ಸುಪ್ರೀಂಕೋರ್ಟ್ ತೀರ್ಪುನಿಂದ ರಾಜ್ ಬಿಡುಗಡೆ ವಿಳಂಬವಿಲ್ಲ : ಕೃಷ್ಣ
ಬೆಂಗಳೂರು : ಟಾಡಾ ಆರೋಪ ಎದುರಿಸುತ್ತಿರುವ ವೀರಪ್ಪನ್ ಸಹಚರರ ಬಿಡುಗಡೆ ಸಂಬಂಧ, ಸುಪ್ರೀಂಕೋರ್ಟ್ ನೀಡಿರುವ ತಡೆಯಾಜ್ಞೆಯಿಂದ ಅಪಹೃತ ರಾಜ್ ಹಾಗೂ ಸಂಗಡಿಗರ ಬಿಡುಗಡೆ ವಿಳಂಬವಾಗುವ ಸಾಧ್ಯತೆಯಿಲ್ಲ ಎಂದು ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಮಂಗಳವಾರ ಅಭಿಪ್ರಾಯಪಟ್ಟಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಅಪಹೃತರ ಬಿಡುಗಡೆಗೂ ಮತ್ತು ತಡೆಯಾಜ್ಞೆಗೂ ಸಂಬಂಧವಿಲ್ಲ ಎಂದು ಪ್ರಶ್ನೆಯಾಂದಕ್ಕೆ ಉತ್ತರಿಸಿದರು. ಅಪಹೃತರನ್ನು ಬಿಡಿಸಿಕೊಳ್ಳಲು ಸರಕಾರ ತೆಗೆದುಕೊಂಡಿರುವ ಕ್ರಮಗಳನ್ನು ಸಮರ್ಥಿಸಿ, ಸುಪ್ರಿಂಕೋರ್ಟ್ನಲ್ಲಿ ಪ್ರತಿ ಮನವಿ ಸಲ್ಲಿಸಲಾಗುವುದು ಎಂದರು.
ಈ ಮಧ್ಯೆ 51 ಆರೋಪಿಗಳ ವಿರುದ್ಧದ ಟಾಡಾ ಪ್ರಕರಣಗಳ ವಿಚಾರಣೆಯನ್ನು ಮೈಸೂರು ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಮೂರ್ತಿ ಬಿ. ಎಸ್. ರಾಜೇಂದ್ರ ಅನಿರ್ದಿಷ್ಟ ಕಾಲದವರೆಗೆ ಮುಂದೂಡಿದ್ದಾರೆ.
ಸರಕಾರದ ವಿರುದ್ಧ , ಕೋರ್ಟ್ ಮೆಟ್ಟಿಲೇರಿರುವ ವೀರಪ್ಪನ್ನಿಂದ ಹತ್ಯೆಗೊಳಗಾದ ಶಕೀಲ್ ಅವರ ತಂದೆ ಕರೀಂ ಅವರನ್ನು ಪ್ರಕರಣ ವಾಪಸ್ ತೆಗೆಯಲು ಮನವೊಲಿಸಲಾಗುವುದೇ ಎಂಬ ಪ್ರಶ್ನೆಗೆ, ಯಾರೊಬ್ಬರ ಮೂಲಭೂತ ಹಕ್ಕಿನಲ್ಲಿ ಹಸ್ತಕ್ಷೇಪ ಮಾಡುವ ಉದ್ದೇಶ ಸರಕಾರಕ್ಕಿಲ್ಲ ಎಂದು ಕೃಷ್ಣ ಹೇಳಿದ್ದಾರೆ. ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಜನ ಶಾಂತಿಯಿಂದಿರುವುದು ಅಗತ್ಯ ಎಂದು ಮತ್ತೊಮ್ಮೆ ಮನವಿ ಮಾಡಿದ್ದಾರೆ.
ಈಗ ನಡೆದಿರುವ ಬೆಳವಣಿಗೆಗಳನ್ನು ವೀರಪ್ಪನ್ಗೆ ರೇಡಿಯೋ ಮೂಲಕ ವಿವರಿಸಲಾಗುವುದೇ ಎಂಬ ಇನ್ನೊಂದು ಪ್ರಶ್ನೆಗೆ, ಈಗ ವಿವರಿಸಬೇಕಾದ್ದು ಸುಪ್ರೀಂಕೋರ್ಟ್ಗೆ ವಿನಾ ಮತ್ತಾರಿಗೋ ಅಲ್ಲ ಎಂದರು. ಗೋಪಾಲ್ ಸಾಧ್ಯವಾದಷ್ಟೂ ಮುಂಚೆ ಬರುತ್ತಾರೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು. ಟಾಡಾ ಪ್ರಕರಣ ಕೈಬಿಡುವಾಗ ಪರಾಮರ್ಶನ ಸಮಿತಿ ನೇಮಿಸದೆ ನೇರವಾಗಿ ನಿರ್ಧಾರ ಕೈಗೊಂಡಿರುವುದು ಅವಸರದ ತೀರ್ಮಾನ ವಲ್ಲವೇ ಎಂಬ ಪ್ರಶ್ನೆಗೆ, ವಿಷಯ ಈಗಾಗಲೇ ಕೋರ್ಟ್ನಲ್ಲಿರುವುದರಿಂದ ಆ ಬಗ್ಗೆ ಮಾತನಾಡಲು ತಾವು ಇಚ್ಛಿಸುವುದಿಲ್ಲ ಎಂದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications