ಕೆಪಿಸಿಎಲ್- ಸಿಂಗರೇನಿ ಒಡಂಬಡಿಕೆ : ಆರ್ಪಿಟಿಎಸ್ಗೆ 30 ಲಕ್ಷ ಟನ್ ಕಲ್ಲಿದ್ದಲು
ಬೆಂಗಳೂರು : ಕರ್ನಾಟಕ ವಿದ್ಯುತ್ ನಿಗಮ ನಿಯಮಿತ(ಕೆಪಿಸಿಎಲ್) ವು ಆಂಧ್ರಪ್ರದೇಶದ ಸಿಂಗರೇನಿ ಕಲ್ಲಿದ್ದಲು ಸಂಸ್ಥೆಯಾಂದಿಗೆ ಇಂಧನ ಪೂರೈಕೆ ಕುರಿತ ಒಪ್ಪಂದಕ್ಕೆ ಶುಕ್ರವಾರ ಸಹಿ ಹಾಕಿದೆ.
ವರ್ಷಕ್ಕೆ 1260 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸಲು ಸಾಧ್ಯವಾಗಲಿರುವ ಈ ಒಪ್ಪಂದದಿಂದ ರಾಯಚೂರಿನ ಥರ್ಮಲ್ ವಿದ್ಯುತ್ ಉತ್ಪಾದನಾ ಕೇಂದ್ರ (ಆರ್ಪಿಟಿಎಸ್) ಕ್ಕೆ ಸಿಂಗರೇನಿ ಕಲ್ಲಿದ್ದಲು ಗಣಿಯಿಂದ ಪ್ರತಿ ವರ್ಷ 30 ಲಕ್ಷ ಟನ್ ಕಲ್ಲಿದ್ದಲು ಪೂರೈಕೆಯಾಗಲಿದೆ. ಪ್ರಸ್ತುತ ಆರ್ಟಿಪಿಎಸ್ ಪ್ರತಿ ನಿತ್ಯ 25 ದಶಲಕ್ಷ ಯೂನಿಟ್ ವಿದ್ಯುತ್ತನ್ನು ಉತ್ಪಾದಿಸುತ್ತಿದ್ದು, ಸ್ಥಾವರಕ್ಕೆ 1600 ಮೆಟ್ರಿಕ್ ಟನ್ ಕಲ್ಲಿದ್ದಲಿನ ಅಗತ್ಯವಿದೆ ಎಂದು ಕೆಪಿಸಿಎಲ್ಪತ್ರಿಕಾ ಹೇಳಿಕೆ ತಿಳಿಸಿದೆ.
ಕೆಪಿಸಿಎಲ್ ಕಾರ್ಯ ನಿರ್ವಾಹಕ ನಿರ್ದೇಶಕ ಕೆ. ಜ್ಯೋತಿ ರಾಮಲಿಂಗಂ ಹಾಗೂ ಸಿಂಗರೇನಿ ಕಲ್ಲಿದ್ದಲು ಸಂಸ್ಥೆಯ ಅಧ್ಯಕ್ಷ ಶರ್ಮ ಹೈದರಾಬಾದ್ನಲ್ಲಿ ಶುಕ್ರವಾರ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿದರು ಎಂದು ಕೆಪಿಸಿಎಲ್ ಪತ್ರಿಕಾ ಪ್ರಕಟಣೆ ತಿಳಿಸಿದೆ. ದೀರ್ಘಾವಧಿಯ ಈ ಒಡಂಬಡಿಕೆಯಿಂದ ‘ಡಿ’ ದರ್ಜೆಯ ಉತ್ತಮ ಗುಣ ಮಟ್ಟದ ಕಲ್ಲಿದ್ದಲು ಪೂರೈಕೆಯಾಗಲಿದ್ದು, ರಾಯಚೂರು ಥರ್ಮಲ್ ವಿದ್ಯುತ್ ಕೇಂದ್ರದ ಕಲ್ಲಿದ್ದಲಿನ ಅಗತ್ಯ ಅರ್ಧದಷ್ಟು ಕಡಿಮೆಯಾಗಲಿದೆ.
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications