ಸೋಮವಾರ ರಾತ್ರಿ ಇಬ್ಬರು ಒತ್ತೆಯಾಳುಗಳ ಬಿಡುಗಡೆ ನಿರೀಕ್ಷೆ
ಬೆಂಗಳೂರು : ರಾಜ್ಕುಮಾರ್ ಹಾಗೂ ಮತ್ತಿತರ ಮೂವರನ್ನು ಗಾಜನೂರು ಬಳಿಯ ತೋಟದ ಮನೆಯಿಂದ ವೀರಪ್ಪನ್ ಅಪಹರಿಸಿ 9 ದಿನಗಳಾಗುತ್ತಾ ಬಂದಿದ್ದು, ಸೋಮವಾರ ರಾತ್ರಿಯೇ ಇಬ್ಬರನ್ನು ವೀರಪ್ಪನ್ ಬಿಡುಗಡೆ ಮಾಡುವ ನಿರೀಕ್ಷೆ ಇದೆ.
ವೀರಪ್ಪನ್ ತಾನು ಕಳುಹಿಸಿದ ಕ್ಯಾಸೆಟ್ನಲ್ಲಿದ್ದ ಬೇಡಿಕೆಗಳಿಗೆ ಸಂಬಂಧಿಸಿದಂತೆ ತಮಿಳು ನಾಡು ಹಾಗೂ ಕರ್ನಾಟಕ ರಾಜ್ಯಗಳು ಸ್ಪಂದಿಸಿರುವ ಬಗ್ಗೆ ಸಂತುಷ್ಟನಾದಂತೆ ಕಂಡುಬಂದಿದೆ. ಈ ನಿಟ್ಟಿನಲ್ಲಿ ವೀರಪ್ಪನ್ ಕನಿಷ್ಠ ಇಬ್ಬರನ್ನು ಸೋಮವಾರವೇ ಬಿಡುಗಡೆ ಮಾಡುತ್ತಾನೆ ಎಂದು ರಾಜ್ಯ ಸರಕಾರದ ಬೇಹುಗಾರಿಕೆ ಮೂಲಗಳು ಅಭಿಪ್ರಾಯಪಟ್ಟಿವೆ.
ರಾಜ್ಕುಮಾರ್ ಹಾಗೂ ಅವರ ಅಳಿಯ ಗೋವಿಂದರಾಜ್ ಅವರನ್ನು ತನ್ನ ವಶದಲ್ಲೇ ಉಳಿಸಿಕೊಂಡು, ಉಳಿದಿಬ್ಬರಾದ ನಾಗೇಶ್ ಮತ್ತು ನಾಗಪ್ಪ ಅವನ್ನು ವೀರಪ್ಪನ್ ಬಿಡುಗಡೆ ಮಾಡುವ ಸಾಧ್ಯತೆಗಳು ಇವೆ ಎಂದು ತಿಳಿದುಬಂದಿದೆ. ಉಭಯ ರಾಜ್ಯಗಳ ಅಧಿಕೃತ ಸಂಧಾನಕಾರ ನಕ್ಕೀರನ್ ಪತ್ರಿಕೆಯ ಗೋಪಾಲ್ ಹೊತ್ತು ತರಬಹುದಾದ ಅಧಿಕೃತ ಸಂದೇಶಕ್ಕಾಗಿ ಈಗ ಕಾಯಲಾಗುತ್ತಿದೆ..
ವೀರಪ್ಪನ್ ಸಹಚರರು ಲೈನ್ಮ್ಯಾನ್ ಒಬ್ಬನನ್ನು ಕೆಲವು ಮಾಹಿತಿಗಳಿಗಾಗಿ ವಿಚಾರಿಸಿರುವ ಬಗ್ಗೆ ತಿಳಿದುಬಂದಿದ್ದು, ಆತನ ವಿಚಾರಣೆಯಿಂದ ಪೊಲೀಸರಿಗೆ ಕೆಲವು ಸುಳಿವುಗಳು ಸಹ ದೊರೆತಿವೆ. ಈ ಸುಳಿವಿನ ಮೇರೆಗೆ ವೀರಪ್ಪನ್ ರಾಜ್ಕುಮಾರ್ ಹಾಗೂ ಇತರರನ್ನು ಕರ್ನಾಟಕ ಅರಣ್ಯ ಪ್ರದೇಶದ ಆಸುಪಾಸಿನ ಮನೆಯಾಂದರಲ್ಲಿ ಬಚ್ಚಿಟ್ಟಿರುವ ಬಗ್ಗೆ ಮಾಹಿತಿ ದೊರೆತಿದೆ.
ಮೊಕದ್ದಮೆ ವಾಪಸಿಗೆ ಸೂಚನೆ : ಏತನ್ಮಧ್ಯೆ ಮೈಸೂರಿನಲ್ಲಿ ವೀರಪ್ಪನ್ ಸಹಚರರ ವಿರುದ್ಧದ ಟಾಡಾ ಮೊಕದ್ದಮೆಗಳನ್ನು ವಾಪಸು ಪಡೆಯುವಂತೆ ಸರಕಾರ ಸೂಚನೆ ನೀಡಿದೆ ಎಂದೂ ತಿಳಿದುಬಂದಿದೆ.
ಸರಕಾರ ಬೇಡಿಕೆಗಳನ್ನು ಒಪ್ಪಿರುವ ಕಾರಣ ಕೂಡಲೇ ರಾಜ್ ಹಾಗೂ ಮತ್ತಿರರನ್ನು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳು ಕೋರಿದ್ದಾರೆ. ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ರಾಜ್ಯದಲ್ಲಿ ಜನಜೀವನ ಸಹಜವಾಗಿದೆ. ಆದರೂ ಆಯಕಟ್ಟಿನ ಸ್ಥಳಗಳಲ್ಲಿ ಹೊರರಾಜ್ಯಗಳಿಂದ ಬಂದಿರುವ ಪೊಲೀಸ್ ಪಡೆ ಹಾಗೂ ರಾಜ್ಯದ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.
ಪುಣಜನೂರು ಅರಣ್ಯವಲಯದ ಚೆಕ್ಪೋಸ್ಟ್ನಲ್ಲಿರುವ ಸಿಬ್ಬಂದಿಗೆ ಎರಡು ಕಿಲೋ ಮೀಟರ್ ಹಿಂದೆ ಸರಿಯುವಂತೆ ಸೂಚನೆ ನೀಡಲಾಗಿದೆ. ವೀರಪ್ಪನ್ ಚೆಕ್ಪೋಸ್ಟ್ನಲ್ಲಿರುವ ಸಿಬ್ಬಂದಿಯನ್ನು ಪೊಲೀಸರೆಂದು ತಿಳಿದು, ಯಾವುದೇ ಅನಾಹುತಕ್ಕೆ ಕೈಹಾಕಬಾರದು ಎಂಬ ಕಾರಣಕ್ಕಾಗಿ ಈ ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಬೆಂಗಳೂರು ನಗರದಲ್ಲಿ ಮತ್ತೆ 7 ದಿನಗಳ ಕಾಲ ಪ್ರತಿಬಂಧಕಾಜ್ಞೆಯನ್ನು ಮುಂದುವರಿಸಲಾಗಿದೆ.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications