ವೀರಪ್ಪನ್ ನಿಂದ ರಾಜ್ ಅಪಹರಣ ಆಗಿದ್ದು ಹೀಗೆ...

ಬೆಂಗಳೂರು, ಜು. 31, 2000 : ಡಾ. ರಾಜ್ ಕುಮಾರ್ ಅವರು ಸಪತ್ನೀಕರಾಗಿ ನಾಲ್ಕು ದಿನ ಸಂತೋಷದಿಂದ ಕಾಲಕಳೆಯಲು ತಮಿಳುನಾಡಿನ ತಾಳವಾಡಿಯ ತೋಟದ ಮನೆಯಲ್ಲಿ ತಂಗಿದ್ದರು. ಭಾನುವಾರ ರಾತ್ರಿ 9.30ರಲ್ಲಿ ಊಟ ಮಾಡಿ ಡಾ. ರಾಜ್ ಅವರು ಟಿ.ವಿ ನೋಡುತ್ತಿದ್ದಾಗ, ಶಸ್ತ್ರಸಜ್ಜಿತರಾಗಿದ್ದ ಸುಮಾರು 12 ಮಂದಿ ವೀರಪ್ಪನ್ ಸಹಚರರು ಡಾ. ರಾಜ್ ಅವರ ತೋಟಮನೆಗೆ ಮುತ್ತಿಗೆ ಹಾಕಿದರು.
ಡಾ. ರಾಜ್ಕುಮಾರ್, ಅವರ ಅಳಿಯ ಎಸ್. ಎ. ಗೋವಿಂದರಾಜ್, ಡಾ. ರಾಜ್ ಅವರ ಸಂಬಂಧಿ ನಾಗೇಶ್ ಮತ್ತು ನಾಗಪ್ಪ ಎನ್ನುವವರನ್ನು ವೀರಪ್ಪನ್ ಸಹಚರರು ಅಪಹರಿಸಿದ್ದಾರೆ. ಈ ಅಪಹರಣದ ನೇತೃತ್ವವನ್ನು ಸ್ವತಃ ವೀರಪ್ಪನ್ನೇ ವಹಿಸಿದ್ದ. ಡಾ. ರಾಜ್ ಹಾಗೂ ಇತರರನ್ನು ತನ್ನ ವಶಕ್ಕೆ ತೆಗೆದುಕೊಂಡ ವೀರಪ್ಪನ್ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಅವರಿಗೆ ಕೊಡುವಂತೆ ತಿಳಿಸಿ ಆಡಿಯೋ ಕ್ಯಾಸೆಟ್ ಒಂದನ್ನು ಕಳುಹಿಸಿಕೊಟ್ಟ . ಈ ವಿವರಗಳನ್ನು ಕೃಷ್ಣ ಇಂದು ಬೆಳಗ್ಗೆ ಸುದ್ದಿಗಾರರಿಗೆ ತಿಳಿಸಿದರು.
ಶ್ರೀಮತಿ ಪಾರ್ವತಮ್ಮ ರಾಜ್ಕುಮಾರ್ ಅವರು ಈ ವಿಷಯವನ್ನು ಮುಖ್ಯಮಂತ್ರಿಗಳಿಗೆ ದೂರವಾಣಿಯಲ್ಲಿ ತಿಳಿಸಿದ ಕೂಡಲೇ ಮುಖ್ಯಮಂತ್ರಿಗಳು, ಗೃಹ ಸಚಿವರು, ಗೃಹ ಕಾರ್ಯದರ್ಶಿ, ರಾಜ್ಯದ ಪೊಲೀಸ್ ಮಹಾನಿರ್ದೇಶಕರೊಂದಿಗೆ ಸಮಾಲೋಚನೆ ನಡೆಸಿದರು.
ಸೋಮವಾರ ನಸುಕಿನಲ್ಲಿ ಅಂದರೆ ಸುಮಾರು 2 ಗಂಟೆ ಹೊತ್ತಿಗೆ ಪಾರ್ವತಮ್ಮ ಅವರು ವೀರಪ್ಪನ್ ಕೊಟ್ಟು ಕಳುಹಿಸಿದ್ದ ಕ್ಯಾಸೆಟ್ನೊಂದಿಗೆ ಮುಖ್ಯಮಂತ್ರಿಗಳ ನಿವಾಸ ತಲುಪಿದರು. ಅಲ್ಲಿ ನಡೆದ ಎಲ್ಲ ವಿವರಗಳನ್ನೂ ಮುಖ್ಯಮಂತ್ರಿಗಳಿಗೆ ಪಾರ್ವತಮ್ಮನವರು ತಿಳಿಸಿದರು. ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯ ಸಂದರ್ಭದಲ್ಲಿ ರಾಜ್ ಅವರ ಪುತ್ರರು, ಕುಟುಂಬವರ್ಗದವರೂ ಹಾಗೂ ಚಿನ್ನೇಗೌಡ ಹಾಜರಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ತಮಿಳು ನಾಡಿನ ಮುಖ್ಯಮಂತ್ರಿಗಳೊಂದಿಗೆ ಸಹ ಮಾತುಕತೆ ನಡೆಸಿದ್ದು, ವೀರಪ್ಪನ್ ಕಳುಹಿಸಿರುವ ಆಡಿಯೋ ಕ್ಯಾಸೆಟ್ ಹಿನ್ನೆಲೆಯಲ್ಲಿ ಮುಖತಃ ಮಾತುಕತೆ ನಡೆಸಲು ಚೆನ್ನೈಗೆ ಧಾವಿಸಿದ್ದಾರೆ. ಮುಖ್ಯಮಂತ್ರಿಗಳ ಸಂಗಡ ಡಾ. ರಾಜ್ ಅವರ ಇಬ್ಬರು ಪುತ್ರರು ಹಾಗೂ ಪಾರ್ವತಮ್ಮನವರೂ ಚೆನ್ನೈಗೆ ತೆರಳಿದ್ದಾರೆ.
ಅಮಾವಾಸ್ಯೆ ರಾತ್ರಿ ಅಂದುಕೊಂಡದ್ದು ಕಾಡುಗಳ್ಳ ಸಾಧಿಸಿದ್ದು ಹೀಗೆ...
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications