ಕಟೀಲು ಅರ್ಚಕರ ಹಾದಿರಂಪ ಬೀದಿರಂಪ
ಮಂಗಳೂರು : ಪುಣ್ಯ ಕ್ಷೇತ್ರ ಕಟೀಲುವಿನ ಶ್ರೀದುರ್ಗಾಪರಮೇಶ್ವರಿ ದೇವಾಲಯದ ಅರ್ಚಕರು ಜುಟ್ಟು - ಜನಿವಾರ ಹಿಡಿದು ಹೊಡೆದಾಡಲು ಬೀದಿಗಳಿದಾಗ ವಿಧಿಯಿಲ್ಲದೇ ಪೊಲೀಸರು ಲಾಠಿ ಪ್ರಹಾರ ನಡೆಸಿದರಂತೆ. ಇಲ್ಲಿನ ದೇವಸ್ಥಾನದ ಅರ್ಚಕರ ನಡುವೆ ಬಹಳ ದಿನಗಳಿಂದ ದ್ವೇಷ ಕುದಿಯುತ್ತಲೇ ಇದೆ. ಮೊನ್ನೆ ಈ ಜಗಳ ಕದನಕ್ಕೆ ತಿರುಗಿದೆ. ದುರ್ಗಾಪರಮೇಶ್ವರಿಯ ರಥೋತ್ಸವ ನಡೆಯುತ್ತಿದ್ದಾಗ ಹಾದಿರಂಪ ಬೀದಿ ರಂಪ ಶುರುವಾಯಿತು. ರಥೋತ್ಸವದಲ್ಲಿ ಸೇರಿದ್ದ ಜನರು ಇದನ್ನು ಕಂಡು ಉದ್ರಿಕ್ತರಾದರು, ಈ ಹಂತದಲ್ಲಿ ಪೊಲೀಸರು ಲಾಠಿ ಪ್ರಹಾರ ಮಾಡಿ ಗುಂಪನ್ನು ಚದುರಿಸಿದರು.
ಗಲಾಟೆ ಮಾಡಿದವರು ಯಾರೋ, ಲಾಠಿ ಏಟು ತಿಂದವರು ಯಾರೋ, ಆದರೂ ಪಾಪ ದುರ್ಗಾಪರಮೇಶ್ವರಿ ಇದನ್ನೆಲ್ಲ ನೋಡುತ್ತಾ ಕಲ್ಲಾಗಿಯೇ ಕುಳಿತಿದ್ದಳಂತೆ.
ಅರ್ಚಕರ ಜಗಳದಿಂದ ಕುಪಿತರಾದ ಭಕ್ತರು ಗುಂಪುಗೂಡಿ ಪ್ರತಿಭಟಿಸಿದಾಗ, ಜಾತ್ರೆಯಲ್ಲಿ ಅಹಿತಕರ ಘಟನೆಗಳು ನಡೆಯಬಾರದೆಂಬ ಮುನ್ನೆಚ್ಚರಿಕೆಯಿಂದ ಪೊಲೀಸರು ಲಾಠಿ ಪ್ರಹಾರ ಮಾಡಿದರೆಂದು ತಿಳಿದು ಬಂದಿದೆ.
ಕೆಲವು ತಿಂಗಳುಗಳಿಂದ ಈ ದೇವಾಲಯದ ಅಧಿಕಾರಕ್ಕಾಗಿ ಅರ್ಚಕರ ನಡುವೆ ಶೀತಲ ಸಮರ ನಡೆದೇ ಇದೆ.
-
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
Language Row: ಉತ್ತರ ಭಾರತದಲ್ಲಿ ಯಾಕೆ ತಮಿಳು - ಕನ್ನಡ ಇಲ್ಲ ಎಂದ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
ನಿಮ್ಮ ಮನೆಯ ಸೀಲಿಂಗ್ ಫ್ಯಾನ್ನಲ್ಲಿ ಧೂಳು ತುಂಬಿದೆಯೇ? ನಿಮಿಷಗಳಲ್ಲಿ ಸ್ವಚ್ಛಗೊಳಿಸಲು ಇಲ್ಲಿವೆ 'ಸೀಕ್ರೆಟ್' ಟಿಪ್ಸ್ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ












Click it and Unblock the Notifications