾಹಿತ್ಯಕ್ಕೆ ಒತ್ತು: 26 ಕೃತಿಗಳ ಬಿಡುಗಡೆ -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ












Click it and Unblock the Notifications