ಸೆಪ್ಟೆಂಬರ್ 2 ರಂದು ಕರ್ನಾಟಕ ಬಂದ್ ಇಲ್ಲ : ನಾರಾಯಣ ಕುಮಾರ್
ಬೆಂಗಳೂರು : ರಾಜ್ಕುಮಾರ್ ಅವರ ಶೀಘ್ರ ಬಿಡುಗಡೆಗೆ ಒತ್ತಾಯಿಸಿ ಸೆಪ್ಟೆಂಬರ್ 2ರಂದು ನಡೆಸಲು ಉದ್ದೇಶಿಸಿದ್ದ ಕರ್ನಾಟಕ ಬಂದ್ ಅನ್ನು ಕೈಬಿಟ್ಟಿರುವುದಾಗಿ ಕನ್ನಡ ಚಳವಳಿ ನಾಯಕ ಹಾಗೂ ಮಾಜಿ ಶಾಸಕ ಜಿ. ನಾರಾಯಣ ಕುಮಾರ್ ತಿಳಿಸಿದ್ದಾರೆ.
ರಾಜ್ಕುಮಾರ್ ಅವರ ಬಿಡುಗಡೆಗೆ ನಾವು ಸೆ.1ರ ಗಡುವನ್ನು ವಿಧಿಸಿದ್ದೆವು, ರಾಜ್ ಬಿಡುಗಡೆ ಪ್ರಕ್ರಿಯೆಯಲ್ಲಿ ರಾಜ್ಯ ಸರಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿದೆ, ಸಂಧಾನಕಾರ ಗೋಪಾಲ್ ಕೂಡ ವೀರಪ್ಪನ್ ಅವರ ಮನವೊಲಿಕೆಯಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ, ರಾಜ್ ಅವರ ಬಿಡುಗಡೆಯ ಆಶಾಭಾವನೆ ವ್ಯಕ್ತವಾಗಿದೆ ಹೀಗಾಗಿ ಸೆಪ್ಟೆಂಬರ್ 2 ರಂದು ಯಾವುದೇ ಬಂದ್ ಆಚರಿಸುತ್ತಿಲ್ಲ. ಬಂದ್ಗೆ ನಾವು ದಿನಾಂಕವನ್ನೂ ನಿಗದಿ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.
ರಾಜ್ಕುಮಾರ್ ಅವರ ಬಿಡುಗಡೆ ಮತ್ತೂ ವಿಳಂಬವಾಗುವ ಸೂಚನೆಗಳು ಕಂಡು ಬಂದರೆ, ಕರ್ನಾಟಕ ಬಂದ್ ಹಾಗೂ ಪ್ರತಿಭಟನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದೂ ಎಚ್ಚರಿಕೆಯನ್ನು ನೀಡಿದ್ದಾರೆ.
ಸೆಪ್ಟೆಂಬರ್ 9ರವರೆಗೆ ನಿಷೇಧಾಜ್ಞೆ : ರಾಜ್ಕುಮಾರ್ ಅವರ ಅಪಹರಣದ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ದುಷ್ಕರ್ಮಿಗಳು ಸ್ವಾರ್ಥಕ್ಕೆ ಬಳಸಿಕೊಳ್ಳದಿರಲಿ ಎಂಬ ಕಾರಣಕ್ಕಾಗಿ ಸೆಪ್ಟೆಂಬರ್ 9ರವರೆಗೆ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಮುಂದುವರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಟಿ. ಮಡಿಯಾಳ್ ತಿಳಿಸಿದ್ದಾರೆ.
ಈ ನಿಷೇಧಾಜ್ಞೆ ಗೌರಿ - ಗಣೇಶ ಹಬ್ಬದ ಕಾರ್ಯಕ್ರಮಗಳಿಗೆ ಅನ್ವಯಿಸುವುದಿಲ್ಲ ಎಂದೂ ಅವರು ಹೇಳಿದ್ದಾರೆ.
ಮುಖಪುಟ / ರಾಜ್ ಅಪಹರಣ / ಡಾ. ರಾಜಕುಮಾರ್ ಚಿತ್ರಾವಳಿ / ರಾಜಮಾರ್ಗ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications