ನರಹಂತಕನ ಕಿರುಕುಳದಿಂದ ವಿಶ್ವ ಕನ್ನಡ ಮೇಳ ಮುಂದೆ ಹೋಗಬಹುದೇ ?
ಬೆಂಗಳೂರು : ಅಮೆರಿಕಾದ ಹೂಸ್ಟನ್ನಲ್ಲಿ ಸೆಪ್ಟೆಂಬರ್ 1ರಿಂದ 3ರವರೆಗೆ ನಡೆಯಬೇಕಿದ್ದ ವಿಶ್ವ ಕನ್ನಡ ಮೇಳ ಮುಂದೆ ಹೋಗಲಿರುವ ಸಂಭವವಿದೆ.
ಸಮ್ಮೇಳನದ ಗಣ್ಯ ಅತಿಥಿಯಾಗಿ ಮುಖ್ಯ ಮಂತ್ರಿ ಎಸ್.ಎಂ. ಕೃಷ್ಣ ತೆರಳಬೇಕಾಗಿತ್ತು. ಆದರೆ ವೀರಪ್ಪನ್ ರಾಜ್ಕುಮಾರ್ ಅವರನ್ನು ಅಪಹರಿಸಿರುವುದರಿಂದ ಉಂಟಾಗಿರುವ ಸಮಸ್ಯೆಯಿಂದಾಗಿ ಮುಖ್ಯ ಮಂತ್ರಿಗಳು ಹೂಸ್ಟನ್ಗೆ ಪ್ರಯಾಣಿಸುವುದು ಸಾಧ್ಯವಾಗುತ್ತಿಲ್ಲ.
ಮುಖ್ಯಮಂತ್ರಿಯ ಅಮೆರಿಕಾ ಭೇಟಿ ಕೇವಲ ಸಮ್ಮೇಳನದ ಗಣ್ಯ ಅತಿಥಿಯಾಗಿ ಭಾಗವಹಿಸುವುದಷ್ಟೇ ಆಗಿರಲಿಲ್ಲ. ಅಮೆರಿಕಾದ ಸಿಲಿಕಾನ್ ವ್ಯಾಲಿಗೂ ಭೇಟಿ ನೀಡಿ ಅಲ್ಲಿ ಕೆಲಸ ಮಾಡುತ್ತಿರುವ ಕನ್ನಡಿಗರೊಡನೆ ಸಮಾಲೋಚನೆ ನಡೆಸುವುದು ಮತ್ತು ಅಲ್ಲಿನ ಪ್ರತಿಷ್ಠಿತ ಸಾಫ್ಟ್ವೇರ್ ಕಂಪೆನಿಗಳಿಗೆ ಭೇಟಿ ನೀಡುವ ಉದ್ದೇಶವೂ ಅವರಿಗಿತ್ತು. ಸೆಪ್ಟೆಂಬರ್ 11ರಂದು ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಕೂಡ ಸಿಲಿಕಾನ್ ವ್ಯಾಲಿಗೆ ಭೇಟಿ ನೀಡಲಿದ್ದು, ಅಲ್ಲಿನ ಕನ್ನಡಿಗರಿಗೆ ಇಬ್ಬರನ್ನೂ ಒಂದೇ ವೇದಿಕೆಯಲ್ಲಿ ಕಾಣುವ, ಮಾತಾಡಿಸುವ ಬಯಕೆಯಿತ್ತು. ವೀರಪ್ಪನ್, ತಮಿಳರ ಪರವಾದ ಬೇಡಿಕೆಗಳ ಪಟ್ಟಿಯನ್ನು ಕರ್ನಾಟಕ ಸರಕಾರದ ಮುಂದಿಟ್ಟಿದ್ದು ರಾಜ್ಕುಮಾರ್ ಬಿಡುಗಡೆ ಮತ್ತಷ್ಟು ತಡವಾಗುತ್ತಿದೆ. ಈ ಎಲ್ಲಾ ಹಿನ್ನೆಲೆಯಲ್ಲಿ ವಿಶ್ವ ಕನ್ನಡ ಸಮ್ಮೇಳನವನ್ನು ಮುಂದೂಡುವ ಎಲ್ಲ ಸಾಧ್ಯತೆಗಳು ಕಂಡು ಬರುತ್ತಿವೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications