Manipur violence: ಕೆಲ ಕ್ಷಣಗಳಲ್ಲೇ ಡಿಸಿ ಕಚೇರಿ ಧ್ವಂಸ, ವಾಹನಗಳು ಭಸ್ಮ, ಬಿಜೆಪಿ ಕಚೇರಿಗೆ ಬೆಂಕಿ- ವರದಿ, ವಿವರ
ಇಂಫಾಲ್, ಸೆಪ್ಟೆಂಬರ್ 28: ಇಬ್ಬರು ವಿದ್ಯಾರ್ಥಿಗಳ ಹತ್ಯೆ ಬೆಳಕಿಗೆ ಬಂದ ಬೆನ್ನಲ್ಲೇ ಮಣಿಪುರದ ರಾಜಧಾನಿ ಇಂಫಾಲದಲ್ಲಿ ವ್ಯಾಪಕ ಹಿಂಸಾಚಾರ ಭುಗಿಲೆದ್ದಿದೆ. ಉದ್ರಿಕ್ತರು ಸರ್ಕಾರಿ ಕಚೇರಿಗಳಿಗೆ ನುಗ್ಗಿ ದಾಂಧಲೆ ಮಾಡುತ್ತಿದ್ದಾರೆ. ನೋಡನೋಡುತ್ತಿದ್ದಂತೆಯೇ ವಾಹನಗಳು ಭಸ್ಮವಾಗುತ್ತಿವೆ. ಬಿಜೆಪಿ ಕಚೇರಿಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಲಾಗುತ್ತಿದೆ.
ಹಿಂಸಾತ್ಮಕ ಪ್ರತಿಭಟನೆಗಳು ಗುರುವಾರ ಮುಂಜಾನೆಯವರೆಗೂ ಮುಂದುವರೆದಿವೆ. ಇಂಫಾಲ್ ಪಶ್ಚಿಮದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯನ್ನು ಉದ್ರಿಕ್ತರ ಗುಂಪು ಧ್ವಂಸಗೊಳಿಸಿದೆ. ಇದೇ ಕಚೇರಿಯ ಮುಂದೆ ನಿಂತಿದ್ದ ನಾಲ್ಕು ಚಕ್ರದ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜುಲೈನಲ್ಲಿ ನಾಪತ್ತೆಯಾದ ಇಬ್ಬರು ವಿದ್ಯಾರ್ಥಿಗಳ ಶವಗಳ ಹೊಂದಿದ್ದ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಹಿಂಸಾಚಾರ ಭುಗಿಲೆದ್ದಿದೆ. ಈ ಬಾರಿ ವಿದ್ಯಾರ್ಥಿಗಳ ನೇತೃತ್ವದ ಪ್ರತಿಭಟನೆಯು ಹಿಂಸಾರೂಪ ಪಡೆದಿದೆ.
ಕಳೆದ ರಾತ್ರಿ, ಪ್ರತಿಭಟನಾಕಾರರು ಉರಿಪೋಕ್, ಯೈಸ್ಕುಲ್, ಸಗೋಲ್ಬಂಡ್ ಮತ್ತು ತೇರಾ ಪ್ರದೇಶಗಳಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ಘರ್ಷಣೆ ನಡೆಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಭದ್ರತಾ ಪಡೆಗಳು ಹಲವಾರು ಸುತ್ತಿನ ಅಶ್ರುವಾಯು ಶೆಲ್ಗಳನ್ನು ಹಾರಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭದ್ರತಾ ಪಡೆಗಳು ವಸತಿ ಪ್ರದೇಶಗಳಿಗೆ ಪ್ರವೇಶಿಸುವುದನ್ನು ತಡೆಯಲು ಪ್ರತಿಭಟನಾಕಾರರು ಸುಡುವ ಟೈರ್ಗಳು, ಬಂಡೆಗಳು ಮತ್ತು ಕಬ್ಬಿಣದ ಪೈಪ್ಗಳನ್ನು ರಸ್ತೆಗಳ ಎಸೆದಿದ್ದಾರೆ ಎಂದು ತಿಳಿದುಬಂದಿದೆ.

ಗುಂಪೊಂದು ಡಿಸಿ ಕಚೇರಿಯನ್ನು ಧ್ವಂಸಗೊಳಿಸಿತು ಮತ್ತು ಎರಡು ನಾಲ್ಕು ಚಕ್ರದ ವಾಹನಗಳಿಗೆ ಬೆಂಕಿ ಹಚ್ಚಿತು. ಸಿಆರ್ಪಿಎಫ್ ಸಿಬ್ಬಂದಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ ಎಂದು ವರದಿಯಾಗಿದೆ.
ಮಂಗಳವಾರದಿಂದ ಭುಗಿಲೆದ್ದು ಪ್ರತಿಭಟನೆಯಲ್ಲಿ 65 ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ. ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿದ್ದಂತೆ ಭದ್ರತಾ ಪಡೆಗಳು ಎರಡು ಜಿಲ್ಲೆಗಳಲ್ಲಿ ( ಇಂಫಾಲ್ ಪೂರ್ವ ಮತ್ತು ಪಶ್ಚಿಮ ) ಕರ್ಫ್ಯೂ ವಿಧಿಸಿವೆ.
ಇದೇ ವೇಳೆ, ತೌಬಲ್ ಜಿಲ್ಲೆಯ ಖೋಂಗ್ಜಾಮ್ನಲ್ಲಿರುವ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಮಣಿಪುರ ಪೊಲೀಸರು, ಜನರ ಗುಂಪೊಂದು ಪೊಲೀಸ್ ವಾಹನವನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿತು. ಪೊಲೀಸರ ಮೇಲೆ ಹಲ್ಲೆ ನಡೆಸಿ ಅವರ ಶಸ್ತ್ರಾಸ್ತ್ರಗಳನ್ನು ಕಸಿದುಕೊಂಡಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಂತಹ ಅಪರಾಧಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಕಿತ್ತುಕೊಂಡ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲು ಮತ್ತು ಆರೋಪಿಗಳ ಬಂಧನಕ್ಕಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿದ್ಯಾರ್ಥಿಗಳ ವಿರುದ್ಧ ಲಾಠಿ ಚಾರ್ಜ್, ಅಶ್ರುವಾಯು ಶೆಲ್ಗಳು ಮತ್ತು ರಬ್ಬರ್ ಬುಲೆಟ್ಗಳನ್ನು ಬಳಸಬೇಡಿ ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಭದ್ರತಾ ಪಡೆಗಳಿಗೆ ಒತ್ತಾಯಿಸಿದೆ.
ಮೇ 3 ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಪ್ರಾರಂಭವಾದಾಗಿನಿಂದ 180 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ.
ಮಣಿಪುರದ ಜನಸಂಖ್ಯೆಯ ಸುಮಾರು 53 ಪ್ರತಿಶತದಷ್ಟಿರುವ ಮೈತೈಗಳು ಇಂಫಾಲ್ ಕಣಿವೆಯಲ್ಲಿ ವಾಸಿಸುತ್ತಿದ್ದಾರೆ. ನಾಗಾಗಳು ಮತ್ತು ಕುಕಿಗಳು ಸೇರಿದಂತೆ ಬುಡಕಟ್ಟು ಜನಾಂಗದವರು ಶೇಕಡಾ 40 ರಷ್ಟಿದ್ದಾರೆ ಮತ್ತು ಹೆಚ್ಚಾಗಿ ಗುಡ್ಡಗಾಡು ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications