ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ದಾವಣಗೆರೆ : ಮಳೆಗೆ ಇಬ್ಬರ ಬಲಿ
ದಾವಣಗೆರೆ : ಕಳೆದ ಮೂರು ದಿನಗಳಲ್ಲಿ ಸುರಿದ ಸತತ ಮಳೆಗೆ ಜಿಲ್ಲೆಯ ಜನಜೀವನ ಅಸ್ತವ್ಯಸ್ತವಾಗಿದೆ. ಜಿಲ್ಲೆಯಲ್ಲಿ ಇಬ್ಬರು ಸಾವಿಗೀಡಾಗಿದ್ದು , ಆಲಿ ಕಲ್ಲು ಮಳೆಯಿಂದಾಗಿ ಅನೇಕ ಮನೆಗಳು ಜಖಂ ಗೊಂಡಿವೆ.
ಮನೆಯಾಂದರ ಗೋಡೆ ಕುಸಿದು ಎಸ್.ಜೆ. ಎಂ. ನಗರದ ಯಮುನಮ್ಮ (50) ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ. ಹರಿಯುತ್ತಿರುವ ನೀರಿನ ಸೆಳೆತಕ್ಕೆ ಸಿಕ್ಕಿ ಹರಿಹರ ತಾಲ್ಲೂಕಿನ ಸಾರಥಿ ಗ್ರಾಮದ ಹನುಮಂತಪ್ಪ ಸಾವಿಗೀಡಾಗಿದ್ದಾರೆ. ಮಳೆ ನೀರು ಹರಿದು ಹೋಗಲು ಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲದ ಕಾರಣ ಮನೆಯಾಳಗೆ ನೀರು ನುಗ್ಗುವ ಸಾಧ್ಯತೆಗಳಿದ್ದು, ಜನ ನಿದ್ದೆಗೆಟ್ಟು ಕಾಯುತ್ತಾ ಕುಳಿತಿದ್ದಾರೆ. ರಸ್ತೆಗಳ ಮೇಲೆ ಹರಿಯುವ ನೀರು ವಾಹನ ಸಂಚಾರಕ್ಕೆ ಅಡ್ಡಿಯುಂಟು ಮಾಡುತ್ತಿದೆ. ಮನೆಗಳು ಜಲಾವೃತಗೊಳ್ಳಬಹುದಾದ ಪ್ರದೇಶದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ. ಶಿವರಾಂ ಹೇಳಿದ್ದಾರೆ.
Comments
English summary
Heavy rain : 2 died in Davangere