ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕೇಂದ್ರ ಸರ್ಕಾರ ರಾಜ್ ಬಿಡಿಸದಿದ್ದಲ್ಲಿ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಬೀಗ
ಮಳವಳ್ಳಿ : ರಾಜ್ ಬಿಡುಗಡೆಗೆ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಮುಂದಾಗದಿದ್ದಲ್ಲಿ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಬೀಗ ಹಾಕುವ ಚಳವಳಿ ನಡೆಸಲು ಇಲ್ಲಿ-ನ ರಾಜ್ ಅಭಿಮಾನಿಗಳು ತೀರ್ಮಾನಿಸಿದ್ದಾರೆ.
ಈವರೆಗೆ ಕೇಂದ್ರ ಸರ್ಕಾರ ಅಣ್ಣಾವ್ರನ್ನು ವೀರಪ್ಪನ್ ಕಪಿಮುಷ್ಠಿಯಿಂದ ಬಿಡುಗಡೆ ಮಾಡಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಅದರ ಈ ನಿರ್ಲಿಪ್ತತೆ ಒಳ್ಳೆಯದಲ್ಲ. ಇದು ಹೀಗೇ ಮುಂದುವರೆದಲ್ಲಿ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಬೀಗ ಜಡಿಯುವ ಚಳವಳಿ ಪ್ರಾರಂಭಿಸುತ್ತೇವೆ ಎನ್ನುತ್ತಾರೆ ಡಾ. ರಾಜ್ ಕಲಾ ಸಂಘದ ಅಧ್ಯಕ್ಷ ಹಾಗೂ ಪುರಸಭೆಯ ಮಾಜಿ ಅಧ್ಯಕ್ಷ ದೊಡ್ಡಯ್ಯ. ರಾಜ್ ಅಭಿಮಾನಿಗಳು ಈಗಾಗಲೇ ಜಿಲ್ಲಾಧಿಕಾರಿ ಅತೀಕ್ ಅವರಿಗೆ ಈ ಬಗೆಗೆ ಮನವಿ ಪತ್ರ ಸಲ್ಲಿಸಿದ್ದು, ಅದನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡುವಂತೆ ಕೋರಿದ್ದಾರೆ.
(ಮೈಸೂರು ಪ್ರತಿನಿಧಿಯಿಂದ)
Comments
Story first published: Thursday, August 31, 2000, 0:00 [IST]