-ವೀ-ರ-ಪ್ಪ-ನ್ ಸಹ-ಚ-ರ-ರ ವಿರು-ದ್ಧ-ದ ಐಪಿ-ಸಿ ಮೊಕ-ದ್ದ-ಮೆ-ಗ-ಳ ವಾಪ-ಸ್ಸು ಪಡೆ-ದಿ-ಲ್ಲ
ಬೆಂಗಳೂರು : 121 ವೀರಪ್ಪನ್ ಸಹಚರರ ವಿರುದ್ಧದ ಆರೋಪಗಳನ್ನು ಭಾರತೀಯ ದಂಡ ಸಂಹಿತೆ ಪ್ರಕಾರ ರಾಜ್ಯ ಸರಕಾರ ಹಿಂತೆಗೆದುಕೊಂಡಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಡಿ.ಬಿ. ಚಂದ್ರೇಗೌಡ ಹೇಳಿದ್ದಾರೆ.
ಐಪಿಸಿ ಪ್ರಕಾರ ಮೊಕದ್ದಮೆಗಳನ್ನು ಹಿಂತೆಗೆದುಕೊಳ್ಳುವ ಬಗ್ಗೆ ಸರಕಾರ ತನ್ನ ಇಂಗಿತ ವ್ಯಕ್ತಪಡಿಸಿದ್ದರೂ, ಜಾಮೀನು ಮೇಲೆ ಕೈದಿಗಳ ಬಿಡುಗಡೆಯ ನಂತರವಷ್ಟೇ ಈ ಕುರಿತು ಪರಿಶೀಲಿಸಲಾಗುವುದು ಎಂದು ಅವರು ಬುಧವಾರದಂದು ಸುದ್ದಿಗಾರರಿಗೆ ಸ್ಪಷ್ಟಪಡಿಸಿದರು. ಸುಪ್ರೀಂ ಕೋರ್ಟ್, ವೀರಪ್ಪನ್ನಿಂದ ಹತನಾದ ಪೊಲೀಸ್ ಇನ್ಸ್ಪೆಕ್ಟರ್ ಶಕೀಲ್ ಅಹ್ಮದ್ ಅವರ ತಂದೆ ಅಬ್ದುಲ್ ಕರೀಂ ಅವರ ಆಕ್ಷೇಪಣಾ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ ಒಂದರಂದು ನಡೆಸಲಿದ್ದು ನಂತರವಷ್ಟೇ ಜಾಮೀನಿನ ಕುರಿತು ತೀರ್ಮಾನವಾಗಬೇಕಾಗಿದೆ ಎಂದರು.
ಟಾಡಾ ಅನ್ವಯ ಬಂದಿತರಾದ 51 ಮಂದಿ ವೀರಪ್ಪನ್ ಸಹಚರರ ವಿರುದ್ಧ ಹೂಡಲಾಗಿರುವ ಮೊಕದ್ದಮೆಗಳನ್ನು ಹಿಂತೆಗೆದುಕೊಳ್ಳುವ ಅಧಿಕಾರ ಸರಕಾರಕ್ಕಿದೆ ಮತ್ತು ಮೊಕದ್ದಮೆ ಹಿಂತೆಗೆದು ಕೊಳ್ಳಬೇಕಾದ ಪರಿಸ್ಥಿತಿಯ ಕುರಿತು ಸರಕಾರ, ಅಪೆಕ್ಸ್ ಕೋರ್ಟ್ಗೆ ವಿವರಣೆ ನೀಡವುದು. ತಮಿಳುನಾಡು ಸರಕಾರದೊಂದಿಗೆ ಚರ್ಚಿಸಿದ ಮೇಲಷ್ಟೇ ಮೊಕದ್ದಮೆಗಳನ್ನು ಹಿಂತೆಗೆದುಕೊಳ್ಳುವ ಕುರಿತು ಸರಕಾರ ನಿರ್ಧರಿಸಲಿದೆ ಎಂದು ಹೇಳಿದರು.
ಸುಪ್ರೀಂಕೋರ್ಟ್ ಮಧ್ಯ ಪ್ರವೇಶದಿಂದಾಗಿ ರಾಜ್ ಕುಮಾರ್ ಬಿಡುಗಡೆ ತಡವಾಗಲಿದೆಯೇ ಎಂದು ಕೇಳಲಾದ ಪ್ರಶ್ನೆಗೆ, ಸರಕಾರ ತನ್ನ ಕೈಲಾದ ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದೆ. ಆದರೆ ಸರಕಾರಕ್ಕೆ ಸುಪ್ರೀಂ ಕೋರ್ಟ್ ಮೇಲೆ ಹಿಡಿತವಿಲ್ಲ . ಈ ನಡುವೆ ಸಂಧಾನಕಾರನಾಗಿ ವೀರಪ್ಪನ್ ಅಡಗುದಾಣಕ್ಕೆ ತೆರಳಿರುವ ನಕ್ಕೀರನ್ ಗೋಪಾಲ್ ಪರಿಸ್ಥಿತಿಯ ಕುರಿತು ವೀರಪ್ಪನ್ಗೆ ವಿವರಿಸುತ್ತಾರೆ ಎನ್ನುವ ಭರವಸೆಯಲ್ಲಿ ಸರಕಾರವಿದೆ ಎಂದರು.
(ಯುಎನ್ಐ)
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications