ಕನ್ನಡ ಮಾಧ್ಯಮದಲ್ಲಿ ಕಲಿತವರಿಗೆ ವೃತ್ತಿ ಶಿಕ್ಷಣದಲ್ಲಿ ಮೀಸಲಾತಿ
ಬೆಂಗಳೂರು : ಹತ್ತನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾ-ರ್ಥಿ-ಗ-ಳಿ-ಗೆ ವೃತ್ತಿ ಪರ ಕಾಲೇಜು ಪ್ರವೇ-ಶ-ದ-ಲ್ಲಿ ಮೀಸಲಾತಿ ಸೀಟುಗಳನ್ನು ನಿಗದಿ ಪಡಿಸುವ ಕುರಿತು ಸರಕಾರ ಆಲೋಚಿಸುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವ-ರು, ಈ ಪ್ರಸ್ತಾಪ ಕಾನೂನು ವಿಭಾಗದ ಮುಂದಿದ್ದು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಈ ನೀತಿಯನ್ನು ಜಾರಿಗೆ ತರುವ ಉದ್ದೇಶವಿದೆ. ಇಂಜಿನಿಯರಿಂಗ್ ಕಾಲೇಜುಗಳಿಗೆ ಸಂಬಂಧಿಸಿದಂತೆ ಸಿಇಟಿ ಕೌನ್ಸಿಲಿಂಗ್ನ್ನು ಮುಂದೂಡುವ ಪ್ರಶ್ನೆಯೇ ಇಲ್ಲ ಎಂದ-ರು.
ಎಐಸಿಟಿಇಯು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಹೊಸ ಕೋರ್ಸುಗಳನ್ನು ಆರಂಭಿಸಲು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ , ಈ ಗಾಗಲೇ ಕೌನ್ಸಿಲಿಂಗ್ಗೆ ಹಾಜರಾಗಿರುವ ಹಿಂದುಳಿದ ಜಾತಿಯ ವಿದ್ಯಾರ್ಥಿಗಳಿಗೆ ಬೇರೆ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲಾಗುವುದು . ಈ ಕುರಿತ ಜನರಲ್ ಕೌನ್ಸಿಲಿಂಗ್ ಸೆಪ್ಟೆಂಬರ್ ನಾಲ್ಕರಂದು ಆರಂಭವಾಗಲಿದೆ ಎಂದು ಸಚಿ-ವ-ರು ಸ್ಪಷ್ಟ-ಪ-ಡಿ-ಸಿ-ದ-ರು.
ಕರ್ನಾಟಕವು ಹೊಸ ಕೋರ್ಸುಗಳಿಗೆ ಸಂಬಂಧಿಸಿದಂತೆ 1360 ಸೀಟುಗಳಿಗೆ ಅನುಮತಿ ಕೋರಿದೆ. ಕೊನೆಯ ಸುತ್ತಿನ ಆಯ್ಕೆಯಲ್ಲಿ ಹೆಚ್ಚುವರಿ ಸೀಟುಗಳ ಬಗ್ಗೆ ಅಭ್ಯರ್ಥಿಗಳಿಗೆ ತಿಳಿಸಲಾಗುವುದು ಎಂದು ಸಚಿವರು ನುಡಿದರು. ಈ ನಡುವೆ ಕೃಷ್ಣ ದೇವರಾಯ ಡೆಂಟಲ್ ಕಾಲೇಜನ್ನು ಅಲ್ಪಸಂಖ್ಯಾತರ ಸಂಸ್ಥೆ ಎಂದು ಘೋಷಿಸುವುದಕ್ಕೆ ಕ್ಯಾಬಿನೆಟ್ ಸಬ್ ಕಮಿಟಿ ನಿರ್ಧರಿಸಿದೆ ಎಂದೂ ಸಚಿವರು ತಿಳಿಸಿದರು.
ಶಿಕ್ಷಕ ಪ್ರಶಸ್ತಿ : ಮುಂದಿನ ವರ್ಷದಿಂದ ಗ್ರಾಮಪಂಚಾಯತ್ ಮಟ್ಟದಲ್ಲಿ , ಉತ್ತಮ ಶಿಕ್ಷಕ ಪ್ರಶಸ್ತಿಗೆ ಶಿಕ್ಷಕರನ್ನು ಗ್ರಾಮಸ್ಥರೇ ಆಯ್ಕೆ ಮಾಡಬಹುದು ಎಂದು ಪ-ತ್ರಿ-ಕಾ ಗೋಷ್ಠಿ-ಯ-ಲ್ಲಿ ಹಾಜ-ರಿ-ದ್ದ ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಸಚಿವ ಎಚ್ . ವಿಶ್ವನಾಥ್ ಹೇಳಿದರು. ಈ ಬಾರಿ ರಾಜ್ಯ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸೆಪ್ಟೆಂಬರ್ 6ರಂದು ಗುಲ್ಬರ್ಗದಲ್ಲಿ ನಡೆಸಲು ಉದ್ದೇಶಿಸಿದ್ದು, ರಾಜ್ಯ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಪ್ರಶಸ್ತಿಗಳನ್ನು ವಿತರಿಸಲಿದ್ದಾರೆ ಎಂದರು.
(ಯುಎ-ನ್-ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications