ಬೇಡಿಕೆಗಳ ಬಗ್ಗೆ ಗೌಪ್ಯ ಮಾತುಕತೆ, ರಾಜ್ಯಾದ್ಯಂತ ಹೋಮ, ಹವನ..
ಬೆಂಗಳೂರು: ವೀರಪ್ಪನ್ ಕಳುಹಿಸಿರುವನೆನ್ನಲಾಗಿರುವ ಕ್ಯಾಸೆಟ್ ಸರಕಾರದ ಕೈಸೇರಿದೆ. ಆದರೆ, ವೀರಪ್ಪನ್ ಬೇಡಿಕೆಗಳ ಕುರಿತು ಎರಡೂ ಸರಕಾರಗಳು ಈವರೆಗೂ ಬಾಯಿ ಬಿಟ್ಟಿಲ್ಲ. ಇಬ್ಬರೂ ಮುಖ್ಯಮಂತ್ರಿಗಳು ತಮ್ಮ ರಾಜ್ಯಗಳ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ರಾಜ್ಯದ ಮುಖ್ಯಮಂತ್ರಿ ಕೃಷ್ಣ ಅವರು ಬಿಕ್ಕಟ್ಟು ನಿವಾರಣಾ ಸಮಿತಿ ಹಾಗೂ ಪ್ರತಿಪಕ್ಷಗಳ ನಾಯಕರೊಂದಿಗೆ ಮಾತುಕತೆ ಮುಗಿಸಿದ್ದಾರೆ. ಬಿಕ್ಕಟ್ಟಿನ ಸಂಬಂಧ ಸರಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧರಾಗಿರುವುದಾಗಿ ಪ್ರತಿಪಕ್ಷ ನಾಯಕರು ಪುನರುಚ್ಚರಿಸಿದ್ದಾರೆ. ಬೇಡಿಕೆ ಕುರಿತ ಚರ್ಚೆಯ ಎಲ್ಲ ಸಭೆಗಳೂ ಅತ್ಯಂತ ಗೌಪ್ಯವಾಗಿ ನಡೆದಿರುವುದು ವಿಶೇಷ.
ಎಲ್ಲ ಬೇಡಿಕೆಗಳನ್ನೂ ಕರ್ನಾಟಕವೇ ಈಡೇರಿಸಬೇಕೆ ಎಂಬ ಪ್ರಶ್ನೆಗೆ ಹಾಗೇನೂ ಇಲ್ಲ ಎಂದು ಹೇಳಿರುವ ಕೃಷ್ಣ ಈ ಕುರಿತು ಕರುಣಾನಿಧಿ ಅವರೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ. ಭಾನುವಾರ ಬೆಳಗ್ಗೆ ಮುಖ್ಯಮಂತ್ರಿ ಕೃಷ್ಣ ಉನ್ನತ ಅಧಿಕಾರಿಗಳ ತಂಡದೊಂದಿಗೆ ಚೆನ್ನೈಗೆ ತೆರಳಿ, ಕರುಣಾನಿಧಿ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕವಷ್ಟೇ ಬೇಡಿಕೆಗಳ ಬಗ್ಗೆ ನಿಖರವಾದ ಮಾಹಿತಿ ದೊರಕಲು ಸಾಧ್ಯ.
ಸರ್ಕಾರದಿಂದ ದುರ್ಗಾ ಹೋಮ : ರಾಜ್ ಅವರ ಸುರಕ್ಷಿತ ಬಿಡುಗಡೆಗೆ ರಾಜ್ಯ ಸರಕಾರ ವಿಶೇಷ ದುರ್ಗಾ ಹೋಮ ಹಮ್ಮಿಕೊಂಡಿದೆ ಎಂದು ಮುಜರಾಯಿ ಸಚಿವ ಬಾಬೂರಾವ್ ಚಿಂಚನಸೂರ್ ಶನಿವಾರ ತಿಳಿಸಿದ್ದಾರೆ. ಈ ಮಧ್ಯೆ ರಾಜ್ಯಾದ್ಯಂತ ಹವನ, ಹೋಮ, ವಿಶೇಷ ಪೂಜಾಕಾರ್ಯಗಳು ನಡೆಯುತ್ತಲೇ ಇವೆ. ಜೆ.ಪಿ ನಗರದ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ನಟ ಮತ್ತು ಸಂಸದ ಅಂಬರೀಶ್ ನೇತೃತ್ವದಲ್ಲಿ ಶನಿವಾರ ವಿಶೇಷ ಪೂಜೆ ನಡೆಯಿತು. ಹವನ ಹೋಮಗಳನ್ನೂ ಏರ್ಪಡಿಸಲಾಗಿತ್ತು. ಚಿತ್ರನಟ - ನಟಿಯರಾದ ಶಿವರಾಂ, ಸುಮಲತಾ, ವೈಶಾಲಿ ಕಾಸರವಳ್ಳಿ, ಭಾರತಿ ವಿಷ್ಣುವರ್ಧನ್, ಗಿರಿಜಾ ಲೋಕೇಶ್, ರಾಜ್ ಪುತ್ರ ಪುನೀತ್, ಜಯಂತಿ, ಜಗ್ಗೇಶ್ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
ರಾಜ್ಯಾದ್ಯಂತ ರಾಜ್ ಬಿಡುಗಡೆಗಾಗಿ ಮೃತ್ಯುಂಜಯ ಹೋಮ, ಗಣಪತಿ ಹೋಮ, ಶನಿಶಾಂತಿಯೇ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಜರುಗಿವೆ. ಸಾವಿರಾರು ಸಂಖ್ಯೆಯಲ್ಲಿ ರಾಜ್ಕುಮಾರ್ ಅಭಿಮಾನಿಗಳು ರಾಜ್ಯಾದ್ಯಂತ ಇರುವ ನಾನಾ ದೇವಾಲಯಗಳಲ್ಲಿ ವಿಶೇಷ ಪ್ರಾರ್ಥನೆ, ಪೂಜೆ ಸಲ್ಲಿಸಿದ್ದಾರೆ.
ಸರದಿ ಉಪವಾಸ: ರಾಜ್ ಬಿಡುಗಡೆಗಾಗಿ ಚಲನಚಿತ್ರ ನಿರ್ದೇಶಕರ ಸಂಘ ಹಮ್ಮಿಕೊಂಡಿರುವ ಸರದಿ ಉಪವಾಸ ಸತ್ಯಾಗ್ರಹ ಮುಂದುವರಿದಿದೆ. ಶನಿವಾರದ ಉಪವಾಸ ಮುಷ್ಕರದ ನೇತೃತ್ವವನ್ನು ನಿರ್ದೇಶಕ ನಾಗಾಭರಣ ವಹಿಸಿದ್ದರು. ಫಣಿ ರಾಮಚಂದ್ರ ಅವರು ವಿಷ್ಣು ಸಮಸ್ರನಾಮ ಪಠಿಸಿ ರಾಜ್ ಕುಮಾರ್ ಅವರ ಬಿಡುಗಡೆಗಾಗಿ ದೇವರನ್ನು ಪ್ರಾರ್ಥಿಸಿದರು. ದೇಶದ ನಾನಾ ಭಾಗಗಳಲ್ಲಿ ಇರುವ ಕನ್ನಡಿಗರು ಹಾಗೂ ಕಡಲಾಚೆಯ ಕನ್ನಡಿಗರು ಸಹ ರಾಜ್ಕುಮಾರ್ ಅವರ ಬಿಡುಗಡೆಗೆ ವಿಶೇಷ ಪೂಜೆ ನಡೆಸಿದ ವರದಿಗಳು ಬಂದಿವೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications