ಕೇಂದ್ರ ಸಚಿವ ಪಿ.ಆರ್. ಕುಮಾರಮಂಗಳಂ ನಿಧನ
ನವದೆಹಲಿ: ಕೆಲಕಾಲದಿಂದ ಅಸ್ವಸ್ಥರಾಗಿದ್ದ ಕೇಂದ್ರ ಇಂಧನ ಖಾತೆ ಸಚಿವ ಪಿ.ಆರ್. ಕುಮಾರಮಂಗಳಂ ಬುಧವಾರ ಮುಂಜಾನೆ 4.40ಕ್ಕೆ ಇಲ್ಲಿನ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಎಐಐಎಂಎಸ್) ನಿಧನರಾದರು. ಅವರಿಗೆ 48 ವರ್ಷ ವಯಸ್ಸಾಗಿತ್ತು .
ತೀವ್ರ ಜ್ವರದ ಕಾರಣವಾಗಿ ಆಗಸ್ಟ್ 12 ರಂದು ಎಐಐಎಂಎಸ್ಗೆ ಕುಮಾರಮಂಗಳಂ ಅವರನ್ನು ದಾಖಲು ಮಾಡಲಾಗಿತ್ತು. ವೈದ್ಯಕೀಯ ತಪಾಸಣೆಯ ನಂತರ ಅವರು ಲ್ಯುಕೇಮಿಯಾದಿಂದ ಬಳಲುತ್ತಿರುವುದು ಪತ್ತೆಯಾಗಿತ್ತು. ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.
ಸಂಸತ್ತಿನಲ್ಲಿ ತಮ್ಮ ಮಾತುಗಾರಿಕೆಯಿಂದ ಗಮನ ಸೆಳೆಯುತ್ತಿದ್ದ ಕುಮಾರಮಂಗಳಂ, ತಮಿಳುನಾಡಿನ ತಿರುಚನಾಪಳ್ಳಿ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾಗಿದ್ದರು. ಅವರು, ವಾಜಪೇಯಿ ಮಂತ್ರಿಮಂಡಲದ ಜನಪ್ರಿಯ ಮಂತ್ರಿಗಳಲ್ಲಿ ಒಬ್ಬರಾಗಿದ್ದರು.
ಪ್ರಧಾನಿ ಸಂತಾಪ : ಕುಮಾರಮಂಗಳಂ ಅವರ ನಿಧನಕ್ಕೆ ಪ್ರಧಾನಿ ಎ.ಬಿ. ವಾಜಪೇಯಿ ತೀವ್ರ ಶೋಕ ಹಾಗೂ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ದೇಶ ಯುವ ನಾಯಕರೊಬ್ಬರನ್ನು ಕಳೆದುಕೊಂಡಿದೆ. ವೈಯಕ್ತಿಕವಾಗಿ ನಾನು ಗೆಳೆಯನೊಬ್ಬನನ್ನು ಕಳೆದುಕೊಂಡಿದ್ದೇನೆ ಎಂದು ಪ್ರಧಾನಿ ಶೋಕಿಸಿದ್ದಾರೆ.
(ಐಎ-ಎ--ನ್-ಎ-ಸ್)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications