ರಾಜ್ ಬಿಡುಗಡೆ: ಅಗತ್ಯ ಬಿದ್ದರೆ ಪ್ರಧಾನಿ ಬಳಿಗೆ ಕೃಷ್ಣ
ಬೆಂಗಳೂರು : ರಾಜ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಬಿದ್ದರೆ, ಪ್ರಧಾನಿ ವಾಜಪೇಯಿ ಅವರು ಅಮೆರಿಕಕ್ಕೆ ತೆರಳುವ ಮೊದಲೇ, ರಾಜ್ಯದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಪ್ರಧಾನಿ ಅವರನ್ನು ಸಂಪರ್ಕಿಸುವ ಸಾಧ್ಯತೆ ಇದೆ ಎಂದು ರಾಜ್ಯದ ಹಿರಿಯ ಸಚಿವರೊಬ್ಬರು ತಿಳಿಸಿದ್ದಾರೆ.
ಸರ್ವೋಚ್ಚ ನ್ಯಾಯಾಲಯ ಟಾಡಾ ಬಂದಿಗಳ ಬಿಡುಗಡೆ ಸಂಬಂಧ ರಾಜ್ಯದ ಮನವಿಯನ್ನು ತಿರಸ್ಕರಿಸಿರುವ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ನಡೆದ ಸರ್ವಪಕ್ಷಗಳ ಸಭೆಯ ನಂತರ ಮಾತನಾಡಿದ ಸಚಿವರೊಬ್ಬರು ಈ ವಿಷಯ ತಿಳಿಸಿದ್ದಾರೆ. ಅಗತ್ಯಬಿದ್ದರೆ ಮುಂದಿನ ವಾರವೇ ಮತ್ತೊಂದು ಸರ್ವಪಕ್ಷ ಸಭೆಯನ್ನು ಕೃಷ್ಣ ಕರೆಯುವರು ಎಂದೂ ಅವರು ಹೇಳಿದರು.
ರಾಜ್ಕುಮಾರ್ ಹಾಗೂ ಇತರ ಮೂವರು ಒತ್ತೆಯಾಳುಗಳನ್ನು ಬಿಡಿಸಿಕೊಳ್ಳಲು ಕೇಂದ್ರ ಸರಕಾರದ ನೆರವನ್ನು ಪಡೆಯುವಂತೆ ಸರ್ವ ಪಕ್ಷಗಳ ಸಭೆಯಲ್ಲಿ ಸಲಹೆ ಬರಲಿಲ್ಲ ಎಂದೂ ಅವರು ತಿಳಿಸಿದ್ದಾರೆ. ಈ ಸಭೆಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಯು ಹಾಗೂ ಜೆಡಿಎಸ್ನ ಹಿರಿಯ ಸದಸ್ಯರು ಭಾಗವಹಿಸಿದ್ದರು.
ಸಭೆಯ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಜೆಡಿಯು ನಾಯಕ ಪಿ.ಜಿ.ಆರ್ ಸಿಂಧ್ಯಾ ಅವರು, ಸರ್ವಪಕ್ಷ ಸಭೆಯಲ್ಲಿ ಅಂತ ಹೇಳಿಕೊಳ್ಳುವ ಯಾವುದೇ ಮಹತ್ವದ ಸಲಹೆ ಬರಲಿಲ್ಲ. ನಾವು ಸಭೆಯಲ್ಲಿ ಪಾಲ್ಗೊಂಡಿದ್ದರಿಂದ ಸಭೆಯ ನಿರ್ಣಯಗಳನ್ನು ಗೌರವಿಸುತ್ತೇವೆ. ಆದರೆ, ಸರ್ಕಾರದ ಧೋರಣೆಗಳ ಬಗ್ಗೆ ಬೇಸರ ಮೂಡಿದೆ ಎಂದೂ ಅವರು ಹೇಳಿದರು. ಈ ಸಂದರ್ಭದಲ್ಲಿ ಪ್ರತಿಪಕ್ಷದ ಧುರೀಣ ಚೆನ್ನಿಗಪ್ಪ ಸಹ ಇದ್ದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications