ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಮಳೆಗಾಗಿ ಸೀಯಾಳ ಅಭಿಷೇಕ
ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆಯ ಅಭಾವವುಂಟಾಗಿದ್ದು, ಮಳೆ ಬರುವಂತೆ ಪ್ರಾರ್ಥಿಸಿ, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಸಹಸ್ರ ಸೀಯಾಳ ರುದ್ರಾಭಿಷೇಕ ಮಾಡಲಾಯಿತು.
ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ನೇತೃತ್ವದಲ್ಲಿ ನಡೆದ ಈ ರುದ್ರಾಭಿಷೇಕದಲ್ಲಿ ಮಳೆಯಿಲ್ಲದೆ ಕಂಗೆಟ್ಟ ಜಿಲ್ಲೆಗೆ ಮಳೆ ಬರಲಿ ಎಂದು ಪ್ರಾರ್ಥಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎ.ಸಿ. ಭಂಡಾರಿ, ಮಂಗಳೂರು ಮೇಯರ್ ಸುಂದರಿ, ಶಾಸಕ ವಿಜಯ ಕುಮಾರ್ ಶೆಟ್ಟಿ, ಪೂಜೆಯಲ್ಲಿ ಪಾಲ್ಗೊಂಡಿದ್ದರು. ಇದಕ್ಕೂ ಮುಂಚೆ ಜನಾರ್ದನ ಪೂಜಾರಿ ನೇತೃತ್ವದಲ್ಲಿ , ಉಳ್ಳಾಲದ ಸೈಯ್ಯದ್ ಮದನಿ ದರ್ಗಾದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ ನಡೆಸಲಾಯಿತು.
English summary
D.K. waits for rain