ಹೈಕೋರ್ಟ್ ಪೀಠ ಸ್ಥಾಪನೆಗೆ ರಾಜ್ಯ ಸರಕಾರ ಬದ್ಧ : ಚಂದ್ರೇಗೌಡ
ಬೆಂಗಳೂರು: ಹೈಕೋರ್ಟ್ಪೀಠ ಸ್ಥಾಪನೆ ಸಂಬಂಧ ರಾಜ್ಯ ಸರಕಾರ ತನ್ನ ಸರ್ವ ಪ್ರಯತ್ನವನ್ನು ಮುಂದುವರಿಸುವುದೆಂದು ರಾಜ್ಯ ಕಾನೂನು ಮತ್ತು ಸಂಸದಿಯ ವ್ಯವಹಾರಗಳ ಖಾತೆ ಸಚಿವ ಡಿ. ಬಿ. ಚಂದ್ರೇಗೌಡ ಹೇಳಿದ್ದಾರೆ.
ಶುಕ್ರವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿರುವ ಸಚಿವರು, ಉತ್ತರ ಕರ್ನಾಟಕದಲ್ಲಿ ಹೈಕೋರ್ಟ್ಪೀಠ ಸ್ಥಾಪನೆಗೆ ಸರಕಾರ ಬದ್ಧವಾಗಿದೆ. ಆದರೆ, ರಾಜ್ಯಕ್ಕೆ ಮತ್ತೊಂದು ಹೈಕೋರ್ಟ್ ಪೀಠ ಬೇಕೆಂದು ಕರ್ನಾಟಕದಿಂದ ಯಾವುದೇ ಮನವಿ ಬಂದಿಲ್ಲ ಎಂಬ ಕೇಂದ್ರ ಸಚಿವ ಅರುಣ್ ಜೈಟ್ಲಿ ಅವರು ಸಂಸತ್ನಲ್ಲಿ ನೀಡಿರುವ ಹೇಳಿಕೆಗೆ ಸಚಿವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಕೃಷ್ಣ ನೇತೃತ್ವದಲ್ಲಿ ಸರ್ವಪಕ್ಷಗಳ ನಿಯೋಗ ಪ್ರಧಾನಿ ವಾಜಪೇಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು. ಈ ಹಿಂದೆ ಕೇಂದ್ರ ಕಾನೂನು ಸಚಿವರಾಗಿದ್ದ ರಾಂಜೇಠ್ಮಲಾನಿ ಅವರಿಗೂ ಮನವಿ ಸಲ್ಲಿಸಲಾಗಿದೆ, ಇಂತಹುದರಲ್ಲಿ ಯಾವುದೇ ಅಧಿಕೃತ ಮನವಿ ರಾಜ್ಯದಿಂದ ಹೋಗಿಲ್ಲ ಎಂದು ಜೈಟ್ಲಿ ಅವರು ಹೇಳಿರುವುದಕ್ಕೆ ಚಂದ್ರೇಗೌಡ ಆಕ್ಷೇಪ ವ್ಯಕ್ತಪಡಿಸಿದರು.
ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಜಿಲ್ಲಾ ನ್ಯಾಯವಾದಿಗಳ ಸಭೆಯಲ್ಲಿ 8 ನಿರ್ಣಯ ಕೈಗೊಳ್ಳಲಾಗಿದ್ದು, ಪೀಠ ಸ್ಥಾಪನೆ ಪ್ರಯತ್ನ ಅಬಾಧಿತವಾಗಿ ಮುಂದುವರಿಯಲಿದೆ. ಪೀಠ ಸ್ಥಾಪನೆ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ್ದರೂ ಕೂಡ ರಾಜ್ಯ ಪುನರ್ ವಿಂಗಡಣೆ ಕಾಯಿದೆ ಪ್ರಕಾರ ಪೀಠ ಸ್ಥಾಪಿಸಲು ರಾಷ್ಟ್ರಪತಿ ಅವರಿಗೆ ಅಧಿಕಾರ ಇದೆ. ಹೀಗಾಗಿ ರಾಜ್ಯ ಸರಕಾರ ತನ್ನ ಪ್ರಯತ್ನ ಮುಂದುವರಿಸುವುದು ಎಂದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications