ದಸರೆಯನ್ನು ಜನತೆಯ ಹಬ್ಬವಾಗಿ ಆಚರಿಸಲು ಸಮಿತಿ ನಿರ್ಧಾರ
ಬೆಂಗಳೂರು : ಸೆಪ್ಟೆಂಬರ್ 28ರಿಂದ ವಿಶ್ವವಿಖ್ಯಾತ ಮೈಸೂರು ದಸರಾ ಆರಂಭ. ಈ ಬಾರಿಯ ಉತ್ಸವವನ್ನು ಜನತೆಯ ಹಬ್ಬವನ್ನಾಗಿ ಆಚರಿಸಲು ದಸರಾ ಉತ್ಸವ ಸಮಿತಿಯ ಮೊದಲ ಸಭೆಯಲ್ಲಿ ನಿರ್ಧರಿಸಲಾಯಿತು. ಮೈಸೂರು ನಗರವನ್ನು ಅಂದಗೊಳಿಸುವ ಸಲುವಾಗಿ 2 ಕೋಟಿ ರುಪಾಯಿಗಳು ಹಾಗೂ ರಸ್ತೆ ಕಾಮಗಾರಿಗಾಗಿ 75 ಲಕ್ಷ ರುಪಾಯಿಗಳು ಮತ್ತು ಉತ್ಸವದ ಖರ್ಚುವೆಚ್ಚಕ್ಕಾಗಿ 60 ಲಕ್ಷ ರುಪಾಯಿಗಳನ್ನು ಒದಗಿಸುವಂತೆ ಸಮಿತಿ ಸರಕಾರವನ್ನು ಕೋರಿದೆ.
ದಸರಾ ಕಾರ್ಯಕ್ರಮಗಳನ್ನು ಉದ್ಘಾಟಿಸುವಂತೆ ಸರಕಾರ ಕನ್ನಡದ ಮೇರುನಟ ಡಾ. ರಾಜ್ಕುಮಾರ್ ಅವರನ್ನು ಕೇಳಿಕೊಳ್ಳಲಿದೆ. ದಸರ ಉತ್ಸವ ಸಮಿತಿಯ ಉನ್ನತ ಮಟ್ಟದ ಸಭೆ ಈ ನಿರ್ಧಾರ ಕೈಗೊಂಡಿದೆ. ಈ ವಿಷಯವನ್ನು ರಾಜ್ಯ ಪ್ರಾಥಮಿಕ ಶಿಕ್ಷಣ ಸಚಿವ ವಿಶ್ವನಾಥ್ ತಿಳಿಸಿದ್ದಾರೆ.
ಆನೆಯ ಮೇಲೆ ಅಂಬಾರಿ ಕಂಡೆ, ಅಂಬಾರಿ ಒಳಗೆ ನಿನ್ನನ್ನೆ ಕಂಡೆ ನನ್ನೇ ನಾಕಂಡೆ........ ಎಂದು ಹಾಲು ಜೇನು ಚಿತ್ರದಲ್ಲಿ ಹಾಡಿ ಕುಣಿದ ಡಾ. ರಾಜ್ಕುಮಾರ್ ಅವರು ಈಗ ನೂರಾರು ಆನೆಗಳಿರುವ ಕಾಡಿನಲ್ಲಿ ಆನೆಗಳ ಹಂತಕ ವೀರಪ್ಪನ್ ವಶದಲ್ಲಿದ್ದಾರೆ.
ಆದರೂ, ಅತಿಶೀಘ್ರದಲ್ಲೇ ರಾಜ್ಕುಮಾರ್ ಅವರು ಸುರಕ್ಷಿತವಾಗಿ ಹಿಂತಿರುಗುತ್ತಾರೆ ಎಂಬ ದೃಢ ವಿಶ್ವಾಸ ಹೊಂದಿರುವ ದಸರಾ ಮಹೋತ್ಸವ ಉಸ್ತುವಾರಿ ಸಮಿತಿಯ ಉನ್ನತ ಮಟ್ಟದ ಸಭೆ ರಾಜ್ ಅವರಿಂದಲೇ ಕಾರ್ಯಕ್ರಮ ಉದ್ಘಾಟನೆ ಮಾಡಿಸುವ ಯೋಜನೆ ಹಾಕಿಕೊಂಡಿದೆ.
ದಸರಾ ಕಾರ್ಯಕ್ರಮವನ್ನು ಹೇಗೆ ನಡೆಸಬೇಕು ಎಂಬ ಬಗ್ಗೆ ಸೋಮವಾರ ನಡೆದ ಪ್ರಥಮ ಸಭೆಯಲ್ಲಿ ಚರ್ಚಿಸಲಾಯಿತು. ಕನ್ನಡಿಗರ ನಾಡಹಬ್ಬವಾದ ದಸರಾವನ್ನು ಶಾಂತಿಯುತವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸಲು ಎಲ್ಲ ಕ್ರಮಕೈಗೊಳ್ಳಲಾಗುವುದು ಎಂದು ಸಭೆಯ ನಂತರ ವಿಶ್ವನಾಥ್ ತಿಳಿಸಿದರು. ದಸರೆಯ ಎಲ್ಲ ಸಿದ್ಧತೆಗಳೂ ಭರದಿಂದ ಸಾಗಿವೆ. ಹೆಚ್ಚು ಹೆಚ್ಚು ಪ್ರವಾಸಿಗರನ್ನು ಈ ಬಾರಿಯ ದಸರೆಗೆ ಆಕರ್ಷಿಸಲು ವ್ಯಾಪಕ ಪ್ರಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದೂ ಅವರು ಹೇಳಿದರು.
ದಸರಾ ಜಂಬೂಸವಾರಿಯನ್ನು ಮತ್ತಷ್ಟು ವರ್ಣರಂಜಿತವಾಗಿ ಆಚರಿಸಲು ಸಿದ್ಧತೆಗಳು ನಡೆದಿದೆ. ಸೂಕ್ತ ರಕ್ಷಣೆಗಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗುವುದು, ಮೆರವಣಿಗೆಯಲ್ಲಿ ಬಾಣ - ಬಿರುಸುಗಳ ಜತೆಗೆ ಅತ್ಯಾಧುನಿಕ ತಂತ್ರಜ್ಞಾನದ ಪ್ರದರ್ಶನವೂ ನಡೆಯಲಿದೆ ಎಂದು ಅವರು ಹೇಳಿದರು. ಹಲವು ವರ್ಷದಿಂದ ನಿಂತು ಹೋಗಿರುವ ಚಲನಚಿತ್ರೋತ್ಸವವೂ ಈ ಬಾರಿ ಪುನಾರಂಭಗೊಳ್ಳಲಿದೆ.
ಸೋಮವಾರ ನಡೆದ ಸಭೆಯಲ್ಲಿ ಸಚಿವರುಗಳಾದ ವಿಶ್ವನಾಥ್, ರಾಣಿ ಸತೀಶ್, ಶಿವಣ್ಣ, ಮೈಸೂರು ಮೇಯರ್ ನಾರಾಯಣ್, ವಸ್ತುಪ್ರದರ್ಶನ ಸಮಿತಿಯ ಅಧ್ಯಕ್ಷ ಪುಟ್ಟಸ್ವಾಮಿ, ಶಾಸಕ ಶಂಕರಲಿಂಗೇಗೌಡ, ಮೈಸೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ನಾಗರಾಜ್ ಮತ್ತಿತರ ಅಧಿಕಾರಿಗಳು ಪಾಲ್ಗೊಂಡಿದ್ದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications