ಬಿಸಿಸಿಐನಿಂದ ಹೊಸ ಕ್ರಿಕೆಟ್ ನೀತಿ ಸಂಹಿತೆ ಜಾರಿ
ಬೆಂಗಳೂರು : ಭಾನುವಾರ ನಡೆದ ಬಿಸಿಸಿಐ ಕಾರ್ಯಕಾರಿ ಸಮಿತಿ ಸಭೆ ಹೊಸ ನೀತಿ ಸಂಹಿತೆ ಕರಡಿಗೆ ಅಂತಿಮ ರೂಪು ನೀಡಿದ್ದು, ಸಂಹಿತೆಯು ಭಾನುವಾರದಿಂದಲೇ ಅಸ್ತಿತ್ವಕ್ಕೆ ಬಂದಿದೆ.
ಸಭೆಯ ನಂತರ ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಬಿಸಿಸಿಐ ಅಧ್ಯಕ್ಷ ಎ.ಸಿ. ಮುತ್ತಯ್ಯ ಈ ವಿಷಯ ತಿಳಿಸಿದರು. ಪ್ರಾಯೋಗಿಕವಾಗಿ ಈ ನೀತಿ ಸಂಹಿತೆ ಇಂದಿನಿಂದಲೇ ಅಸ್ತಿತ್ವಕ್ಕೆ ಬರಲಿದೆ. ಸೆಪ್ಟೆಂಬರ್ನಲ್ಲಿ ನಡೆಯಲಿರುವ ಬಿಸಿಸಿಐ ವಾರ್ಷಿಕ ಮಹಾಸಭೆಯಲ್ಲಿ ಸಂಹಿತೆಯನ್ನು ಕಾನೂನುಬದ್ಧವಾಗಿ ಅಂಗೀಕರಿಸಲಾಗುವುದು ಎಂದು ಹೇಳಿದರು.
ನೀತಿ ಸಂಹಿತೆ ನಿಯಮಾವಳಿಗಳು :
- ಕೋಚ್ ಮತ್ತು ನಾಯಕನನ್ನು ಹೊರತುಪಡಿಸಿ ಬೇರಾವ ಅಧಿಕಾರಿಯಾಗಲೀ, ಆಟಗಾರರಾಗಲೀ ಮಾಧ್ಯಮಗಳಿಗೆ ತಮ್ಮ ಅಭಿಪ್ರಾಯ ತಿಳಿಸಕೂಡದು
- ಪಂದ್ಯದ ವೇಳೆ ಆಟಗಾರರಿಗೆ ಅನಾರೋಗ್ಯವಿದ್ದಲ್ಲಿ ಅದನ್ನು ಮುಚ್ಚಿಡದೆ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ತರಬೇತುದಾರರಿಗೆ ತಿಳಿಸಬೇಕು
- ವಿದೇಶಗಳಲ್ಲಿ ಗಳಿಸುವ ಹಣ (ದಿನದ ಭತ್ಯೆ ಹೊರತು ಪಡಿಸಿ) ವನ್ನು ಬಿಸಿಸಿಐ ಲೆಕ್ಕಕ್ಕೆ ಜಮಾ ಮಾಡಬೇಕು. ಇದರಲ್ಲಿ ಬಹುಮಾನದ ಮೊತ್ತವೂ ಸೇರಿರುತ್ತದೆ. ಹಣವನ್ನು ರುಪಾಯಿಗೆ ಪರಿವರ್ತಿಸಿ ಆಯಾ ಆಟಗಾರರಿಗೆ ಬಿಸಿಸಿಐ ನೀಡುತ್ತದೆ
- ಕ್ರಿಕೆಟಿಗರಾಗಲೀ, ಅಧಿಕಾರಿಗಳಾಗಲೀ ಪಂದ್ಯದ ಮೇಲೆ ಬಾಜಿ ಕಟ್ಟಕೂಡದು. ಒಂದು ವೇಳೆ ಮೋಸದಾಟದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಲ್ಲಿ ಆಜೀವ ನಿಷೇಧ ವಿಧಿಸಿ, ದಾಖಲೆಗಳನ್ನು ಅಳಿಸಿ ಹಾಕಲಾಗುವುದು
- ಸೆಲ್ಫೋನುಗಳನ್ನು ಕ್ರೀಡಾಂಗಣಕ್ಕೆ ಒಯ್ಯುವಂತಿಲ್ಲ
- ಆಟಗಾರರು ತಮ್ಮ ಪತ್ನಿಯನ್ನು ಬಿಟ್ಟು ಬೇರೆ ಯಾವುದೇ ಗೆಳೆಯರನ್ನು ಕ್ರೀಡಾಂಗಣಕ್ಕೆ ಕರೆದೊಯ್ಯುವಂತಿಲ್ಲ. ಪತ್ನಿಯನ್ನು ಕರೆದುಕೊಂಡು ಹೋಗಲೂ ಬಿಸಿಸಿಐನ ಅನುಮತಿ ಪಡೆಯಬೇಕು
- ಯಾವುದಾದರೂ ಬುಕ್ಕಿ ಸಂಪರ್ಕಿಸಿದಲ್ಲಿ, ತಕ್ಷಣವೇ ಸ್ಥಳೀಯ ಪೊಲೀಸರಿಗೆ ಆಟಗಾರರು ದೂರು ಕೊಡಬೇಕು
ರಾಷ್ಟ್ರೀಯ ಟೂರ್ನಿ ಕಡ್ಡಾಯ : ರಾಷ್ಟ್ರೀಯ ಮಟ್ಟದ ಟೂರ್ನಿಗಳಿಗೆ ಒತ್ತು ನೀಡಲು ಮಂಡಳಿ ನಿರ್ಧರಿಸಿದೆ. ಟೆಸ್ಟ್ ಆಡುವ ಪ್ರತಿಯಾಬ್ಬ ಕ್ರಿಕೆಟಿಗ ಕಡ್ಡಾಯವಾಗಿ ರಾಷ್ಟ್ರೀಯ ಟೂರ್ನಿಗಳಲ್ಲಿ ಭಾಗವಹಿಸಬೇಕು. ಇಲ್ಲವಾದಲ್ಲಿ ಅಂಥ ಆಟಗಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ನೇಮಕ : ಸಭೆಯಲ್ಲಿ ಬಿಸಿಸಿಐನ ಕಮಿಷನರ್ ಹಾಗೂ ಕ್ಯುರೇಟರ್ಗಳನ್ನೂ ಆಯ್ಕೆ ಮಾಡಲಾಯಿತು. ಸಿಬಿಐನ ಜಂಟಿ ನಿರ್ದೇಶಕ ಮಾಧವನ್ ಅವರನ್ನು ಬಿಸಿಸಿಐನ ಕಮಿಷನರ್ ಆಗಿ ನೇಮಕ ಮಾಡಿದರೆ, ಪಿಚ್ಗಳ ಗುಣಮಟ್ಟ ಅಭಿವೃದ್ಧಿಗಾಗಿ ಕರ್ನಾಟಕದ ಡಾ. ಕಸ್ತೂರಿ ರಂಗನ್ ಅವರನ್ನು ಮುಖ್ಯ ಕ್ಯುರೇಟರ್ ಆಗಿ ಆರಿಸಲಾಗಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications