ನಾಲ್ಕು ವರ್ಷ-ಗ-ಳ-ಲ್ಲಿ ಕೋಟಿ ಗಿಡ -ನೆ-ಡ-ಲು ಸರ್ಕಾ-ರ-ದ ನಿರ್ಧಾ-ರ
ಬೆಂಗಳೂರು :ನೀರಾವರಿ ಇಲಾಖೆಯ ಜಮೀನಿನಲ್ಲಿ ಇನ್ನು ನಾಲ್ಕು ವರ್ಷಗಳೊಳಗೆ ಒಂದು ಕೋಟಿ ಸಸ್ಯ ಬೆಳೆಸಲು ಸರಕಾರ ನಿರ್ಧರಿಸಿದೆ ಎಂದು ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವ ಎಚ್.ಕೆ. ಪಾಟೀಲ್ ಸೋಮವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಉದ್ಯೋಗಾವಕಾಶವನ್ನು ಹೆಚ್ಚಿಸುವ ಮತ್ತು ಪರಿಸರ ಸಂರಕ್ಷಿಸುವ ಉದ್ದೇಶದಿಂದ ಈ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಕಳೆದ ಮಾರ್ಚ್ನಲ್ಲಿ ಪರಿಸರದ ಸಮಗ್ರ ಅಧ್ಯಯನಕ್ಕಾಗಿ, ಪರಿಸರವಾದಿ ಯಲ್ಲಪ್ಪ ರೆಡ್ಡಿ ನೇತೃತ್ವದಲ್ಲಿ ರಚಿಸಲಾದ ಸಮಿತಿಯ ಮಧ್ಯಂತರ ವರದಿ ಈಗಾಗಲೇ ಸರಕಾರದ ಕೈಸೇರಿದೆ. ಸಮಿತಿಯ ಶಿಫಾರಸ್ಸಿನ ಮೇರೆಗೆ ಕೋಟಿ ಸಸ್ಯ ನೆಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅಲ್ಲದೆ ಈ ಯೋಜನೆಗೆ ರಾಷ್ಟ್ರೀಯ ಹೈನುಗಾರಿಕೆ ಅಭಿವೃದ್ಧಿ ಬ್ಯಾಂಕ್ 120ರಿಂದ 150 ಕೋಟಿ ರುಪಾಯಿ ನೆರವು ನೀಡಲಿದ್ದು, ಯೋಜನೆಯ ನಿರ್ವಹಣೆಗೆ 20 ಮಂದಿಯ ಸಮಿತಿ ರಚಿಸಲಾಗಿದೆ ಎಂದರು.
ರಾಜ್ಯದಲ್ಲಿರುವ ನೀರಾವರಿ ಕಾಲುವೆ ಮತ್ತು ಅಕ್ಕಪಕ್ಕದಲ್ಲಿರುವ ಜಾಗದಲ್ಲಿ ಹಾಗೂ ಆಲಮಟ್ಟಿ, ಹಾರಂಗಿ, ಹೇಮಾವತಿ, ಕಬಿನಿ ಮತ್ತು ಭದ್ರಾ ಜಲಾಶಯ ಯೋಜನೆಯ ಮುಳುಗಡೆ ಪ್ರದೇಶಗಳಲ್ಲಿಯೂ ಗಿಡಗಳನ್ನು ನೆಡಲಾಗುವುದು. ಸುಮಾರು ಒಂದು ಲಕ್ಷ ಕಿಲೋ ಮೀಟರ್ ಉದ್ದದ ರಸ್ತೆಯ ಇಕ್ಕೆಲದಲ್ಲಿಯೂ ಸಸಿ ನೆಡುವ ಉದ್ದೇಶ ಇದೆ.
ಹಣ್ಣು ಹಂಪಲು ಗಿಡ, ಔಷಧೀಯ ಸಸ್ಯ ಮತ್ತು ಕಾಡು ಉತ್ಪನ್ನ ಸಸ್ಯಗಳೂ ಸೇರಿದಂತೆ ಒಟ್ಟು 250 ವಿಧದ ಸಸ್ಯಗಳನ್ನು ಈ ವರ್ಷ ನೆಡಲಾಗುವುದು. ಈ ಸಸಿಗಳನ್ನು ಪೋಷಿಸುವ ಜವಾಬ್ದಾರಿಯನ್ನು ಆಯಾ ಪ್ರದೇಶದ ನೀರು ಬಳಕೆದಾರರ ಸಂಘಕ್ಕೆ ವಹಿಸಲಾಗುವುದು. ಮೊದಲ ಮೂರು ವರ್ಷ ಗಿಡಗಳ ಪಾಲನೆಗೆ , ಕಿಲೋ ಮೀಟರ್ಗೆ 50 ಸಾವಿರ ರೂಪಾಯಿ ವೆಚ್ಚವಾಗುತ್ತದೆ.
(ಇ-ನ್ಫೋ- ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications