ಚೆನ್ನೈಗೆ ಕನ್ನಡ ಚಲನಚಿತ್ರ ಕರ್ಮಿಗಳ ದೌಡು
ಬೆಂಗಳೂರು : ಡಾ. ರಾಜ್ಕುಮಾರ್ ಬಿಡುಗಡೆಗೆ ಒತ್ತಾಯಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನಿಯೋಗ ಗುರುವಾರ ಚೆನ್ನೈಗೆ ತೆರಳಲಿದೆ. ಹತ್ತು ದಿನಗಳಿಂದಲೂ ಸ್ತಬ್ಧವಾಗಿರುವ ಕನ್ನಡ ಚಿತ್ರೋದ್ಯಮದಲ್ಲಿ ಆತಂಕದ ಕಾರ್ಮೋಡ ಕವಿದಿದೆ.
ಒಂದು ಅಂದಾಜಿನ ರೀತ್ಯ ದಿನನಿತ್ಯ ಸುಮಾರು ಮೂರೂವರೆ ಕೋಟಿ ರುಪಾಯಿಗಳ ನಷ್ಟ ಉದ್ಯಮಕ್ಕೆ ಸಂಭವಿಸುತ್ತಿದೆ. ಚಿತ್ರನಗರಿಯ ಕಾರ್ಮಿಕರು ತುತ್ತು ಕೂಳಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಮಧ್ಯೆ ರಾಜ್ಕುಮಾರ್ ಅವರ ಬಿಡುಗಡೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ ಮುಖ್ಯಮಂತ್ರಿ ಕರುಣಾನಿಧಿ ಅವರ ಮೇಲೆ ಒತ್ತಡ ಹೇರಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನಿಯೋಗ ಚೆನ್ನೈಗೆ ತೆರಳಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ರಾಜ್ಕುಮಾರ್ ಕ್ಷೇಮ ಸಮಾಚಾರದ ಕ್ಯಾಸೆಟ್ ಬರಲಿದೆ: ರಾಜ್ಕುಮಾರ್ ಹಾಗೂ ಇತರ ಮೂವರು ಕ್ಷೇಮದಿಂದಿರುವ ಸುದ್ದಿಯನ್ನು ಒಳಗೊಂಡ ಇನ್ನೊಂದು ಕ್ಯಾಸೆಟ್ ಹಾಗೂ ಫೋಟೋಗಳು ಬುಧವಾರ ರಾತ್ರಿ ಅಥವಾ ಗುರುವಾರ ಬೆಳಗ್ಗೆ ಚೆನ್ನೈ ತಲುಪಲಿದೆ ಎಂಬ ಸುದ್ದಿ ವಿಶ್ವಸನೀಯ ಮೂಲಗಳಿಂದ ತಿಳಿದುಬಂದಿದೆ ಎಂದು ತಮಿಳುನಾಡಿನ ಪೊಲೀಸ್ ಮಹಾ ನಿರ್ದೇಶಕ ಎಫ್.ಸಿ. ಶರ್ಮಾ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.
ಈ ಮಧ್ಯೆ ರಾಜ್ಕುಮಾರ್ ಕ್ಷೇಮವಾಗಿ ಹಾಗೂ ಆರೋಗ್ಯವಾಗಿದ್ದಾರೆ ಎಂದೂ ತಿಳಿದುಬಂದಿದೆ. ನಿರೀಕ್ಷಿತ ಕ್ಯಾಸೆಟ್ ರಾಜ್ಕುಮಾರ್ ಹಾಗೂ ಸಂಧಾನಕಾರ ಗೋಪಾಲ್ ಅವರ ಸಂದೇಶಗಳನ್ನು ಒಳಗೊಂಡಿರುತ್ತದೆ ಎಂದೂ ಹೇಳಲಾಗುತ್ತಿದೆ. ಮತ್ತೊಂದು ಮೂಲದ ವರದಿಗಳ ರೀತ್ಯ ವೀರಪ್ಪನ್, ಸಂಧಾನಕಾರ ಗೋಪಾಲ್ ಸೇರಿದಂತೆ ರಾಜ್ಕುಮಾರ್ ಹಾಗೂ ಇತರ ಮೂವರು ಒತ್ತೆಯಾಳುಗಳನ್ನು ಗಾಜನೂರು ಬಳಿಯ ಗೌಪ್ಯ ಸ್ಥಳದಿಂದ ಬೇರೆಡೆಗೆ ಸ್ಥಳಾಂತರಿಸಿದ್ದಾನೆ ಎಂದೂ ತಿಳಿದುಬಂದಿದೆ.
ಮತ್ತೊಂದು ಕಂತಿನ ಬೇಡಿಕೆಗಳುಳ್ಳ ಹೊಸ ಕ್ಯಾಸೆಟ್ನೊಂದಿಗೆ ಶಿವಸುಬ್ರಮಣಿಯಂ ಅಲಿಯಾಸ್ ಸುಬ್ಬು ಕಾಡಿನಿಂದ ಹೊರಟಿದ್ದು, ಬುಧವಾರ ಮಧ್ಯರಾತ್ರಿಯ ವೇಳೆಗೆ ಚೆನ್ನೈ ತಲುಪಲಿದ್ದಾರೆ ಎಂದೂ ನಕ್ಕೀರನ್ ಪತ್ರಿಕೆಯ ಮೂಲಗಳು ತಿಳಿಸಿವೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್












Click it and Unblock the Notifications