ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಬರಪೊಳೆ ಸೇತುವೆ ಕಾಮಗಾರಿ ಸ್ಥಗಿತ
ಕೂಟಿಯಾಲ : ಅರಣ್ಯ ಇಲಾಖೆಯ ಆಕ್ಷೇಪಣೆಯನ್ನು ಪರಿಗಣಿಸಿ ಕೊಡಗಿನ ಬರಪೊಳೆ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸುವ ಕೆಲಸವನ್ನು ಸ್ಥಗಿತಗೊಳಿಸಲಾಗಿದೆ .
ಸೇತುವೆಗಾಗಿ ನಾಲ್ಕು ಭಿತ್ತಿ ಸ್ಥಂಭಗಳ ನಿರ್ಮಾಣ ಕಾರ್ಯ ಮುಗಿದಿದ್ದರೂ, ಅರಣ್ಯ ಇಲಾಖೆಯ ಆಕ್ಷೇಪಣೆಯನ್ನು ಪರಿಗಣಿಸಿ ಕೆಲಸ ತಡೆಹಿಡಿಯಲಾಗಿದೆ. ಸೇತುವೆ ನಿರ್ಮಾಣದಿಂದಾಗಿ ಮೀಸಲು ಅರಣ್ಯ ಪ್ರದೇಶ ನಾಶವಾಗುತ್ತದೆ ಎಂದು ಅರಣ್ಯ ಇಲಾಖೆ ಆಕ್ಷೇಪಿಸಿತ್ತು. ಸೇತುವೆ ನಿರ್ಮಾಣದಿಂದಾಗಿ ಮೀಸಲು ಅರಣ್ಯ ಪ್ರದೇಶದಲ್ಲಿ ಜನ ಸಂಚಾರ ಹೆಚ್ಚಾಗಿ, ವನ್ಯ ಜೀವಿ ಸಂರಕ್ಷಣೆಗೆ ತೊಂದರೆಯಾಗುತ್ತದೆ ಮತ್ತು ಅಕ್ರಮ ಮರ ಸಾಗಾಣಿಕೆಗೆ ಅನುವು ಮಾಡಿಕೊಟ್ಟಂತಾಗುತ್ತದೆ ಎಂದು ಇಲಾಖೆ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ಸೇತುವೆ ಕಾಮಗಾರಿ ಸ್ಥಗಿತಗೊಂಡಿದೆ.
Comments
Story first published: Saturday, August 19, 2000, 0:00 [IST]