ಮಂಗಳೂರು ವಿವಿ ‘ಅಮುಕ್ತ್’ದಲ್ಲಿ ಭಿನ್ನ ಮತ ಹೊಸ ಸಂಘಟನೆ ಅಸ್ತಿತ್ವಕ್ಕೆ
ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯ ಕಾಲೇಜು ಅಧ್ಯಾಪಕರ ಸಂಘ 'ಅಮುಕ್ತ್ " ದಲ್ಲಿ ಭಿನ್ನಮತ ತಲೆದೋರಿದ್ದು, ಪ್ರಗತಿಪರ ಮಂಗಳೂರು ವಿವಿ ಕಾಲೇಜು ಅಧ್ಯಾಪಕರ ಪ್ರತ್ಯೇಕ ಸಂಘವೊಂದು ಅಸ್ತಿತ್ವಕ್ಕೆ ಬಂದಿದೆ.
ಕಟೀಲು ಶ್ರೀ ದುರ್ಗಾ ಪರಮೇಶ್ವರಿ ಕಾಲೇಜಿನ ಉಪನ್ಯಾಸಕ ಬಿ. ವಸಂತ ಶೆಟ್ಟಿಯ ನೇತೃತ್ವದಲ್ಲಿ ಈ ಹೊಸ ಸಂಘ ಹುಟ್ಟಿಕೊಂಡಿದೆ. ಅಮುಕ್ತ್ ಪದಾಧಿಕಾರಿಗಳು ಸ್ಥಾಪಿತ ಹಿತಾಸಕ್ತಿಗಳ ಒಳಿತನ್ನೇ ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಬೇರೆ ವೇದಿಕೆಯನ್ನು ನಿರ್ಮಿಸಿಕೊಳ್ಳಬೇಕಾಯಿತು ಎಂದು ವಸಂತ ಶೆಟ್ಟಿ ಹೇಳಿದ್ದಾರೆ. ಪುನರ್ವಿಮರ್ಶಿತ ಯುಜಿಸಿ ವೇತನ ಶ್ರೇಣಿ ಪಡೆಯುತ್ತಿರುವ ಅಧ್ಯಾಪಕರು ಈಗ ಅಮುಕ್ತ್ದ ಮೂಲಕ ಮೌಲ್ಯಮಾಪನ ಬಹಿಷ್ಕಾರ ಹಾಕುತ್ತಿದ್ದಾರೆ. ಇದು ನ್ಯಾಯವೇ ಎಂದು ಪ್ರಶ್ನಿಸುವ ವಸಂತ ಶೆಟ್ಟಿ , ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಮುಕ್ತ್ ತೆಗೆದುಕೊಂಡಿರುವ ಕೆಲವು ನಿಲುವುಗಳು ನಮಗೆ ಸರಿಬರದೇ ಇದ್ದುದರಿಂದ ನಾವು ಪ್ರತ್ಯೇಕ ವೇದಿಕೆ ಸ್ಥಾಪಿಸಬೇಕಾಯಿತು ಎಂದು ಹೇಳಿದ್ದಾರೆ.
ಅಮುಕ್ತ್ , ಹಿಂದಿನಿಂದಲೂ ವಿಶ್ವವಿದ್ಯಾಲಯದ ಎಲ್ಲಾ ಕ್ರಮಗಳನ್ನೂ ಟೀಕಿಸುತ್ತಲೇ ಬಂದಿರುವ ಸಂಘಟನೆಯಾಗಿ-ದೆ. ಶಿಕ್ಷಕರ ಅಭಿವೃದ್ಧಿಗಾಗಿ ವಿಶ್ವವಿದ್ಯಾಲಯ ನೀಡಿರುವ ಕೊಡುಗೆಗಳನ್ನು ಉದ್ದೇಶಪೂರ್ವಕವಾಗಿಯೇ ಇದು ನಿರ್ಲಕ್ಷಿಸುತ್ತಾ ಬಂದಿದೆ ಎಂದು -ವ-ಸಂ-ತ-ಶೆ-ಟ್ಟಿ ಆಪಾ-ದಿ--ಸಿ-ದ್ದಾ-ರೆ.
ಸು-ಳ್ಳು ಆಪಾ-ದ-ನೆ : ವಸಂ-ತ ಶೆಟ್ಟಿ ಅವ-ರ ನೇತೃ-ತ್ವ-ದ ಸಂಘ-ಟ-ನೆ-ಯ ಹೇಳಿ-ಕೆ-ಗ-ಳ-ನ್ನು ಅಮು-ಕ್ತ್ ಪ್ರತಿ-ನಿ-ಧಿ-ಗ-ಳು ಅಲ್ಲಗಳೆದಿ--ದ್ದಾ-ರೆ. ರಾತ್ರೋ ರಾತ್ರಿ ಹುಟ್ಟಿಕೊಂಡ ಈ ಸಂಘಟನೆ, ವರ್ಷಾನುಗಟ್ಟಲೆ ಕೆಲಸ ಮಾಡಿರುವ ಅಮುಕ್ತ್ದ ಮೇಲೆ ಸುಳ್ಳು ಆಪಾದನೆ ಹೊರಿಸುತ್ತಿದೆ . ಇಂತಹ ಆಪಾದನೆಗಳ ಬಗ್ಗೆ ಸದಸ್ಯರು ತಲೆಕೆಡಿಸಿಕೊಳ್ಳಬಾರದು ಎಂದು ತನ್ನ ಸದಸ್ಯರಿಗೆ ಅಮು-ಕ್ತ್ ಸೂಚಿಸಿದೆ.
-
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
ಏಪ್ರಿಲ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್












Click it and Unblock the Notifications