ಉತ್ತರ ಕರ್ನಾಟಕ ವಕೀಲರ ನಿರ್ಧಾರ
ಹುಬ್ಬಳ್ಳಿ : ರಾಜ್ ಅಪಹರಣದಿಂದ ಸಂಕಷ್ಟಕ್ಕೆ ಸಿಲುಕಿರುವ ಕೃಷ್ಣ ಸರ್ಕಾರವನ್ನು ಬೆಂಬಲಿಸುವ ಸಲುವಾಗಿ ಅವಳಿ ನಗರದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತಾಯಿಸಿ ಕೋರ್ಟ್ ಕಲಾಪ ಬಹಿಷ್ಕರಿಸಿದ್ದ ವಕೀಲರು ಸೋಮವಾರದಿಂದ ಕೋರ್ಟಿಗೆ ಅರ್ಧ ದಿನ ಹಾಜರಾಗುವುದಾಗಿ ತಿಳಿಸಿದ್ದಾರೆ.
ಭಾನುವಾರ ನಡೆದ ಉತ್ತರ ಕರ್ನಾಟಕ ಹೈಕೋರ್ಟ್ ಪೀಠ ಹೋರಾಟ ಸಮನ್ವಯ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಬೆಳಗ್ಗೆ ಕೋರ್ಟಿಗೆ ಹಾಜರಾಗಿ, ಮಧ್ಯಾಹ್ನ ಕಲಾಪಗಳನ್ನು ಬಹಿಷ್ಕರಿಸಲು ಸಂಘ ತೀರ್ಮಾನಿಸಿತು. ಕುಂದಗೋಳ, ಶಿಗ್ಗಾಂವ, ಲಕ್ಷ್ಮೇಶ್ವರ, ನವಲಗುಂದ, ರೋಣ, ಹಾನಗಲ್, ಬಾದಾಮಿ, ನರಗುಂದ ಹಾಗೂ ಕಲಘಟಗಿ ವಕೀಲರ ಸಂಘಗಳ ಪದಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು. ಕಾರವಾರ, ಹಾವೇರಿ, ಗದಗ, ಬಾಗಲಕೋಟೆ, ಶಿರಸಿ ಹಾಗೂ ಹಿರೇಕೆರೂರು ವಕೀಲರ ಸಂಘಗಳು ಸಭೆಯ ನಿರ್ಣಯಕ್ಕೆ ಪತ್ರಗಳ ಮೂಲಕ ಬೆಂಬಲ ಸೂಚಿಸಿವೆ ಎಂದು ಹುಬ್ಬಳ್ಳಿ ವಕೀಲರ ಸಂಘದ ಅಧ್ಯಕ್ಷ ಸಿ.ಆರ್. ಪಾಟೀಲ್ ತಿಳಿಸಿದರು.
ವಾಜಪೇಯಿ, ಕೃಷ್ಣ ಸರ್ಕಾರಗಳಿಗೆ ನೈತಿಕ ಬೆಂಬಲ : ಕಾಶ್ಮೀರದಲ್ಲಿ ನಡೆಯುತ್ತಿರುವ ಚಟುವಟಿಕೆಗಳಿಂದ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸಮಸ್ಯೆ ಎದುರಿಸುತ್ತಿದ್ದಾರೆ. ವರನಟ ರಾಜ್ ಅವರನ್ನು ವೀರಪ್ಪನ್ ಒತ್ತೆಯಿಂದ ಬಿಡಿಸಿಕೊಂಡು ಬರುವ ಜವಾಬ್ದಾರಿ ಹೊತ್ತಿರುವ ಮುಖ್ಯಮಂತ್ರಿ ಕೃಷ್ಣ ಈಗ ಒತ್ತಡದಲ್ಲಿದ್ದಾರೆ. ಹೀಗಾಗಿ ಅವರಿಗೆ ನೈತಿಕ ಬೆಂಬಲ ಕೊಡುವ ಉದ್ದೇಶದಿಂದ ಸಭೆ ಈ ನಿರ್ಣಯಕ್ಕೆ ಬಂದಿದೆ ಎಂದು ಪಾಟೀಲ್ ಹೇಳಿದರು.
-
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ












Click it and Unblock the Notifications