ಕರ್ನಾಟಕ - ತಮಿಳುನಾಡು ಸರ್ಕಾರದ ಮುಖಕ್ಕೆ ಸುಪ್ರೀಂ ಕೋರ್ಟ್ ಮಂಗಳಾರತಿ
ನವದೆಹಲಿ : ‘ಕಳೆದ ಎಂಟು ವರ್ಷಗಳಿಂದ ಏನು ಮಾಡದೆ ಕೈಕಟ್ಟಿ ಕುಳಿತಿದ್ದಿರಿ. ಈಗ ಜನಪ್ರಿಯ ವ್ಯಕ್ತಿಯಾಬ್ಬರ ಅಪಹರಣ ಆಗಿದೆ ಎಂದು ಕಾರ್ಯೋನ್ಮುಖರಾಗುತ್ತಿದ್ದೀರಾ? ಇದು ನಿಸ್ಸೀಮ ನಿರ್ಲಕ್ಷ್ಯವಲ್ಲದೆ ಮತ್ತೇನೂ ಅಲ್ಲ ’ ಎಂದು ಸುರ್ಪೀಂ ಕೋರ್ಟ್ ತಮಿಳುನಾಡು ಹಾಗೂ ಕರ್ನಾಟಕ ಸರ್ಕಾರಗಳೆರಡನ್ನೂ ಶುಕ್ರವಾರ ತರಾಟೆಗೆ ತೆಗೆದುಕೊಂಡಿತು.
ಸಾರ್ವಜನಿಕ ಸುವ್ಯವಸ್ಥೆ ಕಾಪಾಡಲು ನಿಮಗೆ ಸಾಧ್ಯವಾಗದಿದ್ದರೆ, ನಿಮ್ಮ ಸ್ಥಾನಗಳನ್ನು ತೆರವು ಮಾಡಿ, ಇನ್ನೊಂದು ಉತ್ತಮ ಸರಕಾರ ಅಸ್ತಿತ್ವಕ್ಕೆ ಬಂದು ಸಮಸ್ಯೆಯನ್ನು ಬಗೆಹರಿಸೀತು. ಅಪಹರಣ ಪ್ರಕರಣವನ್ನು ನಿಭಾಯಿಸುವಲ್ಲಿ ನೀವಿಬ್ಬರೂ ಸಂಪೂರ್ಣ ವಿಫಲವಾಗಿದ್ದೀರಿ. ಇಂತಹ ನಿಸ್ಸೀಮ ನಿರ್ಲಕ್ಷ್ಯವನ್ನು ರಾಷ್ಟ್ರದ ಸರ್ವೋನ್ನತ ನ್ಯಾಯಾಲಯ ಸಹಿಸುವುದಿಲ್ಲ ’ ಎಂದು ನ್ಯಾಯಮೂರ್ತಿಗಳಾದ ಎಸ್.ಪಿ. ಬರೂಚ, ಡಿ.ಪಿ. ಮಹಾಪಾತ್ರ ಮತ್ತು ವೈ.ಕೆ. ಸಬರ್ವಾಲ್ ಅವರನ್ನೊಳಗೊಂಡ ತ್ರಿಸದಸ್ಯ ನ್ಯಾಯಪೀಠವು ಕಟು ಶಬ್ದಗಳಲ್ಲಿ ತಿಳಿಸಿದೆ.
ವೀರಪ್ಪನ್ ಸಹಚರರರಿಂದ ಹತ್ಯೆಗೀಡಾದ ಪೊಲೀಸ್ ಅಧಿಕಾರಿ ಶಕೀಲ್ ಅಹ್ಮದ್ ಅವರ ತಂದೆ ಅಬ್ದುಲ್ ಕರೀಂ ಅವರು ರಾಜ್ಯ ಸರಕಾರ ಟಾಡಾ ಆರೋಪಿಗಳ ವಿರುದ್ಧದ ಮೊಕದ್ದಮೆಗಳನ್ನು ಕೈಬಿಡುವ ನಿರ್ಧಾರ ತಳೆದುದರ ವಿರುದ್ಧ ಸರ್ವೋನ್ನತ ನ್ಯಾಯಾಲಯದಲ್ಲಿ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆಯನ್ನು ಶುಕ್ರವಾರ ಕೈಗೆತ್ತಿಕೊಂಡ ಪೀಠವು ತಾನು ಮಂಗಳವಾರ ನೀಡಿದ್ದ ತಡೆಯಾಜ್ಞೆಯನ್ನು ಸ್ಥಿರೀಕರಿಸಿ ತೀರ್ಪು ನೀಡಿತು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications