ವೀರಪ್ಪನ್ ನಿಂದ ರಾಜ್ ಅಪಹರಣ ಆಗಿದ್ದು ಹೀಗೆ...

ಬೆಂಗಳೂರು, ಜು. 31, 2000 : ಡಾ. ರಾಜ್ ಕುಮಾರ್ ಅವರು ಸಪತ್ನೀಕರಾಗಿ ನಾಲ್ಕು ದಿನ ಸಂತೋಷದಿಂದ ಕಾಲಕಳೆಯಲು ತಮಿಳುನಾಡಿನ ತಾಳವಾಡಿಯ ತೋಟದ ಮನೆಯಲ್ಲಿ ತಂಗಿದ್ದರು. ಭಾನುವಾರ ರಾತ್ರಿ 9.30ರಲ್ಲಿ ಊಟ ಮಾಡಿ ಡಾ. ರಾಜ್ ಅವರು ಟಿ.ವಿ ನೋಡುತ್ತಿದ್ದಾಗ, ಶಸ್ತ್ರಸಜ್ಜಿತರಾಗಿದ್ದ ಸುಮಾರು 12 ಮಂದಿ ವೀರಪ್ಪನ್ ಸಹಚರರು ಡಾ. ರಾಜ್ ಅವರ ತೋಟಮನೆಗೆ ಮುತ್ತಿಗೆ ಹಾಕಿದರು.
ಡಾ. ರಾಜ್ಕುಮಾರ್, ಅವರ ಅಳಿಯ ಎಸ್. ಎ. ಗೋವಿಂದರಾಜ್, ಡಾ. ರಾಜ್ ಅವರ ಸಂಬಂಧಿ ನಾಗೇಶ್ ಮತ್ತು ನಾಗಪ್ಪ ಎನ್ನುವವರನ್ನು ವೀರಪ್ಪನ್ ಸಹಚರರು ಅಪಹರಿಸಿದ್ದಾರೆ. ಈ ಅಪಹರಣದ ನೇತೃತ್ವವನ್ನು ಸ್ವತಃ ವೀರಪ್ಪನ್ನೇ ವಹಿಸಿದ್ದ. ಡಾ. ರಾಜ್ ಹಾಗೂ ಇತರರನ್ನು ತನ್ನ ವಶಕ್ಕೆ ತೆಗೆದುಕೊಂಡ ವೀರಪ್ಪನ್ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಅವರಿಗೆ ಕೊಡುವಂತೆ ತಿಳಿಸಿ ಆಡಿಯೋ ಕ್ಯಾಸೆಟ್ ಒಂದನ್ನು ಕಳುಹಿಸಿಕೊಟ್ಟ . ಈ ವಿವರಗಳನ್ನು ಕೃಷ್ಣ ಇಂದು ಬೆಳಗ್ಗೆ ಸುದ್ದಿಗಾರರಿಗೆ ತಿಳಿಸಿದರು.
ಶ್ರೀಮತಿ ಪಾರ್ವತಮ್ಮ ರಾಜ್ಕುಮಾರ್ ಅವರು ಈ ವಿಷಯವನ್ನು ಮುಖ್ಯಮಂತ್ರಿಗಳಿಗೆ ದೂರವಾಣಿಯಲ್ಲಿ ತಿಳಿಸಿದ ಕೂಡಲೇ ಮುಖ್ಯಮಂತ್ರಿಗಳು, ಗೃಹ ಸಚಿವರು, ಗೃಹ ಕಾರ್ಯದರ್ಶಿ, ರಾಜ್ಯದ ಪೊಲೀಸ್ ಮಹಾನಿರ್ದೇಶಕರೊಂದಿಗೆ ಸಮಾಲೋಚನೆ ನಡೆಸಿದರು.
ಸೋಮವಾರ ನಸುಕಿನಲ್ಲಿ ಅಂದರೆ ಸುಮಾರು 2 ಗಂಟೆ ಹೊತ್ತಿಗೆ ಪಾರ್ವತಮ್ಮ ಅವರು ವೀರಪ್ಪನ್ ಕೊಟ್ಟು ಕಳುಹಿಸಿದ್ದ ಕ್ಯಾಸೆಟ್ನೊಂದಿಗೆ ಮುಖ್ಯಮಂತ್ರಿಗಳ ನಿವಾಸ ತಲುಪಿದರು. ಅಲ್ಲಿ ನಡೆದ ಎಲ್ಲ ವಿವರಗಳನ್ನೂ ಮುಖ್ಯಮಂತ್ರಿಗಳಿಗೆ ಪಾರ್ವತಮ್ಮನವರು ತಿಳಿಸಿದರು. ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯ ಸಂದರ್ಭದಲ್ಲಿ ರಾಜ್ ಅವರ ಪುತ್ರರು, ಕುಟುಂಬವರ್ಗದವರೂ ಹಾಗೂ ಚಿನ್ನೇಗೌಡ ಹಾಜರಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ತಮಿಳು ನಾಡಿನ ಮುಖ್ಯಮಂತ್ರಿಗಳೊಂದಿಗೆ ಸಹ ಮಾತುಕತೆ ನಡೆಸಿದ್ದು, ವೀರಪ್ಪನ್ ಕಳುಹಿಸಿರುವ ಆಡಿಯೋ ಕ್ಯಾಸೆಟ್ ಹಿನ್ನೆಲೆಯಲ್ಲಿ ಮುಖತಃ ಮಾತುಕತೆ ನಡೆಸಲು ಚೆನ್ನೈಗೆ ಧಾವಿಸಿದ್ದಾರೆ. ಮುಖ್ಯಮಂತ್ರಿಗಳ ಸಂಗಡ ಡಾ. ರಾಜ್ ಅವರ ಇಬ್ಬರು ಪುತ್ರರು ಹಾಗೂ ಪಾರ್ವತಮ್ಮನವರೂ ಚೆನ್ನೈಗೆ ತೆರಳಿದ್ದಾರೆ.
ಅಮಾವಾಸ್ಯೆ ರಾತ್ರಿ ಅಂದುಕೊಂಡದ್ದು ಕಾಡುಗಳ್ಳ ಸಾಧಿಸಿದ್ದು ಹೀಗೆ...
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications