ಚಿತ್ರರಂಗದ ಚಟುವಟಿಕೆ ಆರಂಭಿಸದಂತೆ ವಾಣಿಜ್ಯ ಮಂಡಳಿಗೆ ಒತ್ತಡ
ಬೆಂಗಳೂರು : ರಾಜ್ಕುಮಾರ್ ಅವರೇ ಚಿತ್ರೋದ್ಯಮದ ಕೆಲಸ ಕಾರ್ಯ ಆರಂಭವಾಗಬೇಕು ಎಂದು ಪ್ರಾರ್ಥಿಸಿದ್ದರೂ, ರಾಜ್ ಅಭಿಮಾನಿಗಳು, ಚಿತ್ರರಂಗದ ಚಟುವಟಿಕೆ ಆರಂಭಿಸದಂತೆ ಶುಕ್ರವಾರ ವಾಣಿಜ್ಯ ಮಂಡಳಿಗೆ ಒತ್ತಡ ಹೇರಿದ್ದಾರೆ. ಇದಕ್ಕಾಗಿ ಮಂಡಳಿಯ ಎದುರು ಶುಕ್ರವಾರ ರಾಜ್ ಅಭಿಮಾನಿಗಳು ಹಾಗೂ ಕನ್ನಡ ಸಂಘ- ಸಂಸ್ಥೆಗಳ ಕಾರ್ಯಕರ್ತರು ಭಾರಿ ಪ್ರದರ್ಶನ ನಡೆಸಿದರು.
ಪ್ರತಿಭಟನಾಕಾರರನ್ನು ರಾಜ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ. ಗೋವಿಂದು ಸಮಾಧಾನಪಡಿಸಿದರು. ರಾಜ್ ಅಭಿಮಾನಿಗಳ ಒತ್ತಾಯಕ್ಕೆ ಮನ್ನಣೆ ನೀಡಿರುವ ಮಂಡಳಿ ಇನ್ನೂ ಕೆಲ ಕಾಲ ಚಿತ್ರೋದ್ಯಮ ಬಂದ್ ಆಚರಿಸಲು ನಿರ್ಧರಿಸಿದೆ. ರಾಜ್ಕುಮಾರ್ ಅವರ ಮಾತುಗಳ ಮೇಲೆ ನಮಗೆ ಅಪಾರ ಗೌರವ ಇದೆ. ಆದಾಗ್ಯೂ ರಾಜ್ ಬರುವ ತನಕ ಚಿತ್ರೋದ್ಯಮದ ಕೆಲಸ ಕಾರ್ಯ ಮುಂದುವರಿಸಲು ಯಾರೂ ಇಚ್ಛಿಸುತ್ತಿಲ್ಲ . ಇದು ಸಾರ್ವತ್ರಿಕ ನಿರ್ಧಾರ ಎಂದು ಕೆ.ಸಿ.ಎನ್. ಚಂದ್ರಶೇಖರ್ ತಿಳಿಸಿದ್ದಾರೆ.
ರಾಜ್ಕುಮಾರ್ ಅವರ ಮನವಿಯ ಹಿನ್ನೆಲೆಯಲ್ಲಿ ಶುಕ್ರವಾರ ನಡೆದ ಮಂಡಳಿಯ ತುರ್ತು ಸಭೆಯಲ್ಲಿ ಸಾ.ರಾ. ಗೋವಿಂದು, ರಾಕ್ಲೈನ್ ವೆಂಕಟೇಶ್, ನಿರ್ದೇಶಕ ಸಿದ್ಧಲಿಂಗಯ್ಯ, ರಾಮು, ಅಶೋಕ್ ಮುಂತಾದವರು ಪಾಲ್ಗೊಂಡಿದ್ದರು.
ತುರ್ತುನಿಧಿಯಿಂದ ಕಾರ್ಮಿಕರಿಗೆ ಉಚಿತ ಆಹಾರ ಧಾನ್ಯ : ಚಿತ್ರೋದ್ಯಮದ ಕೆಲಸ ನಡೆಯುತ್ತಿಲ್ಲವಾದ್ದರಿಂದ ಕಾರ್ಮಿಕರು ಉಪವಾಸ ಬೀಳುವಂತಾಗಿರುವುದನ್ನು ಮನಗಂಡ ಉದ್ಯಮ ತುರ್ತುನಿಧಿಯಿಂದ ಶುಕ್ರವಾರದಿಂದಲೇ ಉಚಿತವಾಗಿ 10 ಕೆ.ಜಿ. ಅಕ್ಕಿ, ಒಂದು ಕೆ.ಜಿ. ಬೇಳೆ, ಸಕ್ಕರೆ ಹಾಗೂ ಅಡಿಗೆ ಅನಿಲ ಪೂರೈಸಲು ನಿರ್ಧರಿಸಿದೆ.
ಈ ವಿಷಯವನ್ನು ಕರ್ನಾಟಕ ಚಲನಚಿತ್ರ ಕಲಾವಿದರ, ತಂತ್ರಜ್ಞರ, ಕಾರ್ಮಿಕರ ಒಕ್ಕೂಟದ ಅಧ್ಯಕ್ಷ ಆಶೋಕ್ ತಿಳಿಸಿದ್ದಾರೆ.
ರಾಜ್ಕುಮಾರ್ ಕುಟುಂಬದಲ್ಲಿ ಹೆಚ್ಚಿದ ಕಳವಳ: ಈ ಮಧ್ಯೆ ರಾಜ್ಕುಮಾರ್ ಅವರ ಬಿಡುಗಡೆ ವಿಳಂಬವಾಗುತ್ತಿರುವ ಬಗ್ಗೆ ಅವರ ಕುಟುಂಬ ವರ್ಗದವರು ವ್ಯಾಕುಲಗೊಂಡಿದ್ದಾರೆ. ರಾಜ್ ಇಲ್ಲದ ನಿವಾಸಕ್ಕೆ ಅಭಿಮಾನಿಗಳು ಬಂದು ಹೋಗುತ್ತಿದ್ದಾರೆ. ರಾಜ್ ಕುಟುಂಬಕ್ಕೆ ಸಾಂತ್ವನ ಹೇಳುತ್ತಿದ್ದಾರೆ. ಆದರೂ ದುಗುಡ ಮನೆ ಮಾಡಿದೆ.
ಗುರುವಾರ ರಾತ್ರಿ ರಾಜ್ಕುಮಾರ್ ಅವರ ವಿಡಿಯೋ ಸಂದೇಶ ಬಿತ್ತರವಾದಾಗ, ಅವರ ಬಾಡಿದ ಮುಖ ನೋಡಿದ ಮೇಲಂತೂ ರಾಜ್ ಕುಟುಂಬದಲ್ಲಿ ಹೇಳಿಕೊಳ್ಳಲಾರದ ತಳಮಳ ಉಂಟಾಗಿದೆ. ಎಲ್ಲ ಪ್ರಯತ್ನಗಳೂ ಆದ ಮೇಲೆ ಈಗ ದೇವರ ಮೇಲೆ ಭಾರ ಹಾಕಿ ಕುಳಿತಿದ್ದಾರೆ. ಗೋಪಾಲ್ ಜತೆಯೇ ರಾಜ್ ಬರುತ್ತಾರೆಂದು ನಿರೀಕ್ಷಿಸಿದ್ದ ಪಾರ್ವತಮ್ಮ ರಾಜ್ಕುಮಾರ್ ಈಗ ಮಂಕಾಗಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications