ಜನಗಣತಿಯಲ್ಲಿ ಜಾತಿಯನ್ನು ನಮೂದಿಸಬೇಕು : ಪ್ರಧಾನಿಗೆ ಮೊೖಲಿ ಪತ್ರ
ಬೆಂಗಳೂರು : ಬರುವ ಸಾಲಿನ ಫೆಬ್ರವರಿ-ಮಾರ್ಚ್ನಲ್ಲಿ ಆರಂಭವಾಗಲಿರುವ ಜನಗಣತಿಯಲ್ಲಿ ಜಾತಿ ಮತ್ತು ಜನಾಂಗವನ್ನು ಸ್ಪಷ್ಟವಾಗಿ ನಮೂದಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊೖಲಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಒತ್ತಾಯಿಸಿದ್ದಾರೆ.
ಜನ-ಗ-ಣ-ತಿ ಸಂದ-ರ್ಭ-ದ-ಲ್ಲಿ ಜಾತಿ-ಯ-ನ್ನು ನಮೂ-ದಿ-ಸು-ವ ವಿಷಯವಾಗಿ ಪ್ರಧಾನಿಗಳಿಗೆ ಬರೆದ ಪತ್ರವನ್ನು - ಮೊೖ-ಲಿ ಮಂಗ-ಳ-ವಾ-ರ ಸುದ್ದಿಗೋಷ್ಠಿಯಲ್ಲಿ ಬಿಡುಗಡೆ ಮಾಡಿ ಮಾತನಾಡುತ್ತಿದ್ದರು. ಜನಗಣತಿಯಲ್ಲಿ ಜಾತಿಯ ಬಗ್ಗೆ ಸರಿಯಾದ ಮಾಹಿತಿಯನ್ನು ನಮೂದಿಸುವುದರಿಂದ ಆ ಜಾತಿಯ ಹಿಂದುಳಿದಿರುವಿಕೆಯನ್ನು ನಿರ್ಧರಿಸುವುದು ಸುಲಭವಾಗುತ್ತದೆ, ಹಿಂದುಳಿದ ಜಾತಿ ಮತ್ತು ಜನಾಂಗದ ಅಭಿವೃದ್ಧಿಯ ಬಗ್ಗೆ ವೈಜ್ಞಾನಿಕ ಅಧ್ಯಯನಕ್ಕೆ ಅನುಕೂಲವಾಗುತ್ತದೆ. ಆಯಾ ಜಾತಿ, ಜನಾಂಗಕ್ಕೆ ಸಂಬಂಧಿಸಿದಂತೆ ಕಲ್ಯಾಣ ಯೋಜನೆಗಳನ್ನು ಹಮ್ಮಿಕೊಳ್ಳುವಲ್ಲಿ ಮತ್ತು ಒಂದು ಜಾತಿ ಅಥವಾ ಜನಾಂಗದ ಸಾಮಾಜಿಕ ಬದಲಾವಣೆಯ ಹಂತಗಳು, ಅದರ ಬೆಳವಣಿಗೆಗಳ ಕುರಿತು ವಿಷ್ಲೇಷಣೆ ನಡೆಸುವುದಕ್ಕೂ ಜನಗಣತಿ ವರದಿ ಸಹಕಾರಿಯಾಗುತ್ತದೆ ಎಂದು ಮೊೖಲಿ ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ.
ಮಂಡಲ ಅಯೋಗ ಶಿಫಾರಸ್ಸುಗಳ ಅಳವಡಿಕೆ, ನ್ಯಾಯಮೂರ್ತಿ ಚಿನ್ನಪ್ಪ ರೆಡ್ಡಿ ಆಯೋಗದ ಶಿಫಾರಸ್ಸಿನ ಅಳವಡಿಕೆ ಹಾಗೂ ಹಿಂದುಳಿದ ಜಾತಿ ಮತ್ತು ಜನಾಂಗದವರಿಗೆ ಮೀಸಲಾತಿ ನೀಡಿಕೆಯ ಸಂದರ್ಭದಲ್ಲಿಯೂ ಜನಗಣತಿ ವರದಿಯಲ್ಲಿ ನಮೂದಾಗುವ ಜಾತಿ ವಿವರಣೆಗಳು ಅಗತ್ಯವಾಗುತ್ತವೆ. ಹಿಂದುಳಿದಿರುವಿಕೆಯನ್ನು ನಿರ್ಧರಿಸುವಲ್ಲಿ ಜಾತಿಯೂ ಒಂದಂಶವಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್ ಕೂಡ ಹೇಳಿರುವುದನ್ನು ಮೊೖಲಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
(ಯುಎನ್ಐ)
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications