ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕೇಂದ್ರ ರೇಷ್ಮೆ ಮಂಡಲಿ ಅಧ್ಯಕ್ಷರಾಗಿ ಕೆ.ಎಸ್. ಈಶ್ವರಪ್ಪ
ಬೆಂಗಳೂರು : ಕೇಂದ್ರ ಸರಕಾರವು ಭಾರತೀಯ ಜನತಾ ಪಕ್ಷದ ಧುರೀಣ ಕೆ.ಎಸ್. ಈಶ್ವರಪ್ಪ ಅವರನ್ನು ಕೇಂದ್ರ ರೇಷ್ಮೆ ಮಂಡಲಿ ಅಧ್ಯಕ್ಷರನ್ನಾಗಿ ಬುಧವಾರ ನೇಮಿಸಿದೆ.
ಮೂರು ವರ್ಷಗಳ ಅವಧಿಗೆ ಈಶ್ವರಪ್ಪ ಅವರನ್ನು ರೇಷ್ಮೆ ಮಂಡಲಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಈವರೆಗೆ ಕೇಂದ್ರ ರೇಷ್ಮೆ ಮಂಡಲಿಯ ಅಧ್ಯಕ್ಷರಾಗಿ ಕರ್ನಾಟಕದ ಎಚ್. ಏಕಾಂತಯ್ಯ ಕಾರ್ಯ ನಿರ್ವಹಿಸುತ್ತಿದ್ದರು. ಈಶ್ವರಪ್ಪ ಅವರು ಪ್ರದೇಶ ಬಿಜೆಪಿ ಅಧ್ಯಕ್ಷರಾಗಿ ಮತ್ತು ಶಾಸಕಾಂಗ ಪಕ್ಷದ ನಾಯಕರಾಗಿ ಕೆಲಸ ನಿರ್ವಹಿಸಿದ್ದರು.
(ಇನ್ಫೋ ವಾರ್ತೆ)
Comments
Story first published: Thursday, August 31, 2000, 0:00 [IST]