ಕೆ.ಆರ್.ಎಸ್.ನಲ್ಲಿ ಪೂಜೆಗೂ ಪೈಪೋಟಿ
ಬೆಂಗಳೂರು : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನೆರೆ ಹಾವಳಿಯಿಂದ ಉಂಟಾಗಿರುವ ಹಾನಿ ಸರಿಪಡಿಸಲು ಹಾಗೂ ಪರಿಹಾರ ನೀಡಲು ಸಚಿವ ಸಂಪುಟ ತಾತ್ಕಾಲಿಕ ಪರಿಹಾರ ಬಿಡುಗಡೆ ಮಾಡಿದೆ. ಇತ್ತ ಕಾವೇರಿ ಜಲಾನಯನ ಪ್ರದೇಶದ ಎಲ್ಲ ಜಲಾಶಯಗಳೂ ಭರ್ತಿಯಾಗಿವೆ.
ಲಿಂಗನಮಕ್ಕಿ ಜಲಾಶಯದ ಒಳಹರಿವು ಹೆಚ್ಚಿದ್ದು, ಹೆಚ್ಚುವರಿ ನೀರನ್ನು ಹೊರಬಿಡಲಾಗುತ್ತಿದೆ. ಕೆಳದಂಡೆಯ ಜನರಿಗೆ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ. ಕೆಲವೇ ತಿಂಗಳುಗಳ ಹಿಂದೆ ಮಳೆಯಿಲ್ಲದೆ ಬರಿದಾಗಿ ವೇಣುಗೋಪಾಲ ದೇವಾಲಯದ ದರ್ಶನ ನೀಡಿದ್ದ, ಕೆ.ಆರ್.ಎಸ್. ಈಗ ಭರ್ತಿಯಾಗಿದೆ. ಕಾವೇರಿ ಪೂಜೆ ಮಾಡಲು ರಾಜಕೀಯ ಪಕ್ಷಗಳು ಪೈಪೋಟಿಗೆ ನಿಂತಿವೆ. ಕಾವೇರಿಗೆ ಮೊರದ ಬಾಗಿನ ನೀಡುವವರ ಸಂಖ್ಯೆಯೂ ಹೆಚ್ಚಿದೆ.
ಕಬಿನಿ, ಹಾರಂಗಿ, ತುಂಗಭದ್ರಾ, ಮಲಪ್ರಭಾ, ಘಟಪ್ರಭಾ ಜಲಾಶಯಗಳೆಲ್ಲ ಭರ್ತಿಯಾಗಿವೆ. ಈ ಮಧ್ಯೆ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಉತ್ತರ ಒಳನಾಡಿನಲ್ಲಿ ಮಳೆ ದುರ್ಬಲವಾಗಿತ್ತು. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕವಾಗಿ ಮಳೆ ಸುರಿದಿದೆ.
ಆಗುಂಬೆಯಲ್ಲಿ 4, ಮೂಡಿಬಿದ್ರೆ, ಕಮ್ಮರಡಿಗಳಲ್ಲಿ 3, ಕಾರ್ಕಳ, ಸುಬ್ರಹ್ಮಣ್ಯ, ಕಳಸ, ಕಾರವಾರ, ಚೆನ್ನಪಟ್ಟಣ, ಬಿಜಾಪುರ, ನಾಪೋಕ್ಲುವಿನಲ್ಲಿ ತಲಾ 1 ಸೆಂಟಿ ಮೀಟರ್ ಮಳೆ ಬಿದ್ದಿದೆ. ಗುರುವಾರದ ವರೆಗಿನ ಮುನ್ಸೂಚನೆಯಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಕರ್ನಾಟಕದಲ್ಲಿ ವ್ಯಾಪಕವಾಗಿ ಮಳೆ ಬೀಳುವ ಸಂಭವ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆ ಮಳೆ ನಿರೀಕ್ಷಿತ ಎಂದು ಹವಾಮಾನ ಇಲಾಖೆ ಹೇಳಿದೆ.
ಸ್ಥಳೀಯ ಮುನ್ಸೂಚನೆಯಂತೆ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಒಣ ಹವೆ ಇದ್ದು, ಸಂಜೆ ಅಥವಾ ರಾತ್ರಿ ಒಂದೆರಡು ಬಾರಿ ಹಗುರದಿಂದ ಸಾಧಾರಣ ಮಳೆ ಬೀಳಲಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications