ಟಾಡಾ ಆರೋಪಿಗಳ ಬಿಡುಗಡೆ ನಿರ್ಧಾರದ ವಿರುದ್ಧ ಅರ್ಜಿ
ಮೈಸೂರು : ರಾಜ್ಕುಮಾರ್ ಹಾಗೂ ಇತರ ಮೂವರ ಬಿಡುಗಡೆಗಾಗಿ ವೀರಪ್ಪನ್ ವಿಧಿಸಿರುವ ಷರತ್ತಿನನ್ವಯ ಕರ್ನಾಟಕ ಸರಕಾರ ಟಾಡಾ ಆರೋಪಿಗಳನ್ನು ಬಿಡಲೊಪ್ಪಿರುವುದನ್ನು ಮೈಸೂರು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದ್ದು, ರಾಜ್ ಅಪಹರಣ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.
ಎಂಟು ವರ್ಷಗಳ ಹಿಂದೆ ವೀರಪ್ಪನ್ ರಕ್ತದಾಹಕ್ಕೆ ಬಲಿಯಾದ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಶಕೀಲ್ ಅಹ್ಮದ್ ಅವರ ತಂದೆ ಮೈಸೂರು ನ್ಯಾಯಾಲಯದಲ್ಲಿ ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿದ್ದಾರೆ. ರಾಜ್ಯ ಸರಕಾರ ಟಾಡಾ ಮೊಕದ್ದಮೆಗಳನ್ನು ಕೈಬಿಡುವಂತೆ ಕೋರಿ ಮೈಸೂರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.
ತಮ್ಮ ಪುತ್ರನ ಹತ್ಯೆಯೂ ಸೇರಿದಂತೆ ಹಲವು ದುಷ್ಕೃತ್ಯಗಳನ್ನು ಎಸಗಿರುವ ಆರೋಪಿಗಳ ಮೇಲಿರುವ ಟಾಡಾ ಮೊಕದ್ದಮೆಗಳ್ನು ಸರಕಾರ ಹಿಂದಕ್ಕೆ ಪಡೆಯಬಾರದು ಎಂದು ಶಕೀಲ್ ಅವರ ತಂದೆ ಅಬ್ದುಲ್ ಕರೀಂ ಈ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿರುವ ನ್ಯಾಯಾಧೀಶರು ಪ್ರತಿವಾದಿಗಳಿಗೆ ಅರ್ಜಿಯ ಬಗ್ಗೆ ವಿವರಣೆ ಸಲ್ಲಿಸಲು ಅವಕಾಶ ನೀಡಿ, ವಿಚಾರಣೆಯನ್ನು 16ನೇ ತಾರೀಖಿಗೆ ಮುಂದೂಡಿದ್ದಾರೆ.
ಬೆಂಗಳೂರು ವರದಿ: ಈ ಮಧ್ಯೆ ರಾಜ್ಕುಮಾರ್ ಹಾಗೂ ಇತರ ಮೂವರ ಬಿಡುಗಡೆ ಪ್ರಕ್ರಿಯೆ ಸಂಬಂಧ ವೀರಪ್ಪನ್ ಮುಂದಿಟ್ಟಿರುವ ಬೇಡಿಕೆಗಳಿಗೆ ಸರಕಾರದ ಉತ್ತರ ಹಾಗೂ ಸ್ಪಷ್ಟೀಕರಣದ ಕ್ರೋಡೀಕೃತ ದಾಖಲೆಗಳು ಹಾಗೂ ಅಗತ್ಯ ಕಡತಗಳೊಂದಿಗೆ ರಾಜ್ಯದ ಗೃಹ ಕಾರ್ಯದರ್ಶಿ ಎಂ.ಬಿ. ಪ್ರಕಾಶ್ ಹಾಗೂ ಸಮನ್ವಯಾಧಿಕಾರಿ ಶ್ರೀನಿವಾಸ್ ಅವರು ಚೆನ್ನೈಗೆ ತೆರಳಿದ್ದಾರೆ ಎಂದು ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಸೋಮವಾರ ತಿಳಿಸಿದ್ದಾರೆ.
ದಾಖಲೆಗಳೊಂದಿಗೆ ತೆರಳಿರುವ ಗೃಹ ಕಾರ್ಯದರ್ಶಿ ತಮಿಳುನಾಡಿನ ಉನ್ನತ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದಾರೆ. ಈ ಸಂಬಂಧ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಪೊಲೀಸ್ ಅಧಿಕಾರಿ ಶ್ರೀನಿವಾಸನ್ ಸಹ ಭಾಗವಹಿಸಿದ್ದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications