ಆಗ-ಸ್ಟ್ 20 ರಂದು ನಗ-ರ-ದ-ಲ್ಲಿ ಬಿಸಿ-ಸಿ-ಐ ಕಾರ್ಯ-ಕಾ-ರಿ ಸಮಿ-ತಿ ಸಭೆ
ಬೆಂಗಳೂರು : ಆಗಸ್ಟ್ 20ರಂದು ನಗರದಲ್ಲಿ ಬಿಸಿಸಿಐ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ಹೊಸ ಕ್ರಿಕೆಟ್ ನೀತಿ ಸಂಹಿತೆಯ ಕರಡಿಗೆ ಅಂತಿಮ ರೂಪು ಕೊಡಲಾಗುವುದು.
ಕ್ರಿಕೆಟಿಗರು, ಅಂಪೈರುಗಳು ಹಾಗೂ ಅಧಿಕಾರಿಗಳಿಗೆ ಈ ನೀತಿ ಸಂಹಿತೆ ಅನ್ವಯವಾ-ಗಲಿದೆ. ಆಂಧ್ರ ಕ್ರಿಕೆಟ್ ಅಸೋಸಿಯೇಶನ್ನ ಡಿ.ವಿ.ಸುಬ್ಬರಾವ್, ತಮಿಳುನಾಡು ಕ್ರಿಕೆಟ್ ಅಸೋಸಿಯೇಶನ್ನ ಅಶೋಕ್ ಕುಂಭಟ್ ಹಾಗೂ ವಿದ-ರ್ಭಾ ಕ್ರಿಕೆಟ್ ಒಕ್ಕೂಟದ ಶಶಾಂಕ್ ಮನೋಹರ್ ಸಿದ್ಧಪಡಿಸಿರುವ ಹೊಸ ಕ್ರಿಕೆಟ್ ನೀತಿ ಕರಡಿಗೆ ಅಂತಿಮ ರೂಪು ನೀಡಿದ ನಂತರ ಕ್ರೀಡಾ ಸಚಿವಾಲಯಕ್ಕೆ ಕರಡನ್ನು ಸಲ್ಲಿಸಲಾಗುವುದು ಎಂದು ಬಿಸಿಸಿಐ ತಿಳಿಸಿದೆ. ಸಭೆಯಲ್ಲಿ ಬಿಸಿಸಿಐ ಅ-ಧ್ಯಕ್ಷ ಎ.ಸಿ.ಮುತ್ತಯ್ಯ ಹಾಗೂ ಕಾರ್ಯದರ್ಶಿ ಜೆ. ಲೆಲೆ ಭಾಗವಹಿಸಲಿದ್ದಾರೆ.
ಹೊಸ ಕ್ರಿಕೆಟ್ ನೀತಿ ಸಂಹಿತೆ ಕರಡಿನ ತಿರುಳಿನ ನೋಟ
- ಕ್ರಿಕೆಟಿಗರು, ತರಬೇತುದಾರ ಹಾಗೂ ಕಾರ್ಯ ನಿರ್ವಾಹಕ ಅಧಿಕಾರಿ ಮಾಧ್ಯಮಗಳಿಗೆ ಯಾವುದೇ ಹೇಳಿಕೆಗಳನ್ನು ಕೊಡಕೂಡದು
- ಪಂದ್ಯದ ವೇಳೆ ಆಟಗಾರರಿಗೆ ಅನಾರೋಗ್ಯವಿದ್ದಲ್ಲಿ ಅದನ್ನು ಮುಚ್ಚಿಡದೆ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ತರಬೇತುದಾರರಿಗೆ ತಿಳಿಸಬೇಕು
- ವಿದೇಶಗಳಲ್ಲಿ ಗಳಿಸುವ ಹಣ (ದಿನದ ಭತ್ಯೆ ಹೊರತು ಪಡಿಸಿ) ದ ವಿವರವನ್ನು ಬಿಸಿಸಿಐಗೆ ನೀಡಬೇಕು. ಇದರಲ್ಲಿ ಬಹುಮಾನದ ಮೊತ್ತವೂ ಸೇರಿರುತ್ತದೆ. ಬಹುಮಾನದ ಮೊತ್ತವ-ನ್ನು ರುಪಾಯಿಗಳಿಗೆ ಪರಿವರ್ತಿಸಿ ನೀಡಲಾಗುತ್ತದೆ
- ಕ್ರಿಕೆಟಿಗರಾಗಲೀ, ಅಧಿಕಾರಿಗಳಾಗಲೀ ಪಂದ್ಯದ ಮೇಲೆ ಬಾಜಿ ಕಟ್ಟಕೂಡದು
- ಸೆಲ್ಫೋನುಗಳನ್ನು ಕ್ರೀಡಾಂಗಣಕ್ಕೆ ಒಯ್ಯುವಂತಿಲ್ಲ
- ಆಟಗಾರರು ಯಾವುದೇ ಗೆಳೆಯರನ್ನು ಕ್ರೀಡಾಂಗಣಕ್ಕೆ ಕರೆದೊಯ್ಯುವಂತಿಲ್ಲ
- ಯಾವುದಾದರೂ ಬುಕ್ಕಿ ಸಂಪರ್ಕಿಸಿದಲ್ಲಿ, ತಕ್ಷಣವೇ ಸ್ಥಳೀಯ ಪೊಲೀಸರಿಗೆ ಆಟಗಾರರು ದೂರು ಕೊಡಬೇಕು
- ಆಟಗಾರರು ಜಾತೀಯತೆ ಬಿಂಬಿಸುವ ರೀತಿಯಲ್ಲಿ ವರ್ತಿಸಕೂಡದು
(ಯುಎನ್ಐ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications