ಅಪರ್ಣಾ ಪೋಪಟ್ ಪುನರಾಗಮನ
ಬೆಂಗಳೂರು : -ಉ-ದ್ದೀ-ಪ-ನ ಮ-ದ್ದು ಸೇವ-ನೆ-ಯ ಆರೋ-ಪ-ದ ಮೇರೆ-ಗೆ 3 ತಿಂಗಳಿಂದ ಅಂತರರಾಷ್ಟ್ರೀಯ ಟೂರ್ನಿಗಳಿಂದ ಹೊರಗುಳಿದಿದ್ದ -ರಾ-ಜ್ಯ-ದ ಬ್ಯಾಡ್ಮಿಂಟನ್ ಆಟಗಾರ್ತಿ ಅಪರ್ಣಾ ಪೋಪಟ್ ಸೆಪ್ಟೆಂಬರ್ನಲ್ಲಿ ನಡೆಯಲಿರುವ ಒಲಂಪಿಕ್ಸ್ನಲ್ಲಿ ಆಡಲು ಸಿಡ್ನಿಗೆ ಹಾರಲಿದ್ದಾರೆ.
ಪ್ರಕಾಶ್ ಪಡುಕೋಣೆ ಬ್ಯಾಡ್ಮಿಂಟನ್ ಅಕಾಡೆಮಿಯ ಪೋಪಟ್ ಸಿಡ್ನಿ ಒಲಂಪಿಕ್ಸ್ ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್ಗೆ ಆಯ್ಕೆಯಾಗಿರುವ ವಿಷಯವನ್ನು ಶುಕ್ರವಾರ ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಫೆಡರೇಷನ್ ಪ್ರಕಟಿಸಿರುವುದಾಗಿ ಅವರ ತರಬೇತುದಾರ ವಿಮಲ್ ಕುಮಾರ್ ತಿಳಿಸಿದ್ದಾರೆ.
ನಿಷೇಧ ವಿಧಿಸಿದ್ದು ಯಾತಕ್ಕೆ? : ಮೂರು ತಿಂಗಳ ಹಿಂದೆ ದೆಹಲಿಯಲ್ಲಿ ನಡೆದ ಥಾಮಸ್ ಉಬೇರ್ ಕಪ್ನಲ್ಲಿ ಆಡುತ್ತಿದ್ದಾಗ ಶೀತವಾದ ಕಾರಣ ಪೋಪಟ್ 'ಡಿ ಕೋಲ್ಡ್" ಮಾತ್ರೆ ಸೇವಿಸಿದ್ದರು. ಆ ಮಾತ್ರೆಯಲ್ಲಿ ಕ್ರೀಡಾಪಟುಗಳಿಗೆ ನಿಷೇಧಿಸಿರುವ ಮದ್ದು ಇದ್ದ ಉದ್ದೀಪನಾ ಪರೀಕ್ಷೆಯಲ್ಲಿ ಪಾಸಿಟಿವ್ ರಿಸಲ್ಟ್ ಬಂದಿತ್ತು. ಹೀಗಾಗಿ ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಫೆಡರೇಷನ್ ಅವರಿಗೆ 3 ತಿಂಗಳ ಕಾಲ ನಿಷೇಧ ವಿಧಿಸಿತ್ತು.
ರ್ಯಾಂಕ್ ಪಟ್ಟಿಯಲ್ಲಿ ಕೆಳಗಿಳಿಸಿದ ನಿಷೇಧ : ಆಗ ಅಂತರರಾಷ್ಟ್ರೀಯ ರ್ಯಾಂಕಿಂಗ್ ಪಟ್ಟಿಯಲ್ಲಿ 16ನೇ ಸ್ಥಾನದಲ್ಲಿದ್ದ ಪೋಪಟ್ ಈವತ್ತು 23ನೇ ಸ್ಥಾನಕ್ಕಿಳಿದಿದ್ದಾರೆ. ನಿಷೇಧಕ್ಕೊಳಗಾದ 3 ತಿಂಗಳ ಅವಧಿಯಲ್ಲಿ ಅನೇಕ ಅಂತರರಾಷ್ಟ್ರೀಯ ಟೂರ್ನಿಗಳಿಂದ ಅವರು ವಂಚಿತರಾಗಿದ್ದಾರೆ. ಆದರೂ ಎದೆಗುಂದದ ಅಪರ್ಣಾ ಅಭ್ಯಾಸ ಮಾತ್ರ ಬಿಡಲಿಲ್ಲ. ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಆಡುತ್ತಿದ್ದಾಗ ಎಷ್ಟು ಗಂಟೆ ಅಭ್ಯಾಸ ಮಾಡುತ್ತಿದ್ದರೋ, ನಿಷೇಧಕ್ಕೆ ಗುರಿಯಾದಾಗಲೂ ಅಷ್ಟೇ ತಾಸುಗಳ ಕಾಲ ಅಭ್ಯಾಸ ಮುಂದುವರೆಸಿದರು. ಈಗ ಮತ್ತೆ ಆಡುವ ಅವಕಾಶ ಸಿಕ್ಕಿರುವುದು ಪೋಪಟ್ಗೆ ಸಂತಸ ತಂದಿದೆ. ಸಿಡ್ನಿಯಲ್ಲಿ ಭಾರತದ ಕೀರ್ತಿ ಹೆಚ್ಚಿಸುವುದೇ ನನ್ನ ಮುಂದಿನ ಗುರಿ ಎಂದು ಅವರು ನುಡಿಯುತ್ತಾರೆ.
-
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications