ಮಂಗಳೂರು ವಿವಿ ಉಪ ಕುಲಪತಿ ವಿರುದ್ಧ ರಾಜ್ಯಪಾಲರಿಗೆ ದೂರು
ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ. ಎಸ್. ಗೋಪಾಲ್ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಸಲು ಮಂಗಳೂರು ವಿವಿ ಕಾಲೇಜು ಉಪನ್ಯಾಸಕರ ಸಂಘಟನೆ ‘ಅಮುಕ್ತ್’ ನಿರ್ಧರಿಸಿದೆ.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅಮುಕ್ತ್ ಅಧ್ಯಕ್ಷ ಡಾ. ಕೆ. ಎಸ್. ಮಾಧವರಾವ್ ಹಾಗೂ ಪ್ರಧಾನ ಕಾಯದರ್ಶಿ ಜೋಸ್ಲನ್ ಟಿ. ಲೋಬೋ, ಉಪ ಕುಲಪತಿಗಳಲ್ಲಿ ತಮಗೆ ವಿಶ್ವಾಸ ಇಲ್ಲವಾಗಿದೆ ಎಂದರು.
ಉಪ ಕುಲಪತಿಗಳನ್ನು ಭೇಟಿಯಾಗಿ ಕೆಲ ಸಮಸ್ಯೆಗಳ ಬಗ್ಗೆ ಚರ್ಚಿಸಲು ಯತ್ನಿಸಿದರೂ ನಮಗೆ ಭೇಟಿಯ ಅವಕಾಶವನ್ನೂ ಅವರು ನೀಡುತ್ತಿಲ್ಲ. ಅದರಿಂದ ನಮಗೆ ನ್ಯಾಯ ದೊರೆಯುತ್ತಿಲ್ಲ ಎಂದು ಅವರು ದೂರಿದರು. ಪರಿಶಿಷ್ಟ ಜಾತಿ- ಪಂಗಡ ಶಿಕ್ಷಕೇತರ ಸಿಬ್ಬಂದಿ ಸಂಘಟನೆಗಳನ್ನು ವಿಭಜಿಸುವಲ್ಲಿ ಉಪಕುಲಪತಿಗಳು ಯಶಸ್ವಿಯಾಗಿದ್ದಾರೆ. ಅಮುಕ್ತ್ ವಿಭಜನೆಗೂ ಅವರು ತಂತ್ರ ರೂಪಿಸಿದ್ದಾರೆ. ಅದಕ್ಕಾಗಿ ಪ್ರಗತಿಪರ ಶಿಕ್ಷಕರ ಸಂಘಟನೆ ರೂಪಿಸಲು ಅವರು ಕುಮ್ಮಕ್ಕು ನೀಡುತ್ತಿದ್ದಾರೆಂದು ಅಮುಕ್ತ್ ಪದಾಧಿಕಾರಿಗಳು ಆಪಾದಿಸಿದರು.
ಟೀಕೆಗಳನ್ನು ತಮ್ಮ ವಿರುದ್ಧವೇ ಮಾಡಲಾಗುತ್ತಿದೆ ಎಂದು ಗೋಪಾಲ್ ಭಾವಿಸುತ್ತಿದ್ದಾರೆ. ಶಿಕ್ಷಣ ರಂಗದಲ್ಲಿರುವ ಅವರು ಸರ್ವಾಧಿಕಾರಿ ಧೋರ-ಣೆ ಬಿಟ್ಟು ಕೊಂಚವಾದರೂ ಪ್ರಜಾಪ್ರಭುತ್ವ ಮಾದರಿಯಲ್ಲಿ ವರ್ತಿಸಬೇಕು ಎಂದು ಮಾಧವರಾವ್ ಹಾಗೂ ಲೋಬೋ ಹೇಳಿದರು. ಅಮುಕ್ತ್ ನ ಮಾಜಿ ಅಧ್ಯಕ್ಷ ನರಹರಿ, ಉಪಾಧ್ಯಕ್ಷೆ ಪ್ರಸನ್ನ ಪಾರ್ವತಿ, ಜಂಟಿ ಕಾರ್ಯದರ್ಶಿ ಮೋಹಿತ್ ಕುಮಾರ್ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications