ಚೆನ್ನೈಗೆ ಕನ್ನಡ ಚಲನಚಿತ್ರ ಕರ್ಮಿಗಳ ದೌಡು
ಬೆಂಗಳೂರು : ಡಾ. ರಾಜ್ಕುಮಾರ್ ಬಿಡುಗಡೆಗೆ ಒತ್ತಾಯಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನಿಯೋಗ ಗುರುವಾರ ಚೆನ್ನೈಗೆ ತೆರಳಲಿದೆ. ಹತ್ತು ದಿನಗಳಿಂದಲೂ ಸ್ತಬ್ಧವಾಗಿರುವ ಕನ್ನಡ ಚಿತ್ರೋದ್ಯಮದಲ್ಲಿ ಆತಂಕದ ಕಾರ್ಮೋಡ ಕವಿದಿದೆ.
ಒಂದು ಅಂದಾಜಿನ ರೀತ್ಯ ದಿನನಿತ್ಯ ಸುಮಾರು ಮೂರೂವರೆ ಕೋಟಿ ರುಪಾಯಿಗಳ ನಷ್ಟ ಉದ್ಯಮಕ್ಕೆ ಸಂಭವಿಸುತ್ತಿದೆ. ಚಿತ್ರನಗರಿಯ ಕಾರ್ಮಿಕರು ತುತ್ತು ಕೂಳಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಮಧ್ಯೆ ರಾಜ್ಕುಮಾರ್ ಅವರ ಬಿಡುಗಡೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ ಮುಖ್ಯಮಂತ್ರಿ ಕರುಣಾನಿಧಿ ಅವರ ಮೇಲೆ ಒತ್ತಡ ಹೇರಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನಿಯೋಗ ಚೆನ್ನೈಗೆ ತೆರಳಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ರಾಜ್ಕುಮಾರ್ ಕ್ಷೇಮ ಸಮಾಚಾರದ ಕ್ಯಾಸೆಟ್ ಬರಲಿದೆ: ರಾಜ್ಕುಮಾರ್ ಹಾಗೂ ಇತರ ಮೂವರು ಕ್ಷೇಮದಿಂದಿರುವ ಸುದ್ದಿಯನ್ನು ಒಳಗೊಂಡ ಇನ್ನೊಂದು ಕ್ಯಾಸೆಟ್ ಹಾಗೂ ಫೋಟೋಗಳು ಬುಧವಾರ ರಾತ್ರಿ ಅಥವಾ ಗುರುವಾರ ಬೆಳಗ್ಗೆ ಚೆನ್ನೈ ತಲುಪಲಿದೆ ಎಂಬ ಸುದ್ದಿ ವಿಶ್ವಸನೀಯ ಮೂಲಗಳಿಂದ ತಿಳಿದುಬಂದಿದೆ ಎಂದು ತಮಿಳುನಾಡಿನ ಪೊಲೀಸ್ ಮಹಾ ನಿರ್ದೇಶಕ ಎಫ್.ಸಿ. ಶರ್ಮಾ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.
ಈ ಮಧ್ಯೆ ರಾಜ್ಕುಮಾರ್ ಕ್ಷೇಮವಾಗಿ ಹಾಗೂ ಆರೋಗ್ಯವಾಗಿದ್ದಾರೆ ಎಂದೂ ತಿಳಿದುಬಂದಿದೆ. ನಿರೀಕ್ಷಿತ ಕ್ಯಾಸೆಟ್ ರಾಜ್ಕುಮಾರ್ ಹಾಗೂ ಸಂಧಾನಕಾರ ಗೋಪಾಲ್ ಅವರ ಸಂದೇಶಗಳನ್ನು ಒಳಗೊಂಡಿರುತ್ತದೆ ಎಂದೂ ಹೇಳಲಾಗುತ್ತಿದೆ. ಮತ್ತೊಂದು ಮೂಲದ ವರದಿಗಳ ರೀತ್ಯ ವೀರಪ್ಪನ್, ಸಂಧಾನಕಾರ ಗೋಪಾಲ್ ಸೇರಿದಂತೆ ರಾಜ್ಕುಮಾರ್ ಹಾಗೂ ಇತರ ಮೂವರು ಒತ್ತೆಯಾಳುಗಳನ್ನು ಗಾಜನೂರು ಬಳಿಯ ಗೌಪ್ಯ ಸ್ಥಳದಿಂದ ಬೇರೆಡೆಗೆ ಸ್ಥಳಾಂತರಿಸಿದ್ದಾನೆ ಎಂದೂ ತಿಳಿದುಬಂದಿದೆ.
ಮತ್ತೊಂದು ಕಂತಿನ ಬೇಡಿಕೆಗಳುಳ್ಳ ಹೊಸ ಕ್ಯಾಸೆಟ್ನೊಂದಿಗೆ ಶಿವಸುಬ್ರಮಣಿಯಂ ಅಲಿಯಾಸ್ ಸುಬ್ಬು ಕಾಡಿನಿಂದ ಹೊರಟಿದ್ದು, ಬುಧವಾರ ಮಧ್ಯರಾತ್ರಿಯ ವೇಳೆಗೆ ಚೆನ್ನೈ ತಲುಪಲಿದ್ದಾರೆ ಎಂದೂ ನಕ್ಕೀರನ್ ಪತ್ರಿಕೆಯ ಮೂಲಗಳು ತಿಳಿಸಿವೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ












Click it and Unblock the Notifications