ಟಾಡಾ ಆರೋಪಿಗಳ ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ನಕಾರ
ಬೆಂಗಳೂರು : 51 ಟಾಡಾ ಬಂದಿತರಿಗೆ ಮೈಸೂರು ನ್ಯಾಯಾಲಯ ನೀಡಿದ್ದ ಜಾಮೀನು ಮಂಜೂರಾತಿಗೆ ಸರ್ವೋಚ್ಚ ನ್ಯಾಯಾಲಯ ಮಂಗಳವಾರ ಕೊಟ್ಟಿದ್ದ ತಡೆಯಾಜ್ಞೆಯನ್ನು ಶುಕ್ರವಾರ ಸ್ಥಿರೀಕರಿಸಿದೆ.
ನ್ಯಾಯಮೂರ್ತಿಗಳಾದ ಎಸ್.ಪಿ. ಬರೂಚ, ಡಿ.ಪಿ. ಮಹಾಪಾತ್ರ ಮತ್ತು ವೈ.ಕೆ. ಸಬರ್ವಾಲ್ ಅವರನ್ನೊಳಗೊಂಡ ತ್ರಿಸದಸ್ಯ ನ್ಯಾಯಪೀಠವು ಮಂಗಳವಾರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಿದ್ದ ತಡೆಯನ್ನು ಮುಂದುವರಿಸಿದ್ದೇ ಅಲ್ಲದೆ, ಮುಂದಿನ ವಿಚಾರಣೆಯನ್ನು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳ ತೀರ್ಮಾನಕ್ಕೆ ಬಿಟ್ಟಿದೆ.
ರಾಜ್ಕುಮಾರ್ ಬಿಡುಗಡೆ ಪ್ರಕ್ರಿಯೆಗೆ ಈ ತೀರ್ಪಿನಿಂದ ಹಿನ್ನಡೆ ಉಂಟಾಗಿದ್ದು, ರಾಜ್ಯ ಸರಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ. ರಾಜ್ ಅಪಹರಣ ಪ್ರಕರಣವನ್ನು ಮತ್ತಾವುದೇ ಜನಾಂಗೀಯ ಘರ್ಷಣೆಗಳಿಗೆ ಅವಕಾಶ ನೀಡದಂತೆ ಸುಸೂತ್ರವಾಗಿ ಬಗೆಹರಿಸಲು ಟೊಂಕಕಟ್ಟಿ ನಿಂತಿದ್ದ ರಾಜ್ಯ ಸರಕಾರಕ್ಕೆ ಈ ತೀರ್ಪಿನಿಂದ ಭಾರಿ ನಿರಾಶೆ ಆಗಿದೆ.
ಎರಡೂ ರಾಜ್ಯಗಳು ವೀರಪ್ಪನ್ ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ಶಕ್ತಿಮೀರಿ ಪ್ರಯತ್ನಗಳನ್ನು ನಡೆಸಿದ್ದರೂ, ಸುಪ್ರೀಂ ಕೋರ್ಟ್ ತೀರ್ಪಿನಿಂದಾಗಿ ಈ ಎಲ್ಲ ಪ್ರಯತ್ನಗಳೂ ನಿಶ್ಫಲವಾಗಿವೆ. ಈ ತೀರ್ಪಿಗೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು, ಟಾಡಾ ಬಂದಿಗಳ ಬಿಡುಗಡೆ, ರಾಜ್ಯ ಸರಕಾರದ ಕೈಮೀರಿ ಹೋಗಿರುವುದರಿಂದ ಹಾಗೂ ನಾವು ಈವರೆಗೆ ಕೈಗೊಂಡಿರುವ ಕ್ರಮಗಳನ್ನು ಅರ್ಥೈಸಿಕೊಂಡು ರಾಜ್ಕುಮಾರ್ ಹಾಗೂ ಇತರರನ್ನು ಬಿಡುಗಡೆ ಮಾಡುವಂತೆ ಗೋಪಾಲ್ ಅವರು ವೀರಪ್ಪನ್ ಮನವೊಲಿಸಲಿದ್ದಾರೆ ಎಂದೂ ಹೇಳಿದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications