ಪೊಲೀಸ್ ಕಾವಲಿನಲ್ಲಿ ಆರಂಭವಾದ ಚಲನಚಿತ್ರ ಮನರಂಜನೆ
ಬೆಂಗಳೂರು : ರಾಜ್ಕುಮಾರ್ ಅಪಹರಣದ ಹಿನ್ನೆಲೆಯಲ್ಲಿ ಕಳೆದ 33 ದಿನಗಳಿಂದ ಮುಚ್ಚಿದ್ದ ಚಿತ್ರಮಂದಿರಗಳು ವಿಘ್ನನಿವಾರಕನಾದ ಗಣಪನ ಪೂಜಿಸಿ, ಯಾವುದೇ ವಿಘ್ನ ಆಗದಂತೆ ಕೋರಿ ಶುಕ್ರವಾರದಿಂದ ಪ್ರದರ್ಶನ ಆರಂಭಿಸಿವೆ.
ಹತ್ತು ಹಲವು ಚಿತ್ರಮಂದಿರಗಳಿರುವ ಗಾಂಧೀನಗರದಲ್ಲಿ ಶುಕ್ರವಾರ ಬೆಳಗ್ಗಿನಿಂದಲೇ ಚಿತ್ರಪ್ರದರ್ಶನ ಆರಂಭಗೊಂಡಿತಾದರೂ, ಪ್ರೇಕ್ಷಕರೇ ಇರಲಿಲ್ಲ. ಕೇವಲ ಬೆರಳೆಣಿಕೆಯಷ್ಟು ಪ್ರೇಕ್ಷಕರಿಗೇ ಪ್ರದರ್ಶನ ನಡೆಸುವಂತಾಯಿತು.
ಕೆಲವು ಚಿತ್ರ ಮಂದಿರಗಳ ಮಾಲಿಕರು, ವಾಣಿಜ್ಯ ಮಂಡಳಿ ಶುಕ್ರವಾರದಿಂದ ಪ್ರದರ್ಶನ ಆರಂಭಿಸುವಂತೆ ತಿಳಿಸಿದ್ದಾಗ್ಯೂ ಕೂಡ ರಾಜ್ಕುಮಾರ್ ಬರುವತನಕ ಚಿತ್ರ ಪ್ರದರ್ಶನ ನಡೆಸದಿರುವ ನಿರ್ಧಾರ ತಳೆದಿದ್ದಾರೆ. ಶುಕ್ರವಾರ ಚಿತ್ರ ಪ್ರದರ್ಶನ ಆರಂಭವಾದರೂ ಕೂಡ, ಗಣೇಶನ ಹಬ್ಬದ ಸಡಗರ ಹಾಗೂ ಗಲಭೆ ಆದೀತೆಂಬ ಭಯದಿಂದ ಪ್ರೇಕ್ಷಕರು ಚಿತ್ರ ಮಂದಿರಗಳ ಕಡೆ ಸುಳಿಯಲೇ ಇಲ್ಲ.
ಚಿತ್ರಪ್ರದರ್ಶನ ಆರಂಭಿಸುವಂತೆ ಮಂಡಳಿಯ ಮೇಲೆ ಒತ್ತಡ ಹೇರಿದ ಪ್ರದರ್ಶಕರು ವಿಧಿ ಇಲ್ಲದೆ ಹಾಗೂ ತಮ್ಮ ಪ್ರತಿಷ್ಠೆಯ ಹಿನ್ನೆಲೆಯಲ್ಲಿ ಚಿತ್ರ ಪ್ರದರ್ಶನ ಆರಂಭಿಸಿಯೇ ಬಿಟ್ಟಿದ್ದಾರೆ. ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ಚಿತ್ರ ಪ್ರದರ್ಶನ ನಡೆಯುತ್ತಿದೆ. ರಾಜ್ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ. ಗೋವಿಂದು ಚಿತ್ರ ಪ್ರದರ್ಶನ ಆರಂಭಿಸಿದ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮುಗಿಬಿದ್ದು ವಿಮೆ: ಈ ವರೆಗೆ ತಮ್ಮ ಚಿತ್ರಮಂದಿರಗಳಿಗೆ ವಿಮೆ ಮಾಡಿಸದಿದ್ದ ಮಾಲಿಕರು, ಶುಕ್ರವಾರ ಚಿತ್ರಪ್ರದರ್ಶನ ಆರಂಭಿಸುವ ಹಿನ್ನೆಲೆಯಲ್ಲಿ, ತಮ್ಮ ಆಸ್ತಿ ಪಾಸ್ತಿಗೆ ಹಾನಿಯಾದೀತೆಂಬ ಭಯದಲ್ಲಿ ಮುಗಿಬಿದ್ದು ವಿಮೆ ಮಾಡಿಸುತ್ತಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications