ರಾಜ್ ಬಿಡುಗಡೆಗೆ ವೀರಪ್ಪನ್ನಿಂದ 50 ಕೋಟಿ ರುಪಾಯಿ ಬೇಡಿಕೆ?
ಬೆಂಗಳೂರು : ರಾಜ್ ಅವರ ನಿವಾಸಕ್ಕೇ ನುಗ್ಗಿ ಅವರನ್ನು ಅಪಹರಿಸಿರುವ ದಂತಚೋರ ವೀರಪ್ಪನ್ ಕನ್ನಡದ ಕಣ್ಮಣಿ ರಾಜ್ ಕುಮಾರ್ ಹಾಗೂ ಮತ್ತಿತರರ ಬಿಡುಗಡೆಗೆ ಸರಿಸುಮಾರು 50 ಕೋಟಿ ರುಪಾಯಿಗಳ ಬೇಡಿಕೆಯನ್ನು ಮುಂದಿಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಶನಿವಾರ ಬೆಳಗ್ಗೆ ಸರಕಾರಕ್ಕೆ ತಲುಪಿರುವ ಆಡಿಯೋ ಕ್ಯಾಸೆಟ್ನಲ್ಲಿ ತಮಿಳಿನಲ್ಲಿ ಬೇಡಿಕೆ ಮಂಡಿಸಲಾಗಿದ್ದು, ಇದು ರಾಜ್ ಅವರ ಅಪಹರಣ ಸಂದರ್ಭದಲ್ಲಿ ಶ್ರೀಮತಿ ಪಾರ್ವತಮ್ಮ ರಾಜ್ಕುಮಾರ್ ಅವರೊಂದಿಗೆ ಕಳುಹಿಸಿದ ಮೊದಲ ಕ್ಯಾಸೆಟ್ ಧ್ವನಿಯನ್ನೇ ಹೋಲುತ್ತದೆ ಎಂದು ತಿಳಿದುಬಂದಿದೆ.
50 ಕೋಟಿ ರುಪಾಯಿಗಳ ಭಾರಿ ಮೊತ್ತದ ಜತೆಗೆ ವೀರಪ್ಪನ್ ಇನ್ನೂ ಹತ್ತಾರು ಬೇಡಿಕೆಗಳನ್ನು ಮುಂದಿಟ್ಟಿದ್ದು, ಅದರಲ್ಲಿ ಟಾಡಾ ಕಾಯಿದೆ ಅಡಿಯಲ್ಲಿ ಬಂಧಿಗಳಾಗಿರುವ ತನ್ನ ಸಹಚರರ ಬಿಡುಗಡೆಯ ಬೇಡಿಕೆಯೂ ಒಂದಾಗಿದೆ. ಎಲ್ಲಕ್ಕಿಂತಲೂ ಮಿಗಿಲಾಗಿ ತನಗೆ ಹಾಗೂ ತನ್ನ ಸಹಚರರಿಗೆ ಕ್ಷಮಾದಾನ ನೀಡಬೇಕು. ಕ್ಷಮಾದಾನದ ನಂತರ, ಚೆನ್ನೈನಲ್ಲಿ ನಾಗರಿಕರಂತೆ ಬದುಕಲು ತಮಗೆ ಸಕಲ ಅನುಕೂಲತೆಗಳನ್ನು ಮಾಡಿಕೊಡಬೇಕು ಎಂಬ ಬೇಡಿಕೆಗಳೂ ಸೇರಿವೆ ಎಂದು ತಿಳಿದುಬಂದಿದೆ. ಕಾವೇರಿ ವಿವಾದವನ್ನು ಬಗೆಹರಿಸಬೇಕೆಂಬ ಬೇಡಿಕೆಯೂ ಈ ಕ್ಯಾಸೆಟ್ನಲ್ಲಿರುವುದಾಗಿ ಗೊತ್ತಾಗಿದೆ.
ರಾಜ್ಯದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಈಗಾಗಲೇ ಕ್ಯಾಸೆಟ್ ಆಲಿಸಿದ್ದು, ರಾಜ್ ಕುಮಾರ್ ಅವರ ಕುಟುಂಬದವರೊಂದಿಗೆ ಸಹ ಚರ್ಚಿಸಿದ್ದಾರೆ. ಭಾನುವಾರ ಬೆಳಗ್ಗೆ ಈ ಬಗ್ಗೆ ತಮಿಳುನಾಡಿನ ಮುಖ್ಯಮಂತ್ರಿ ಕರುಣಾನಿಧಿ ಅವರೊಂದಿಗೆ ಮಾತುಕತೆ ನಡೆಸಲು ಮುಖ್ಯಮಂತ್ರಿಗಳು ಚೆನ್ನೈಗೆ ತೆರಳಲಿದ್ದಾರೆ.
ಉನ್ನತ ಮಟ್ಟದ ಸಭೆ: ವೀರಪ್ಪನ್ ಬೇಡಿಕೆಗಳು ಏನೆಂದು ತಿಳಿದುಬಂದಿರುವ ಹಿನ್ನೆಲೆಯಲ್ಲಿ ಚರ್ಚೆ ನಡೆಸಲು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಈ ಸಭೆಯ ನಂತರ, ಪ್ರತಿಪಕ್ಷಗಳ ನಾಯಕರ ಸಭೆಯನ್ನು ಸಹ ಕರೆಯಲಾಗಿದೆ. ಈ ಎಲ್ಲ ಮಾತುಕತೆಗಳನ್ನು ನಡೆಸುವ ಮುನ್ನ ಡಾ. ರಾಜ್ಕುಮಾರ್ ಅವರ ಕುಟುಂಬದವರೊಂದಿಗೆ ಚರ್ಚಿಸಿ, ಅವರ ಅನಿಸಿಕೆಗಳನ್ನು ಪಡೆಯಲಾಗುತ್ತದೆ ಎಂದೂ ತಿಳಿದುಬಂದಿದೆ.
ಚಲನಚಿತ್ರ ರಂಗದ ನಿರ್ಧಾರ: ವೀರಪ್ಪನ್ ಡಾ. ರಾಜ್ಕುಮಾರ್ ಅವರ ಬಿಡುಗಡೆಗೆ 50 ಕೋಟಿ ರುಪಾಯಿಗಳನ್ನು ಕೇಳಿದ್ದಾನೆ ಎಂಬ ವಿಷಯ ಅನಧಿಕೃತವಾಗಿ ಬಹಿರಂಗಗೊಳ್ಳುತ್ತಿರುವಂತೆಯೇ, ಕರ್ನಾಟಕ ಚಲನಚಿತ್ರ ರಂಗ, ರಾಜ್ಯ ವಾಣಿಜ್ಯ ಮಂಡಳಿಯಲ್ಲಿ ಸಭೆ ಸೇರಿ ಚರ್ಚಿಸಿದೆ ಎಂದು ಗೊತ್ತಾಗಿದೆ. ಮಂಡಳಿಯ ಸಭೆಯಲ್ಲಿ ಕನ್ನಡ ಚಿತ್ರ ರಂಗ ಪ್ರತಿವರ್ಷ ಸರಕಾರದಿಂದ ಸಬ್ಸಿಡಿ ಹಾಗೂ ಮನರಂಜನಾ ತೆರಿಗೆ ವಿನಾಯಿತಿಯಡಿಯಲ್ಲಿ ಹಾಗೂ ಇನ್ನಿತರ ವಿಭಾಗಗಳಿಂದ ಪಡೆಯುವ ಸುಮಾರು 40ರಿಂದ 45 ಕೋಟಿ ರುಪಾಯಿಗಳನ್ನು ರಾಜ್ಕುಮಾರ್ ಅವರ ಬಿಡುಗಡೆಗೆ ಬಿಟ್ಟುಕೊಡಲು ತೀರ್ಮಾನಿಸಿದೆ ಎಂದೂ ವಿಶ್ವಸನೀಯ ಮೂಲಗಳು ತಿಳಿಸಿವೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications