ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಕೈದಿಗಳ ಮರುಬಂಧನ

By Staff
|
Google Oneindia Kannada News

ಶಿವಮೊಗ್ಗ : ಶಿವಮೊಗ್ಗದ ಕೇಂದ್ರ ಕಾರಾಗೃಹದಿಂದ ಬುಧವಾರ ಬೆಳಿಗ್ಗೆ ಪರಾರಿಯಾಗಿದ್ದ ಎಂಟು ವಿಚಾರಣಾಧೀನ ಕೈದಿಗಳ ಪೈಕಿ ಆರು ಮಂದಿಯನ್ನು ಕ್ಷಿಪ್ರ ಕಾರ್ಯಾಚರಣೆಯಲ್ಲಿ ಮತ್ತೆ ಬಂಧಿಸಲಾಗಿದೆ.

ಬೆಳಿಗ್ಗೆ 7 ಗಂಟೆ ಸಮಯದಲ್ಲಿ ಪರಾರಿಯಾದ ಈ ಕೈದಿಗಳನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಲಾಗಿದೆ.

ರೌಡಿಯಾಬ್ಬನ ಕೊಲೆಗೆ ಸಂಬಂಧಿಸಿದಂತೆ ಮೊಕದ್ದಮೆ ಎದುರಿಸುತ್ತಿದ್ದ ಬಂಧಿಗಳು ಜೈಲಿನ ಮುಂಭಾಗದಲ್ಲಿದ್ದ ಕಾವಲುಗಾರನ ಮೇಲೆ ಹಲ್ಲೆ ನಡೆಸಿ ಬೀಗದ ಕೈ ಕಸಿದುಕೊಂಡು ಪರಾರಿಯಾಗಿದ್ದರೆಂದು ಮೂಲಗಳು ತಿಳಿಸಿವೆ.

ಸಮೀಪದಲ್ಲೆ ಇದ್ದ ಜೈಲು ಸಿಬ್ಬಂದಿ ನಾಲ್ವರನ್ನು ಬಂಧಿಸಿದರು. ಉಳಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನಿಬ್ಬರು ತಲೆ ತಪ್ಪಿಸಿಕೊಂಡಿದ್ದು, ಪೊಲೀಸರು ಅವರ ಶೋಧದಲ್ಲಿ ತೊಡಗಿದ್ದಾರೆ.

ಕಳೆದ ಶುಕ್ರವಾರವಷ್ಟೇ ಹಾಸನ ಕಾರಾಗೃಹದಿಂದ ಕೂಡ ಆರು ಮಂದಿ ಕೈದಿಗಳು ತಪ್ಪಿಸಿಕೊಂಡಿದ್ದು, ಈ ಸಂಬಂಧ ಆರು ಪೊಲೀಸ್‌ ಅಧಿಕಾರಿಗಳನ್ನು ರಾಜ್ಯ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಅಮಾನತುಗೊಳಿಸಿದ್ದರು. ರಾಜ್ಯ ಕಾರಾಗೃಹಗಳಿಗೆ 300 ವಾರ್ಡನ್‌ಗಳನ್ನು ನೇಮಿಸಲಾಗುವುದು ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X