ಯಾವುದೇ ಕ್ಷಣದಲ್ಲಿ ರಾಜ್ಕುಮಾರ್ ಬಿಡುಗಡೆ : ಖರ್ಗೆ
ಬೆಂಗಳೂರು : ಸಂಧಾನಕಾರ ಗೋಪಾಲ್ ಅವರು ವೀರಪ್ಪನ್ ಜತೆ ಸಂಪರ್ಕ ಸಾಧಿಸಿದ್ದು, ಅವರು ಈ ಬಾರಿ ತಮ್ಮ ಜತೆಯಲ್ಲೇ ರಾಜ್ಕುಮಾರ್ ಹಾಗೂ ಮತ್ತಿತರ ಮೂವರು ಒತ್ತೆಯಾಳುಗಳನ್ನು ಸುರಕ್ಷಿತವಾಗಿ ಕರೆದುಕೊಂಡು ಬರುತ್ತಾರೆ. ರಾಜ್ಕುಮಾರ್ ಅವರ ಬಿಡುಗಡೆ ಯಾವುದೇ ಕ್ಷಣದಲ್ಲಿ ಬೇಕಾದರೂ ಆಗಬಹುದು ಎಂಬ ವಿಶ್ವಾಸವನ್ನು ರಾಜ್ಯ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ವ್ಯಕ್ತಪಡಿಸಿದ್ದಾರೆ.
ಮೈಸೂರು ನ್ಯಾಯಾಲಯವು ವೀರಪ್ಪನ್ ಸಹಚರರ ಮೇಲಿನ ಟಾಡಾ ಮೊಕದ್ದಮೆಗಳನ್ನು ಕೈಬಿಡಲು ರಾಜ್ಯ ಸರಕಾರಕ್ಕೆ ಅನುಮತಿ ನೀಡಿದ್ದು, ಇನ್ನು ಜಾಮೀನು ಪ್ರಕ್ರಿಯೆ ವಿಳಂಬವಾಗುವುದಿಲ್ಲ. ಇದರಿಂದ ವೀರಪ್ಪನ್ ಸಂತುಷ್ಟನಾಗುತ್ತಾನೆ ಹಾಗೂ ರಾಜ್ ಅವರನ್ನು ಗೋಪಾಲ್ ಅವರ ಜತೆಯಲ್ಲೇ ಕಳಿಸಿಕೊಡುತ್ತಾನೆ ಎಂಬ ಭರವಸೆ ತಮಗಿದೆ ಎಂದರು.
ಶಾಲೆಗಳಲ್ಲಿ ಮತ್ತೆ ಬಾಂಬ್ ಬೆದರಿಕೆ: ಬೆಂಗಳೂರಿನ ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂಬ ಹುಸಿ ದೂರವಾಣಿ ಕರೆ ಶನಿವಾರವೂ ಮುಂದುವರಿದಿದೆ. ರಾಜಾಜಿನಗರದ ಕೆಟಿಎಸ್ಸಿ ಕಾಲೇಜ್ ಹಾಗೂ ಕಾಮಾಕ್ಷಿ ಪಾಳ್ಯದ ಎಸ್.ವಿ.ಜಿ. ಸನ್ರೈಸ್ ಶಾಲೆಗಳು ಇಂದಿನ ಹುಸಿಬಾಂಬ್ ಕರೆಯಿಂದ ತತ್ತರಿಸಿದವು ಎಂದು ನಗರ ಪೊಲೀಸ್ ಕಮೀಷನರ್ ಟಿ. ಮಡಿಯಾಳ್ ತಿಳಿಸಿದರು.
ಆದಾಗ್ಯೂ ಪೊಲೀಸರು, ಶ್ವಾನದಳ ಹಾಗೂ ಬಾಂಬ್ ನಿಷ್ಕಿೃಯ ದಳದೊಂದಿಗೆ ಶಾಲೆಗಳಲ್ಲಿ ಬಾಂಬ್ಗೆ ಶೋಧಿಸಿದರು. ತಪಾಸಣೆಯ ನಂತರ ಇವು ಹುಸಿ ಬಾಂಬ್ ಕರೆಗಳು ಎಂದು ಸಾಬೀತಾಯಿತು ಎಂದು ತಿಳಿಸಿದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications