ಇನ್ನೊಂದು ಕ್ಯಾಸೆಟ್ ಬರಲಿದೆ.... ಅದರಲ್ಲೇನಿದೆ? ‘ವದಂತಿಗೆ ಆಹಾರ’
ಬೆಂಗಳೂರು : ರಾಜ್ಕುಮಾರ್ ಬಿಡುಗಡೆಯ ಶುಭವಾರ್ತೆ ಈಗ ಬರುತ್ತದೆ, ಆಗ ಬರುತ್ತದೆ ಎಂದು ನಾಡಿನ ಜನತೆ ಕಾತರದಿಂದ ಕಾಯುತ್ತಿದ್ದರೆ, ಬುಧವಾರ ರಾತ್ರಿ ವೀರಪ್ಪನ್ ಮತ್ತೊಂದು ಆಡಿಯೋ ಕ್ಯಾಸೆಟ್ ಕಳುಹಿಸಲಿದ್ದಾನೆ ಎಂಬ ಸುದ್ದಿ ಇದೀಗ ದೊರಕಿದೆ.
ತಮಿಳುನಾಡಿನ ಉನ್ನತ ಪೊಲೀಸ್ ಮೂಲಗಳು ಈ ವಿಷಯವನ್ನು ಸ್ಪಷ್ಟಪಡಿಸಿವೆ. ಈ ಮಧ್ಯೆ ವೀರಪ್ಪನ್ನಿಂದ ಮತ್ತೊಂದು ಕ್ಯಾಸೆಟ್ ಬುಧವಾರ ರಾತ್ರಿ ಅಥವಾ ಗುರುವಾರ ಬೆಳಗ್ಗೆ ಚೆನ್ನೈಗೆ ಬರಲಿದೆ ಎಂಬ ಸುದ್ದಿ ಮತ್ತೆ ಹತ್ತು ಹಲವು ವದಂತಿಗಳನ್ನು ಹುಟ್ಟುಹಾಕುತ್ತಿದೆ. ವೀರಪ್ಪನ್ ಮತ್ತೊಂದು ಕಂತಿನ ಬೇಡಿಕೆಯನ್ನು ಈ ಕ್ಯಾಸೆಟ್ ಮೂಲಕ ಕಳುಹಿಸುತ್ತಿದ್ದಾನೆ. ಈ ಕ್ಯಾಸೆಟ್ನೊಂದಿಗೆ ಡಾ. ರಾಜ್ಕುಮಾರ್ ಹಾಗೂ ಇತರ ಒತ್ತೆಯಾಳುಗಳ ಫೋಟೋಗಳು ಸಹ ಬರಲಿವೆ ಎನ್ನುವ ಸುದ್ದಿ ಹಬ್ಬಿದೆ.
ಮತ್ತೊಂದು ಕಂತಿನ ಬೇಡಿಕೆಯಲ್ಲಿ ಏನೆಲ್ಲಾ ಅಂಶಗಳು ಅಡಕವಾಗಿವೆ ಎಂಬ ಬಗ್ಗೆಯೂ ಊಹಾಪೋಹಗಳು ಇವೆ. ಯಾವುದೇ ಕ್ಷಣದಲ್ಲಾದರೂ ಡಾ. ರಾಜ್ಕುಮಾರ್ ಬಿಡುಗಡೆ ಆಗಬಹುದು ಎನ್ನುವ ಉತ್ಸಾಹಕ್ಕೆ ಈ ಸುದ್ದಿ ತಣ್ಣೀರು ಎರಚಿದೆ. ರಾಜ್ಕುಮಾರ್ ಅವರ ಬಿಡುಗಡೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆಗಳು ಈಗ ಸ್ಪಷ್ಟವಾಗುತ್ತಿವೆ.
ರಾಜ್ಕುಮಾರ್ ಹಾಗೂ ಇತರ ಮೂವರು ವೀರಪ್ಪನ್ ವಶದಲ್ಲಿ ಕ್ಷೇಮವಾಗಿದ್ದಾರೆ ಎಂಬುದನ್ನು ಖಾತ್ರಿಪಡಿಸಲು ಈ ಫೋಟೋಗಳನ್ನು ಕಳುಹಿಸಲಾಗುತ್ತಿದೆ ಎಂದು ತಿಳಿದು ಬಂದಿದ್ದು, ಇನ್ನೂ ಹಲವು ಹೊಸ ಬೇಡಿಕೆಗಳನ್ನು ವೀರಪ್ಪನ್ ಮುಂದಿಡಲಿದ್ದಾನೆ ಎಂದೂ ಹೇಳಲಾಗುತ್ತಿದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications